Webdunia - Bharat's app for daily news and videos

Install App

ಪೊಲೀಸ್ ಠಾಣೆಯಲ್ಲೇ ಪೇದೆಯಿಂದ ಅನಾಥ ಬಾಲಕನಿಗೆ ಲೈಂಗಿಕ ಕಿರುಕುಳ

Webdunia
ಗುರುವಾರ, 4 ಅಕ್ಟೋಬರ್ 2018 (08:17 IST)
ಲಖನೌ : ಪೊಲೀಸ್ ಠಾಣೆಯಲ್ಲೇ  ಪೇದೆಯೊಬ್ಬ ಸುಮಾರು 25 ದಿನಗಳ ಕಾಲ ಅನಾಥ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ವರದಿಯಾಗಿದೆ.

ಸಂಜೇಶ್​ ಯಾದವ್ (45 ವರ್ಷ) ಅನಾಥ ಬಾಲಕನ ಮೇಲೆ ಅಸಹಜ ಲೈಂಗಿಕ ದಾಳಿ ನಡೆಸಿದಾತ. ಈತ ಚಾಮದ್​ ಪೊಲೀಸ್​ ಠಾಣೆಯಲ್ಲಿ ಪೇದೆಯಾಗಿ ಕಾರ್ಯ ನಿರ್ವಹಿಸುತ್ತಿದ್ದು, ಒಂದು ದಿನ ಗಸ್ತು ವೇಳೆ ಹೋಟೆಲ್​ವೊಂದಕ್ಕೆ ಭೇಟಿ ನೀಡಿದಾಗ ಆ ಹೋಟೆಲ್​ನಲ್ಲಿ ಕೆಲಸ ಮಾಡುತ್ತಿದ್ದ ಅನಾಥ ಬಾಲಕ ಇತನ ಕಣ್ಣಿಗೆ ಬಿದ್ದಿದ್ದಾನೆ. ವಿಚಾರಣೆ ನೆಪದಲ್ಲಿ ಆ ಬಾಲಕನನ್ನು ಪೊಲೀಸ್​ ಠಾಣೆಗೆ ಕರೆದೊಯ್ದಿದ ಸಂಜೇಶ್​ ಯಾದವ್ ಸೆಪ್ಟಂಬರ್​ 9 ರಿಂದ ಅಕ್ಟೋಬರ್​ 1ರವರೆಗೆ ಪ್ರತಿನಿತ್ಯ ಬಾಲಕನ ಜೊತೆ ಅಸಹಜ ಲೈಂಗಿಕ ಕ್ರಿಯೆ ನಡೆಸುತ್ತಿದ್ದನು.

 

ಆದರೆ ಗಾಂಧಿ ಜಯಂತಿ ನಿಮಿತ್ತ  ಹಿರಿಯ ಪೊಲೀಸ್​ ಅಧಿಕಾರಿಗಳು ಚಾಮದ್​ ಠಾಣೆಗೆ ಭೇಟಿ ನೀಡಿದ್ದರು. ಈ ವೇಳೆ ಬಾಲಕ ತನ್ನ ನೋವುಗಳನ್ನು ತೋಡಿಕೊಂಡಿದ್ದಾನೆ. ಬಾಲಕ,  ಲೈಂಗಿಕ ಕ್ರಿಯೆಗೆ ಗುರಿಯಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿರುವ ಕಾರಣ ಕೂಡಲೇ ಹಿರಿಯ ಅಧಿಕಾರಿಗಳು ಪೊಲೀಸ್​ ಪೇದೆ ಸಂಜೇಶ್​ನ್ನು ಅಮಾನತುಗೊಳಿಸಿ, ಬಾಲಕನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಈ ಘಟನೆ ಕುರಿತು ಪ್ರಕರಣ ದಾಖಲಾಗಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆನೆ ಜತೆ ಸೆಲ್ಪಿ ವಿಡಿಯೋ ವೈರಲ್, ಇನ್ಮುಂದೆ ಈ ಥರ ಮಾಡುವವರ ವಿರುದ್ಧ ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

ಪಾಕ್ ವಿರುದ್ಧ ಅದು ಸರಿಯಾದ ಪ್ರತೀಕಾರ: ಆಪರೇಷನ್ ಸಿಂಧೂರ್‌ನ್ನು ಶ್ಲಾಘಿಸಿದ ಜಪಾನಿನ ಕಾರ್ಯತಂತ್ರ ತಜ್ಞ

IPL 2025: ಅನುಚಿತ ವರ್ತನೆಗೆ ಡೆಲ್ಲಿ ವೇಗದ ಬೌಲರ್‌ ಮುಕೇಶ್‌ ಕುಮಾರ್‌ಗೆ ಬಿತ್ತು ದಂಡ

ಜಮ್ಮು ಕಾಶ್ಮೀರದ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಯೋಧ ಹುತಾತ್ಮ

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ: ಡಿಸಿಎಂ ಡಿಕೆ ಶಿವಕುಮಾರ್

ಮುಂದಿನ ಸುದ್ದಿ