Select Your Language

Notifications

webdunia
webdunia
webdunia
webdunia

ವಿವಾಹವಾಗಲು ನಿರಾಕರಿಸಿದ ವೇಶ್ಯೆಯನ್ನು ಬರ್ಬರವಾಗಿ ಕೊಂದ ಆರೋಪಿ

ವಿವಾಹವಾಗಲು ನಿರಾಕರಿಸಿದ ವೇಶ್ಯೆಯನ್ನು ಬರ್ಬರವಾಗಿ ಕೊಂದ ಆರೋಪಿ
ರಾಜ್‌ಕೋಟ್ , ಮಂಗಳವಾರ, 20 ಸೆಪ್ಟಂಬರ್ 2016 (15:16 IST)
ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಮಹಿಳೆಯೊಬ್ಬಳು ವಿವಾಹವಾಗಲು ನಿರಾಕರಿಸಿದ್ದಕ್ಕಾಗಿ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದು ಹತ್ಯೆ ಮಾಡಿದ ದಾರುಣ ಘಟನೆ ವರದಿಯಾಗಿದೆ.
 
ನಗರದ ಭಾವನಗರ್ ರಸ್ತೆಯಲ್ಲಿರುವ ಸಹದೇವ್ ಗೋಸ್ವಾಮಿಯವರ ಮನೆಯಲ್ಲಿ ಬಾಡಿಗೆ ಮನೆ ಪಡೆದಿದ್ದ ಮೊಹಿದಾ ಖಾತುಂ ಎನ್ನುವ ಮಹಿಳೆ, ಮನೆಯಲ್ಲಿಯೇ ವೇಶ್ಯಾವಾಟಿಕೆ ನಡೆಸುತ್ತಿದ್ದಳು ಎನ್ನಲಾಗಿದೆ. 
 
ಮೊಹಿದಾ ಮನೆಗೆ ಪ್ರತಿದಿನ ಭೇಟಿ ನೀಡುತ್ತಿದ್ದ ಜಾಮ್‌ನಗರ್ ನಿವಾಸಿಯಾದ 25 ವರ್ಷ ವಯಸ್ಸಿನ ಜಯದೀಪ್ ಸೆಟ್ಟಾ, ಮಹಿಳೆಯನ್ನು ವಿವಾಹವಾಗಲು ಒತ್ತಾಯಿಸುತ್ತಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ. 
 
ಪೊಲೀಸ್ ಮೂಲಗಳ ಪ್ರಕಾರ, ನಿನ್ನೆ ತನ್ನನ್ನು ಮದುವೆಯಾಗುವಂತೆ ಜಯದೀಪ್ ಸೆಟ್ಟಾ ಮಹಿಳೆ ಖಾತುಂಗೆ ಪ್ರಸ್ತಾವನೆ ಸಲ್ಲಿಸಿದ್ದ. ಆದರೆ, ಆಕೆ ತಿರಸ್ಕರಿಸಿದ್ದರಿಂದ ಚಾಕುವಿನಿಂದ ಇರಿದು ಹತ್ಯೆ ಮಾಡಿ ಪರಾರಿಯಾಗಲು ಪ್ರಯತ್ನಿಸಿದ. ಮನೆಯ ಮಾಲೀಕ ಗೋಸ್ವಾಮಿ ಆರೋಪಿ ಸೆಟ್ಟಾನನ್ನು ಹಿಡಿಯಲು ಯತ್ನಿಸಿದರೂ ಪ್ರಯೋಜನವಾಗಲ್ಲಿಲ್ಲ. ಆರೋಪಿ ಪರಾರಿಯಾಗುವಲ್ಲಿ ಯಶಸ್ವಿಯಾಗಿದ್ದ. ನಂತರ ಸರಕಾರಿ ಆಸ್ಪತ್ರೆಗೆ ಬಂದು ದಾಖಲಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
 
ಆರೋಪಿ ಜಯದೀಪ್ ಸುಮಾರು ಒಂದುವರೆ ವರ್ಷಗಳ ಕಾಲ ಆಕೆಯ ಪ್ರೀತಿಯ ಬಲೆಗೆ ಬಿದ್ದಿದ್ದ. ಆದರೆ, ಆಕೆ, ಅತನ ಪ್ರಸ್ತಾವನೆ ತಿರಸ್ಕರಿಸಿದ್ದರಿಂದ ಹತ್ಯೆ ಮಾಡಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಎಸ್‌.ಎನ್.ನಾಯ್ಡು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದ ರೈತರಿಗೆ 'ಮಣ್ಣು ತಿನ್ನುವ ಭಾಗ್ಯ' ನೀಡಿದ ಸರಕಾರ: ಬಿಜೆಪಿ ಆಕ್ರೋಶ