Webdunia - Bharat's app for daily news and videos

Install App

ವಿವಾಹವಾಗಲು ನಿರಾಕರಿಸಿದ ವೇಶ್ಯೆಯನ್ನು ಬರ್ಬರವಾಗಿ ಕೊಂದ ಆರೋಪಿ

Webdunia
ಮಂಗಳವಾರ, 20 ಸೆಪ್ಟಂಬರ್ 2016 (15:16 IST)
ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಮಹಿಳೆಯೊಬ್ಬಳು ವಿವಾಹವಾಗಲು ನಿರಾಕರಿಸಿದ್ದಕ್ಕಾಗಿ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದು ಹತ್ಯೆ ಮಾಡಿದ ದಾರುಣ ಘಟನೆ ವರದಿಯಾಗಿದೆ.
 
ನಗರದ ಭಾವನಗರ್ ರಸ್ತೆಯಲ್ಲಿರುವ ಸಹದೇವ್ ಗೋಸ್ವಾಮಿಯವರ ಮನೆಯಲ್ಲಿ ಬಾಡಿಗೆ ಮನೆ ಪಡೆದಿದ್ದ ಮೊಹಿದಾ ಖಾತುಂ ಎನ್ನುವ ಮಹಿಳೆ, ಮನೆಯಲ್ಲಿಯೇ ವೇಶ್ಯಾವಾಟಿಕೆ ನಡೆಸುತ್ತಿದ್ದಳು ಎನ್ನಲಾಗಿದೆ. 
 
ಮೊಹಿದಾ ಮನೆಗೆ ಪ್ರತಿದಿನ ಭೇಟಿ ನೀಡುತ್ತಿದ್ದ ಜಾಮ್‌ನಗರ್ ನಿವಾಸಿಯಾದ 25 ವರ್ಷ ವಯಸ್ಸಿನ ಜಯದೀಪ್ ಸೆಟ್ಟಾ, ಮಹಿಳೆಯನ್ನು ವಿವಾಹವಾಗಲು ಒತ್ತಾಯಿಸುತ್ತಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ. 
 
ಪೊಲೀಸ್ ಮೂಲಗಳ ಪ್ರಕಾರ, ನಿನ್ನೆ ತನ್ನನ್ನು ಮದುವೆಯಾಗುವಂತೆ ಜಯದೀಪ್ ಸೆಟ್ಟಾ ಮಹಿಳೆ ಖಾತುಂಗೆ ಪ್ರಸ್ತಾವನೆ ಸಲ್ಲಿಸಿದ್ದ. ಆದರೆ, ಆಕೆ ತಿರಸ್ಕರಿಸಿದ್ದರಿಂದ ಚಾಕುವಿನಿಂದ ಇರಿದು ಹತ್ಯೆ ಮಾಡಿ ಪರಾರಿಯಾಗಲು ಪ್ರಯತ್ನಿಸಿದ. ಮನೆಯ ಮಾಲೀಕ ಗೋಸ್ವಾಮಿ ಆರೋಪಿ ಸೆಟ್ಟಾನನ್ನು ಹಿಡಿಯಲು ಯತ್ನಿಸಿದರೂ ಪ್ರಯೋಜನವಾಗಲ್ಲಿಲ್ಲ. ಆರೋಪಿ ಪರಾರಿಯಾಗುವಲ್ಲಿ ಯಶಸ್ವಿಯಾಗಿದ್ದ. ನಂತರ ಸರಕಾರಿ ಆಸ್ಪತ್ರೆಗೆ ಬಂದು ದಾಖಲಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
 
ಆರೋಪಿ ಜಯದೀಪ್ ಸುಮಾರು ಒಂದುವರೆ ವರ್ಷಗಳ ಕಾಲ ಆಕೆಯ ಪ್ರೀತಿಯ ಬಲೆಗೆ ಬಿದ್ದಿದ್ದ. ಆದರೆ, ಆಕೆ, ಅತನ ಪ್ರಸ್ತಾವನೆ ತಿರಸ್ಕರಿಸಿದ್ದರಿಂದ ಹತ್ಯೆ ಮಾಡಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಎಸ್‌.ಎನ್.ನಾಯ್ಡು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ