Webdunia - Bharat's app for daily news and videos

Install App

ಸುಮಿತ್ರಾ ಮಹಾಜನ್ ಸಾವಿನ ಬಗ್ಗೆ ಸುಳ್ಳು ಸುದ್ದಿ: ಕ್ಷಮೆ ಯಾಚಿಸಿದ ಶಶಿ ತರೂರ್

Webdunia
ಶುಕ್ರವಾರ, 23 ಏಪ್ರಿಲ್ 2021 (09:20 IST)
ನವದೆಹಲಿ: ಲೋಕಸಭೆಯ ಮಾಜಿ ಸ್ಪೀಕರ್ ಸುಮಿತ್ರಾ ಮಹಾಜನ್ ಸಾವಿನ ಬಗ್ಗೆ ಸುಳ್ಳು ಸುದ್ದಿ ಹಂಚಿಕೊಂಡು ಪ್ರಮಾದದ ಅರಿವಾಗುತ್ತಿದ್ದಂತೇ ಕಾಂಗ್ರೆಸ್ ಸಂಸದ ಶಶಿ ತರೂರ್ ಕ್ಷಮೆ ಯಾಚಿಸಿದ ಘಟನೆ ನಡೆದಿದೆ.


ಟ್ವಿಟರ್ ನಲ್ಲಿ ಸುಮಿತ್ರಾ ಮಹಾಜನ್ ನಿಧನದ ಸುದ್ದಿ ಕೇಳಿ ಬೇಸರವಾಯಿತು. ಅವರೊಂದಿಗೆ ನಡೆಸಿದ ಅನೇಕ ಮಾತುಕತೆಗಳು ಈ ಕ್ಷಣದಲ್ಲಿ ನೆನಪಾಗುತ್ತಿದೆ. ಓಂ ಶಾಂತಿ ಎಂದು ತರೂರ್ ಬರೆದುಕೊಂಡಿದ್ದರು.

ಶಶಿ ತರೂರ್ ಟ್ವೀಟ್ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಿದಾಡುತ್ತಿರುವುದನ್ನು ಮನಗಂಡ ಬಿಜೆಪಿ, ಟ್ವೀಟ್ ಮೂಲಕ ಸುಮಿತ್ರಾ ಮಹಾಜನ್ ಆರೋಗ್ಯವಾಗಿದ್ದಾರೆ. ವದಂತಿಗಳನ್ನು ನಂಬಬೇಡಿ ಎಂದಿದೆ. ತಕ್ಷಣವೇ ಶಶಿ ತರೂರ್ ಡಿಲೀಟ್ ಮಾಡಿದ್ದಲ್ಲದೆ, ಸುಳ್ಳು ಸುದ್ದಿಯನ್ನು ನಂಬಿ ಟ್ವೀಟ್ ಮಾಡಿದ್ದಕ್ಕೆ ಕ್ಷಮೆ ಯಾಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments