ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಬೆಂಗಾವಲಾಗಿ ಕಾರ್ಯ ನಿರ್ವಹಿಸುತ್ತಿದ್ದ ಪೊಲೀಸ್ ಪೇದೆಯೊಬ್ಬರು ಆಕಸ್ಮಿಕವಾಗಿ ಗುಂಡಿನ ಏಟಿಗೆ ಒಳಗಾಗಿ ಗಾಯಗೊಂಡ ಘಟನೆ ನಡೆದಿದೆ. ಬುಧವಾರ ಆರ್ಸಿಬಿ ಮತ್ತು ರಾಜಸ್ಥಾನ್ ರಾಯಲ್ಸ್ ಪಂದ್ಯ ನಡೆಯುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಗಾಯಗೊಂಡ ಪೊಲೀಸ್ ಪೇದೆಯನ್ನು ಶರದ್ ಅರ್ಜುನ್ ಪವಾರ್ (28) ಎಂದು ಗುರುತಿಸಲಾಗಿದ್ದು, ಅವರು ತಮ್ಮ ಭುಜಕ್ಕೆ ತಗುಲಿಸಿಕೊಂಡಿದ್ದ ಕಾರ್ಬೈನ್ ಗನ್ ಆಕಸ್ಮಿಕವಾಗಿ ಕೆಳಕ್ಕೆ ಬಿದ್ದ ಪರಿಣಾಮ ಅದರಿಂದ ಗುಂಡು ಹಾರಿದೆ.
ಶಸ್ತ್ರ ನಿರ್ವಹಣೆಯಲ್ಲಿ ನಿರ್ಲಕ್ಷ್ಸ (304) ಆರೋಪದಡಿ ಪವಾರ್ ವಿರುದ್ದ ಪ್ರಕರಣ ದಾಖಲಿಸಲಾಗಿದ್ದು,
ಪಂದ್ಯ ಪ್ರಾರಂಭವಾಗುತ್ತಿದ್ದಂತೆಯೇ ಎಸ್ಕಾರ್ಟ್ ಗೇಟ್ ಬಳಿ ಗದ್ದಲ ಪ್ರಾರಂಭವಾಗಿದೆ. "ಗನ್ ಆಕಸ್ಮಿಕವಾಗಿ ಕೆಳಕ್ಕೆ ಬಿದ್ದ ಪರಿಣಾಮ ಬುಲೆಟ್ ಹಾರಿ ನನ್ನ ಕಾಲಿನೊಳಗೆ ತೂರಿ ಹೋಯಿತು", ಎಂದು ಪೇದೆ ಪವಾರ್ ಹೇಳಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಅವರೀಗ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.