Webdunia - Bharat's app for daily news and videos

Install App

ಮನ್ದೀಪ್ ಸಿಂಗ್ ಹತ್ಯೆಗೆ ಪ್ರತೀಕಾರ: 1 ತಲೆಗೆ 10ಲ್ಲ 40 ರುಂಡ ಚೆಂಡಾಡಿದ ಸೇನೆ

Webdunia
ಶನಿವಾರ, 5 ನವೆಂಬರ್ 2016 (12:53 IST)
ಯೋಧ ಮನ್ದೀಪ್ ಸಿಂಗ್ ಅವರ ಕ್ರೂರವಾಗಿ ಹತ್ಯೆಗೆ ಪ್ರತೀಕಾರವನ್ನು ತೆಗೆದುಕೊಳ್ಳಬೇಕು. ಒಂದು ತಲೆಗೆ ಬದಲಾಗಿ ನಾವು 10 ತಲೆಯನ್ನು ಬಯಸುತ್ತೇವೆ ಎಂದು ಹುತಾತ್ಮ ಯೋಧನ ಪರಿವಾರ ಹೇಳಿತ್ತು. ಅವರ ಈ ಬೇಡಿಕೆಯನ್ನು ಈಡೇರಿಸಲಾಗಿದೆಯೇ? ಪ್ರತೀಕಾರ ಕೈಗೊಳ್ಳಲಾಗಿದೆಯೇ? ಹೌದೆನ್ನುತ್ತದೆ ರಾಷ್ಟ್ರೀಯ ಪತ್ರಿಕೆಯೊಂದರಲ್ಲಿ ಬಂದ ವರದಿ.
ಹುತಾತ್ಮ ಸೈನಿಕನ ಹತ್ಯೆಗೆ ಪ್ರತೀಕಾರವಾಗಿ ಭಾರತೀಯ ಸೇನೆ ಅಕ್ಟೋಬರ್ 29 ರಂದು ಪಾಕಿಸ್ತಾನದ ನಾಲ್ಕು ಸೇನಾನೆಲೆಗಳನ್ನು ನಾಶಗೊಳಿಸಿ ಕನಿಷ್ಠ 40 ವೈರಿ ಸೈನಿಕರನ್ನು ಹೊಡೆದುರುಳಿಸಿದೆ. 
 
ಅಕ್ಟೋಬರ್ 28 ರಂದು ಯೋಧ ಮನ್‌ದೀಪ್‌ ಸಿಂಗ್‌ ರನ್ನು ಹತ್ಯೆ ಮಾಡಿ ಆತನ ದೇಹವನ್ನು ತುಂಡು ತುಂಡಾಗಿ ಕತ್ತರಿಸಿದ್ದ ಪಾಕಿಸ್ತಾನಕ್ಕೆ ಮರು ದಿನವೇ ಭಾರತೀಯ ಸೇನೆ ಕಾರ್ಯಾಚರಣೆ 4 ಸೇನಾ ನೆಲೆಗಳನ್ನು ಧ್ವಂಸಗೊಳಿಸುವ ಮೂಲಕ ತಕ್ಕ ಪಾಠ ಕಲಿಸಿದೆ.
 
ಅಕ್ಟೋಬರ್ 28 ರಂದು ಸೇನೆಯ ಸಹಾಯದಿಂದ ಉಗ್ರರು ಭಾರತೀಯ ಯೋಧ ಮನ್ದೀಪ್ ಸಿಂಗ್ ಅವರನ್ನು ಹತ್ಯೆ ಮಾಡಿ ದೇಹವನ್ನು ತುಂಡು ತುಂಡಾಗಿಸಿದ್ದರು. ಕುಪ್ವಾರಾ ಜಿಲ್ಲೆಯ ಮಚ್ಚಿ ಸೆಕ್ಟರ್‌ನಲ್ಲಿ ನಡೆಸಿದ್ದ ಈ ಪೈಶಾಚಿಕ ಕೃತ್ಯ ಸಂಪೂರ್ಣ ದೇಶವನ್ನು ಬೆಚ್ಚಿ ಬೀಳಿಸಿತ್ತು. ಸಿಂಗ್ ಹತ್ಯೆಗೆ ಬದಲಾಗಿ 10 ಪಾಕ್ ಸೈನಿಕರ ಹತ್ಯೆಗೈಯ್ದು ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಬೇಕು ಎಂದು ಅವರ ಪರಿವಾರ ಆಗ್ರಹಿಸಿತ್ತು. ಅಂತೆಯೇ ಭಾರತೀಯ ಸೇನೆ ಸದ್ದಿಲ್ಲದೇ ಪ್ರತೀಕಾರವನ್ನು ತೆಗೆದುಕೊಂಡಿದೆ 10 ಲ್ಲ 40 ತಲೆಗಳನ್ನು ಚೆಂಡಾಡಿದೆ ಎಂದು ವರದಿಯಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಪರೇಷನ್ ಸಿಂಧೂರ್‌ ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ, ಭಾರತದ ಪ್ರತಿಬಿಂಬ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

ನಾಲ್ಕನೇ ಅತಿದೊಡ್ಡ ಆರ್ಥಿಕತೆಯ ರಾಷ್ಟ್ರವಾಗಿ ಭಾರತ: ಐದನೇ ಸ್ಥಾನಕ್ಕೆ ಜಾರಿದ ಜಪಾನ್‌

ಜಗಳ ವಿಕೋಪಕ್ಕೆ ತಿರುಗಿ ಮದುವೆ ವರನನ್ನೇ ಎತ್ತಾಕಿಕೊಂಡು ಹೋದ ನೃತ್ಯ ತಂಡದವರು

ಇಂದಿನಿಂದ ರಾಜ್ಯದಲ್ಲಿ ಕೋವಿಡ್​ ಟೆಸ್ಟಿಂಗ್ ಲ್ಯಾಬ್​ಗಳು ಓಪನ್: ಜನನಿಬಿಡ ಪ್ರದೇಶದಲ್ಲಿ ಮಾಸ್ಕ್‌ ಧರಿಸಲು ಸಲಹೆ

ಆಪರೇಷನ್ ಸಿಂಧೂರ್‌ನಿಂದ ಪಾಕ್‌ ಗಡಿಯಲ್ಲಿ ಪ್ರತಿ ಹೆಜ್ಜೆಯಿಡುವಾಗಲೂ ಯೋಚಿಸುವಂತೆ ಮಾಡಿದೆ: ಶಶಿ ತರೂರ್‌

ಮುಂದಿನ ಸುದ್ದಿ
Show comments