ಮತ್ತೆ ಶಶಿ ತರೂರ್ ವಿವಾದಿತ ಹೇಳಿಕೆ: ಈ ಬಾರಿ ತಾಲಿಬಾನ್ ಗೆ ಹೋಲಿಕೆ

Webdunia
ಗುರುವಾರ, 19 ಜುಲೈ 2018 (09:09 IST)
ನವದೆಹಲಿ: ಮೊನ್ನೆಯಷ್ಟೇ ಬಿಜೆಪಿ 2019 ರಲ್ಲಿ ಗೆದ್ದರೆ ಭಾರತ ಹಿಂದೂ ಪಾಕಿಸ್ತಾನವಾಗುತ್ತದೆ ಎಂದಿದ್ದ ಕಾಂಗ್ರೆಸ್ ಸಂಸದ ಶಶಿ ತರೂರ್ ಮತ್ತೆ ವಿವಾದಿತ ಹೇಳಿಕೆ ನೀಡಿದ್ದಾರೆ.
 

ತರೂರ್ ಮೊದಲಿನ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿ ಕೆಲವು ಕಿಡಿಗೇಡಿಗಳು ಅವರ ಕಚೇರಿ ಮೇಲೆ ದಾಳಿ ಮಾಡಿದ್ದರು. ಇದು ಬಿಜೆಪಿ ಯುವ ಮೋರ್ಚಾ ಕೃತ್ಯ ಎಂದು ಅವರು ಆರೋಪಿಸಿದ್ದಾರೆ.

ಈ ಬಗ್ಗೆ ಲೋಕಸಭೆಯಲ್ಲಿ ಪ್ರಸ್ತಾಪಿಸಿದ ತರೂರ್ ಬಿಜೆಪಿಯ ಹಿಂದೂ ರಾಷ್ಟ್ರ ಎನ್ನುವ ಕಲ್ಪನೆಯೇ ಅಪಾಯಕಾರಿ. ಇದು ಈ ದೇಶವನ್ನೇ ನಾಶಗೊಳಿಸುತ್ತದೆ. ಹಿಂದೂ ವಾದವನ್ನು ತಾಲಿಬಾನ್ ಆಗಿಸುವ ಯತ್ನ ನಡೆದಿದೆಯೇ? ಎಂದು ಪ್ರಶ್ನಿಸಿದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ ನಾಯಕ ಅನಂತ ಕುಮಾರ್ ತರೂರ್ ನಡುವೆ ವಾಗ್ವಾದ ನಡೆಯಿತು. ಅಷ್ಟೇ ಅಲ್ಲ ಈ ವಿಚಾರದಲ್ಲಿ ಪ್ರಧಾನಿ ಮಧ್ಯ ಪ್ರವೇಶಿಸಬೇಕು ಎಂದು ತರೂರ್ ಆಗ್ರಹಿಸಿದ್ದಕ್ಕೆ ತಿರುಗೇಟು ನೀಡಿದ ಅನಂತ ಕುಮಾರ್ ಇದು ಕಾಂಗ್ರೆಸ್ ಮತ್ತು ಎಡಪಕ್ಷಗಳ ಕೃತ್ಯ. ಆಯಾ ರಾಜ್ಯಗಳ ಕಾನೂನು ಸುವ್ಯವಸ್ಥೆ ಆಯಾ ರಾಜ್ಯ ಸರ್ಕಾರಕ್ಕೆ ಸೇರಿದ್ದು. ಇದರಲ್ಲಿ ಕೇಂದ್ರ ಮಧ್ಯಪ್ರವೇಶಿಸಲಾಗದು ಎಂದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೆಲ್ಲ ದಲಿತ ಸಚಿವರ ಹೆಸರು ಕೆಡಿಸಲು ಪ್ರಯತ್ನ: ಡಿಕೆ ಶಿವಕುಮಾರ್

ವಲಸೆ ಬಂದ ಹಕ್ಕಿಗಳಿಗೆ ಹೀಗಾಗುವುದಾ, ಅಸ್ಸಾಂ ಜಿಲ್ಲೆಯಲ್ಲಿ ನಿಜವಾಗ್ಲೂ ಆಗಿದ್ದೇನು

ಹೆಂಡ್ತಿ ಜತೆ ರೋಮ್ಯಾಂಟಿಕ್ ರೀಲ್ ಮಾಡಲು ಹೋಗಿ ಸಂಕಷ್ಟ ತಂದುಕೊಂಡ ಪೊಲೀಸ್ ಅಧಿಕಾರಿ, ಆಗಿದ್ದೇನು ಗೊತ್ತಾ

ಆಸಕ್ತಿ ತೋರಿರುವ, ತೋರದವರ ಬಗ್ಗೆ ಎಐಸಿಸಿಗೆ ಲಿಖಿತ ಮಾಹಿತಿ: ಡಿಕೆ ಶಿವಕುಮಾರ್, Video

ನಿಪಾ ವೈರಸ್ ಹರಡುವಿಕೆ: ಏಷ್ಯಾದಾದ್ಯಂತ ವಿಮಾನ ನಿಲ್ದಾಣಗಳಲ್ಲಿ ಆರೋಗ್ಯ ತಪಾಸಣೆ

ಮುಂದಿನ ಸುದ್ದಿ
Show comments