Webdunia - Bharat's app for daily news and videos

Install App

ಗಂಡನ ಎದುರೇ ಪ್ರಿಯಕರನೊಂದಿಗೆ ಪತ್ನಿ ಸೆಕ್ಸ್! ಮುಂದೇನಾಯ್ತು?

Webdunia
ಶುಕ್ರವಾರ, 6 ಮೇ 2022 (08:40 IST)
ಹೈದರಾಬಾದ್ : ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಪತಿಯೇ ಪತ್ನಿ ಮತ್ತು ಆಕೆಯ ಪ್ರಿಯಕರನ ಹತ್ಯೆಗೈದಿರುವ ಘಟನೆ ತೆಲಂಗಾಣದ ಹೈದರಾಬಾದ್ನ ರಾಚಕೊಂಡದಲ್ಲಿ ನಡೆದಿದೆ.

ಕಾರು ಚಾಲಕನಾಗಿದ್ದ ಯಶವಂತ್ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದ ಪತ್ನಿಗೆ ಎಷ್ಟು ಬಾರಿ ತಿಳುವಳಿಕೆ ಹೇಳಿದರೂ ಕೇಳದ ಹಿನ್ನೆಲೆ ಅವಮಾನ ಅನುಭವಿಸಿ ಆರೋಪಿ ಈ ಕೃತ್ಯ ಎಸಗಿದ್ದಾನೆ. ಇದೀಗ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಎಲ್ಬಿ ನಗರದ ಉಪ ಪೊಲೀಸ್ ಆಯುಕ್ತ ಸನ್ಪ್ರೀತ್ ಸಿಂಗ್ ತಿಳಿಸಿದ್ದಾರೆ.

ವಿಜಯವಾಡದಿಂದ ಹೈದರಾಬಾದ್ಗೆ ಮಹಿಳೆ ಮತ್ತು ಆಕೆಯ ಕುಟುಂಬಸ್ಥರು ಶಿಫ್ಟ್ ಆಗಿದ್ದರು. ಈ ವೇಳೆ ತನ್ನ ಪತ್ನಿಗೆ ಯಶವಂತ್ ಪರಿಚಯವಾಗಿ ನಂತರ ಇಬ್ಬರ ನಡುವೆ ಅಕ್ರಮ ಸಂಬಂಧ ಶುರುವಾಗಿತ್ತು. ಈ ವಿಚಾರ ತಿಳಿದು ನಿರಾಕರಿಸಿ ಆರೋಪಿ ತನ್ನ ಪತ್ನಿಗೆ ಅನೇಕ ಬಾರಿ ಬುದ್ಧಿವಾದ ಹೇಳಿದ್ದಾನೆ.

ಆದರೆ ಆಕೆ ಪತಿಯನ್ನೇ ಬಿಟ್ಟು ಹೋಗುವುದಾಗಿ ಬೆದರಿಕೆ ಹಾಕಿದ್ದಾಳೆ. ನಂತರ ಆರೋಪಿ ಮತ್ತೆ ವಿಜಯವಾಡಕ್ಕೆ ಹಿಂತಿರುಗುವುದಾಗಿ ಹೆಂಡತಿ ಬಳಿ ಪ್ರಸ್ತಾಪಿಸಿದಾಗ ಆಕೆ ಕೂಡ ಒಪ್ಪಿಕೊಂಡಿದ್ದಳು. ಆದರೆ ಜೊತೆಯಲ್ಲಿ ಯಶವಂತ್ನನ್ನು ಸಹ ತಮ್ಮೊಂದಿಗೆ ಕರೆದುಕೊಂಡು ಹೋಗಬೇಕೆಂದು ಕೇಳಿಕೊಂಡಿದ್ದಳು. ಇದೇ ವೇಳೆ ಆರೋಪಿ ಕೊಲ್ಲಲು ಪ್ಲಾನ್ ಮಾಡಿದ್ದನು. 

ಕೋಪಗೊಂಡ ಆರೋಪಿ ಬಂಡೆಕಲ್ಲುಗಳಿಂದ ಇಬ್ಬರಿಗೂ ಹೊಡೆದು ಸ್ಕ್ರೂಡ್ರೈವರ್ನಿಂದ ಇರಿದಿದ್ದಾನೆ. ಇದರಿಂದಾಗಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಮೃತದೇಹಗಳನ್ನು ಜನನಿಬಿಡ ಪ್ರದೇಶದಲ್ಲಿ ಬಿಟ್ಟು ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Kerala cargo Ship fire: ಬೇಪೂರ್ ಹಡಗು ಅಗ್ನಿ ದುರಂತ 18 ಮಂದಿ ರಕ್ಷಣೆ video

Karnataka Weather: ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆ, ಹವಾಮಾನ ಇಲಾಖೆಯ ಎಚ್ಚರಿಕೆ ಗಮನಿಸಿ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

ಮುಂದಿನ ಸುದ್ದಿ