Webdunia - Bharat's app for daily news and videos

Install App

ಟಿವಿ ವರದಿಗಾರನಿಂದ ಪತ್ರಕರ್ತೆಗೆ ಲೈಂಗಿಕ ಕಿರುಕುಳ

Webdunia
ಶನಿವಾರ, 8 ಡಿಸೆಂಬರ್ 2018 (07:09 IST)
ನವದೆಹಲಿ : ಟಿವಿ ವರದಿಗಾರನೊಬ್ಬ ಪತ್ರಕರ್ತೆ ಮಹಿಳೆಯೊಬ್ಬಳನ್ನು ಅಪಹರಿಸಿ ಆಕೆಗೆ ದೈಹಿಕ ಹಾಗೂ  ಲೈಂಗಿಕ ಕಿರುಕುಳ ನೀಡಿದ ಆರೋಪವೊಂದು ಕೇಳಿಬಂದಿದೆ.


ರಿಪಬ್ಲಿಕ್ ಟಿವಿಯ ಅಸ್ಸಾಂ ಪ್ರತಿನಿಧಿ ಅನಿರುದ್ಧ್ ಬಕತ್ ಎಂಬುವವರು ಗುವಾಹಟಿ ಮೂಲದ ಪತ್ರಕರ್ತೆಯೊಬ್ಬಳನ್ನು ಅಪಹರಿಸಿ ಜೋಯ್‌ನಗರದಲ್ಲಿರುವ ಮನೆಯೊಂದರಲ್ಲಿ ಕೂಡಿ ಹಾಕಿ ಆಕೆಗೆ ದೈಹಿಕ ಹಾಗೂ  ಲೈಂಗಿಕ ಕಿರುಕುಳ ನೀಡಿದ್ದಾರೆ. ನಂತರ ಆಕೆಯ ಸಹೋದ್ಯೋಗಿಗಳು ಆಕೆಯನ್ನು ರಕ್ಷಿಸಿದ್ದಾರೆ.


ಈ ಘಟನೆಗೆ ಸಂಬಂಧಿಸಿದಂತೆ ಪತ್ರಕರ್ತೆ ಬಕತ್ ವಿರುದ್ಧ ಗುವಾಹಟಿಯ ದಿಸ್ಪುರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ. ಈ ಹಿನ್ನಲೆಯಲ್ಲಿ ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354, 341, 392, 323,506 ಮತ್ತು 34ರ ಅಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.


ಆದರೆ ಬಂಧನದ ಎರಡು ದಿನಗಳ ನಂತರ ಆರೋಪಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಈ ಬಗ್ಗೆ ಪ್ರತಿಕ್ರಿಯಿಸಿದ ಸಂತ್ರಸ್ತೆ ಪೊಲೀಸರು ಹೊರಗಿನ ಒತ್ತಡಕ್ಕೆ ಒಳಗಾಗಿ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸದೆಯೇ ಬಿಡುಗಡೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ