Select Your Language

Notifications

webdunia
webdunia
webdunia
webdunia

ಇಂದ್ರಾಣಿ ಮುಖರ್ಜಿ ಪ್ರಕರಣದಲ್ಲಿ ಮತ್ತೊಂದು ಟ್ವಿಸ್ಟ್ : ಪೊಲೀಸ್ ಅಧಿಕಾರಿಗಳಿಗೆ ಆಘಾತ

ಇಂದ್ರಾಣಿ ಮುಖರ್ಜಿ ಪ್ರಕರಣದಲ್ಲಿ ಮತ್ತೊಂದು ಟ್ವಿಸ್ಟ್ : ಪೊಲೀಸ್ ಅಧಿಕಾರಿಗಳಿಗೆ ಆಘಾತ
ಮುಂಬೈ , ಮಂಗಳವಾರ, 1 ಸೆಪ್ಟಂಬರ್ 2015 (14:38 IST)
ದೇಶಾದ್ಯಂತ ಕುತೂಹಲ ಕೆರಳಿಸಿರುವ ಶೀನಾ ಬೋರಾ ಹತ್ಯೆ ಪ್ರಕರಣ ದಿನಕ್ಕೊಂದು ಹೊಸ ತಿರುವು ಪಡೆದುಕೊಳ್ಳುತ್ತಿದೆ. ಇದೀಗ ಶೀನಾ ಬೋರಾ ಅಮೆರಿಕದಲ್ಲಿದ್ದು ಜೀವಂತವಾಗಿದ್ದಾಳೆ ಎಂದು ಹೇಳಿಕೆ ನೀಡಿ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ನೀಡಿದ್ದಾಳೆ. 
 
ಮುಂಬೈ ಪೊಲೀಸ್ ಆಯುಕ್ತ ರಾಕೇಶ್ ಮಾರಿಯಾ, ಆರೋಪಿ ಇಂದ್ರಾಣಿಗೆ ಹಲವು ಪ್ರಶ್ನೆಗಳನ್ನು ಕೇಳಿದರೂ ಉತ್ತರಿಸಿದೆ ತಮ್ಮ ವಕೀಲರನ್ನು ಸಂಪರ್ಕಿಸಿದ ನಂತರವಷ್ಟೆ ಉತ್ತರಿಸುವುದಾಗಿ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ. 
 
ಶೀನಾ ಬೋರಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 56 ಗಂಟೆಗಳ ಕಾಲ ವಿಚಾರಣೆ ನಡೆಸಿದರೂ ಪ್ರಮುಖ ಆರೋಪಿ ಇಂದ್ರಾಣಿಯಿಂದ ಯಾವುದೇ ಪ್ರಮುಖ ಮಾಹಿತಿ ಬಹಿರಂಗಪಡಿಸಲು ಸಾಧ್ಯವಾಗಿಲ್ಲ.  
 
ಶೀನಾ ಬೋರಾ ಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ಆಗಸ್ಟ್ 25 ರಂದು ಇಂದ್ರಾಣಿ ಮುಖರ್ಜಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಆದರೆ ವಕೀಲರನ್ನು ಸಂಪರ್ಕಿಸಿದ ನಂತರವೇ ತಾನು ಉತ್ತರಿಸುವುದಾಗಿ ಇಂದ್ರಾಣಿ ಪಟ್ಟು ಹಿಡಿದಿದ್ದಾರೆ. 
 

Share this Story:

Follow Webdunia kannada