Webdunia - Bharat's app for daily news and videos

Install App

ಲೈಂಗಿಕ ಕಿರುಕುಳ ಆರೋಪ: ರಾಜ್ಯಪಾಲ ರಾಜೀನಾಮೆ

Webdunia
ಶುಕ್ರವಾರ, 27 ಜನವರಿ 2017 (09:09 IST)
ಲೈಂಗಿಕ ಕಿರುಕುಳ ನೀಡಿದ ಆರೋಪವನ್ನೆದುರಿಸುತ್ತಿರುವ ಮೇಘಾಲಯ ರಾಜ್ಯಪಾಲ ವಿ. ಷಣ್ಮುಗನಾಥನ್ (67) ಗುರುವಾರ ರಾತ್ರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. 

ಸಂವಿಧಾನಾತ್ಮಕ ಹುದ್ದೆಯ ಗೌರವವನ್ನುಳಿಸಲು ಷಣ್ಮುಗನಾಥನ್  ಅವರನ್ನು ವಜಾ ಮಾಡಬೇಕೆಂದು ರಾಜಭವನದ ಒಂದು ಗುಂಪು ಒತ್ತಾಯಿಸಿದ ಹಿನ್ನೆಲೆಯಲ್ಲಿ ಅವರು ಈ ನಿರ್ಧಾರ ಕೈಗೊಂಡಿದ್ದಾರೆ. 
 
ಅವರನ್ನು ರಾಜ್ಯಪಾಲ ಹುದ್ದೆಯಿಂದ ಕೆಳಗಿಳಿಸುವಂತೆ ವ್ಯಾಪಕ  ಒತ್ತಾಯ ಕೇಳಿ ಬಂದಿತ್ತು. ಈ ಪ್ರಕರಣದಲ್ಲಿ ಮಧ್ಯ ಪ್ರವೇಶಿಸುವಂತೆ ರಾಜಭವನದ 80 ಸಿಬ್ಬಂದಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ, ಪ್ರಧಾನಿ ಮತ್ತು ಗೃಹ ಸಚಿವಾಲಯಕ್ಕೆ ಮನವಿ ಸಲ್ಲಿಸಿದ್ದರು. 
 
ಷಣ್ಮುಗನಾಥನ್‌ ಅವರು ರಾಜಭವನದ ಘನತೆಗೆ ಚ್ಯುತಿ ತರುತ್ತಿದ್ದಾರೆ. ರಾಜಭವನವನ್ನು ಯುವತಿಯರ ಕ್ಲಬ್‌ ಆಗಿ ಪರಿವರ್ತನೆ ಮಾಡಿದ್ದಾರೆ ಎಂದು ಅವರು ಆರೋಪಿಸಿದ್ದರು. ತಮ್ಮ ಮೇಲಿನ ಆರೋಪಗಳನ್ನು ನಾಥನ್‌ ತಳ್ಳಿ ಹಾಕಿದ್ದಾರೆ. 
 
ಗುರುವಾರ ಮುಂಜಾನೆ ರಾಜಧಾನಿ ಶಿಲ್ಲಾಂಗ್‌ನಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ರಾಜ್ಯಪಾಲರ ಬದಲಿಗೆ ಮುಖ್ಯಮಂತ್ರಿ ಮುಕುಲ್ ಸಾಂಗ್ಮಾ ಧ್ವಜಾರೋಹಣವನ್ನು ನೆರವೇರಿಸಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ