ಮತ್ತೆ ಶಶಿ ತರೂರ್ ವಿವಾದಿತ ಹೇಳಿಕೆ: ಈ ಬಾರಿ ತಾಲಿಬಾನ್ ಗೆ ಹೋಲಿಕೆ

Webdunia
ಗುರುವಾರ, 19 ಜುಲೈ 2018 (09:09 IST)
ನವದೆಹಲಿ: ಮೊನ್ನೆಯಷ್ಟೇ ಬಿಜೆಪಿ 2019 ರಲ್ಲಿ ಗೆದ್ದರೆ ಭಾರತ ಹಿಂದೂ ಪಾಕಿಸ್ತಾನವಾಗುತ್ತದೆ ಎಂದಿದ್ದ ಕಾಂಗ್ರೆಸ್ ಸಂಸದ ಶಶಿ ತರೂರ್ ಮತ್ತೆ ವಿವಾದಿತ ಹೇಳಿಕೆ ನೀಡಿದ್ದಾರೆ.
 

ತರೂರ್ ಮೊದಲಿನ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿ ಕೆಲವು ಕಿಡಿಗೇಡಿಗಳು ಅವರ ಕಚೇರಿ ಮೇಲೆ ದಾಳಿ ಮಾಡಿದ್ದರು. ಇದು ಬಿಜೆಪಿ ಯುವ ಮೋರ್ಚಾ ಕೃತ್ಯ ಎಂದು ಅವರು ಆರೋಪಿಸಿದ್ದಾರೆ.

ಈ ಬಗ್ಗೆ ಲೋಕಸಭೆಯಲ್ಲಿ ಪ್ರಸ್ತಾಪಿಸಿದ ತರೂರ್ ಬಿಜೆಪಿಯ ಹಿಂದೂ ರಾಷ್ಟ್ರ ಎನ್ನುವ ಕಲ್ಪನೆಯೇ ಅಪಾಯಕಾರಿ. ಇದು ಈ ದೇಶವನ್ನೇ ನಾಶಗೊಳಿಸುತ್ತದೆ. ಹಿಂದೂ ವಾದವನ್ನು ತಾಲಿಬಾನ್ ಆಗಿಸುವ ಯತ್ನ ನಡೆದಿದೆಯೇ? ಎಂದು ಪ್ರಶ್ನಿಸಿದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ ನಾಯಕ ಅನಂತ ಕುಮಾರ್ ತರೂರ್ ನಡುವೆ ವಾಗ್ವಾದ ನಡೆಯಿತು. ಅಷ್ಟೇ ಅಲ್ಲ ಈ ವಿಚಾರದಲ್ಲಿ ಪ್ರಧಾನಿ ಮಧ್ಯ ಪ್ರವೇಶಿಸಬೇಕು ಎಂದು ತರೂರ್ ಆಗ್ರಹಿಸಿದ್ದಕ್ಕೆ ತಿರುಗೇಟು ನೀಡಿದ ಅನಂತ ಕುಮಾರ್ ಇದು ಕಾಂಗ್ರೆಸ್ ಮತ್ತು ಎಡಪಕ್ಷಗಳ ಕೃತ್ಯ. ಆಯಾ ರಾಜ್ಯಗಳ ಕಾನೂನು ಸುವ್ಯವಸ್ಥೆ ಆಯಾ ರಾಜ್ಯ ಸರ್ಕಾರಕ್ಕೆ ಸೇರಿದ್ದು. ಇದರಲ್ಲಿ ಕೇಂದ್ರ ಮಧ್ಯಪ್ರವೇಶಿಸಲಾಗದು ಎಂದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಕ್ಕು ಸ್ಥಾವರದಲ್ಲಿ ಭಾರಿ ಪ್ರಮಾಣದ ಲೋಹ ಹರಿದು 9ಮಂದಿ ಸಾವು, ಹಲವರಿಗೆ ಗಾಯ

ಶಿವಮೊಗ್ಗ: ಕಾಂಗ್ರೆಸ್ ಕಾರ್ಯಕರ್ತನ ಕೈ ತುಂಡಾಗುವ ಮಟ್ಟಿಗೆ ಹಲ್ಲೆ

ಗ್ರ್ಯಾಂಡ್‌ ಮಾಸ್ಟರ್ ಆರ್ ಪ್ರಜ್ಞಾನಂದ್‌ ಜತೆ ಚೆಸ್ ಆಡಿದ ವಿಜಯ್, Video

ಉಪಮುಖ್ಯಮಂತ್ರಿ ಹುದ್ದೆಯನ್ನು ಬಯಸಿದ್ರಾಂತ್ತೆ ಈ ಸಚಿವರು, ಕೊನೆಗೂ ಅಮಾಧಾನ ಹೊರಹಾಕಿದ ಕೈ ನಾಯಕ

ಇಂದಿನಿಂದ ಕರಾವಳಿ ಭಾಗದಲ್ಲಿ ನಿರೀಕ್ಷೆಗೂ ಮೀರಿ ಹವಾಮಾನದಲ್ಲಿ ವ್ಯತ್ಯಯ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments