Webdunia - Bharat's app for daily news and videos

Install App

ಪೋಷಕರ ಮೇಲಿನ ಸೇಡಿಗೆ ಅವರ 11 ವರ್ಷದ ಮಗನ ಬಲಿ ಪಡೆದ ಪಕ್ಕದಮನೆಯಾತ

Webdunia
ಮಂಗಳವಾರ, 28 ಮೇ 2019 (08:44 IST)
ನವದೆಹಲಿ : ತಂದೆ ತಾಯಿ ಬೈದಿದ್ದಕ್ಕೆ ಅವರ 11 ವರ್ಷದ ಮಗನನ್ನು ಕತ್ತು ಹಿಸುಕಿ ಕೊಂದ ಅಮಾನವೀಯ ಘಟನೆ ದೆಹಲಿಯಲ್ಲಿ ನಡೆದಿದೆ.



ಈಶಾನ್ಯ ದೆಹಲಿಯ ನೆಹರೂ ವಿಹಾರ್ ನಿವಾಸಿ ಡ್ಯಾನಿಷ್(28) ಕೊಲೆ ಮಾಡಿದ ಆರೋಪಿಯಾಗಿದ್ದು, ಈತ ಹಾಗೂ ಬಾಲಕ ಅಕ್ಕಪಕ್ಕದ ಮನೆಯಲ್ಲಿ ವಾಸಿಸುತ್ತಿದ್ದರಿಂದ ಒಡನಾಟ ಚೆನ್ನಾಗಿಯೇ ಇತ್ತು. ಆದರೆ ಒಮ್ಮೆ ಬಾಲಕನ ತಂದೆತಾಯಿ ಡ್ಯಾನಿಷ್ ಗೆ ಬೈದಿದ್ದರು.ಇದರಿಂದ ಕೋಪಗೊಂಡಿದ್ದ ಡ್ಯಾನಿಷ್ ಅವರ ಮೇಲೆ ಸೇಡು ತೀರಿಸಿಕೊಳ್ಳಲು ಬಾಲಕನನ್ನು ತನ್ನೊಡನೆ ಕರೆದೊಯ್ದು, ಖಜುರಿ ಖಾಸ್ ಫ್ಲೈಓವರ್ ಬಳಿ ಇರುವ ನಿರ್ಜನ ಪ್ರದೇಶದಲ್ಲಿ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಹಾಗೆಯೇ ಶವವನ್ನು ಅಲ್ಲಿಯೆ ಹೂತಿದ್ದಾನೆ.

 

ಬಾಲಕ ಕಾಣಿಯಾದ ಹಿನ್ನಲೆಯಲ್ಲಿ ಆತನ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಈ ಬಗ್ಗೆ ತನಿಖೆ ನಡೆಸುತ್ತಿರುವಾಗ ಬಾಲಕನ ಶವ ಪತ್ತೆಯಾಗಿದೆ. ನಂತರ ಪೊಲೀಸರು ಅಂಗಡಿಯೊಂದರ ಸಿಸಿಟಿವಿ ಪರಿಶೀಲನೆ ನಡೆಸಿದಾಗ ಡ್ಯಾನಿಷ್ ಜೊತೆ ಬಾಲಕ ಹೋಗುತ್ತಿದ್ದ ದೃಶ್ಯ ಸೆರೆಯಾಗಿತ್ತು. ಬಳಿಕ ಡ್ಯಾನಿಷ್‍ನನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದಾಗ ಆತ ಸತ್ಯಾಂಶವನ್ನು ಬಾಯ್ಬಿಟ್ಟಿದ್ದಾನೆ.

 

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments