Webdunia - Bharat's app for daily news and videos

Install App

'ಕರ್ಮ ಪೂಜೆ'ಯ ವೇಳೆ ಕೆರೆಗಿಳಿದ ಏಳು ಬಾಲಕಿಯರು ಸಾವು

Webdunia
ಭಾನುವಾರ, 19 ಸೆಪ್ಟಂಬರ್ 2021 (10:57 IST)
ರಾಂಚಿ : ಜಾರ್ಖಂಡ್ ನ ಲತೇಹಾರ್ ಜಿಲ್ಲೆಯ ಬಾಲುಮಠದಲ್ಲಿ ಶನಿವಾರ ಕರ್ಮ ಪೂಜೆಯ ಬಳಿಕ ನೀರಿನಲ್ಲಿ ಇಳಿದ ಸಂದರ್ಭದಲ್ಲಿ ನೀರಿನಲ್ಲಿ ಮುಳುಗಿ 12 ರಿಂದ 20 ವರ್ಷ ವಯಸ್ಸಿನ ಏಳು ಹುಡುಗಿಯರು ಮೃತಪಟ್ಟಿದ್ದಾರೆ. ಸತ್ತವರಲ್ಲಿ ಆರು ಮಂದಿ ಒಂದೇ ಕುಟುಂಬಕ್ಕೆ ಸೇರಿದವರು.
Photo Courtesy: Google

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ದುರಂತ ಅಪಘಾತದ ಬಗ್ಗೆ 'ಆಘಾತ' ವ್ಯಕ್ತಪಡಿಸಿದ್ದಾರೆ.
ಜಾರ್ಖಂಡ್ ನ ಪ್ರಮುಖ ಹಬ್ಬವಾದ ಕರ್ಮ ಪೂಜಾ ನಂತರ ಹುಡುಗಿಯರು ಕೊಳಕ್ಕೆ ಹೋಗಿದ್ದಾಗ ಬಾಲುಮಠ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶೆರೆಗಡ ವ್ಯಾಪ್ತಿಯ ಬುಕ್ರು ಗ್ರಾಮದ ಮನಂದಿಹ್ ತೋಲಾದಲ್ಲಿ ಈ ದುರಂತ ನಡೆದಿದೆ. ದುರಂತ ಘಟನೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಆಘಾತ ವ್ಯಕ್ತಪಡಿಸಿದ್ದಾರೆ.
ಕರ್ಮಪೂಜೆ ಬಳಿಕ ಪೂಜಾ ಸಾಮಗ್ರಿ ವಿಸರ್ಜನೆಗೆ ಕೆರೆಗೆ ಇಳಿದಿದ್ದಾಗ ದುರಂತ ಸಂಭವಿಸಿದೆ. 10 ಬಾಲಕಿಯರು 'ಕರ್ಮ ದಾಲಿ' ವಿಸರ್ಜನೆಗೆ ಕೆರೆಗೆ ತೆರಳಿದ್ದ ವೇಳೆ ಒಬ್ಬಾಕೆ ಕಾಲು ಜಾರಿ ನೀರಿನಲ್ಲಿ ಬಿದ್ದಾಗ ರಕ್ಷಿಸಲು ಹೋದ ಉಳಿದವರೂ ಒಬ್ಬೊಬ್ಬರಾಗಿ ನೀರಿನ ಸೆಳೆತಕ್ಕೆ ಸಿಕ್ಕಿ ಮುಳುಗಿದ್ದಾರೆ. ಬಲುಮಠ್ ಪೊಲೀಸ್ ಠಾಣೆ ವ್ಯಾಪ್ತಿಯ ಬುಕ್ರು ಗ್ರಾಮದಲ್ಲಿ ಘಟನೆ ನಡೆದಿದೆ.
ಜಾರ್ಖಂಡ್ ಮುಖ್ಯಮಂತ್ರಿ ಹೇಮತ್ ಸೊರೇನ್ ಅವರು ಘಟನೆಯ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments