Webdunia - Bharat's app for daily news and videos

Install App

ಒಂದು ದಿನದ ಜಾಮೀನು ಪಡೆದು ತಂದೆ ತಿಥಿಯಲ್ಲಿ ಪಾಲ್ಗೊಂಡ ಇಂದ್ರಾಣಿ

Webdunia
ಮಂಗಳವಾರ, 27 ಡಿಸೆಂಬರ್ 2016 (15:27 IST)
ಸ್ವಂತ ಮಗಳು ಶೀನಾ ಬೋರಾ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಇಂದ್ರಾಣಿ ಮುಖರ್ಜಿ ಒಂದು ದಿನದ ಶರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಗೊಂಡು ಇಂದು ತಂದೆಯ ತಿಥಿಯಲ್ಲಿ ಪಾಲ್ಗೊಂಡರು. 

ಡಿಸೆಂಬರ್ 15 ರಂದು ಇಂದ್ರಾಣಿ ತಂದೆ ಉಪೇಂದ್ರ ಕುಮಾರ್ ಬೋರಾ ಸಾವನ್ನಪ್ಪಿದ್ದು, ಅವರ ಅಂತಿಮ ವಿಧಿವಿಧಾನದಲ್ಲಿ ಪಾಲ್ಗೊಳ್ಳಲು ಗೌಹಾತಿಗೆ ಹೋಗಲು ಅನುಮತಿ ನೀಡುವಂತೆ ಇಂದ್ರಾಣಿ ಡಿಸೆಂಬರ್ 19ರಂದು ಜಾಮೀನಿಗಾಗಿ ಮನವಿ ಸಲ್ಲಿಸಿದ್ದರು.
 
ಅವರ ಮನವಿಯನ್ನು ಸ್ವೀಕರಿಸಿದ ನ್ಯಾಯಾಧೀಶರಾದ ಹೆಚ್.ಎಸ್.ಮಹಾಜನ್ ಒಂದು ದಿನದ ಜಾಮೀನು ನೀಡಿದ್ದು, ಪೊಲೀಸ್ ಬೆಂಗಾವಲಿನಲ್ಲಿ ಅವರು ಮುಳುಂದ್‌ನ ಬ್ರಾಹ್ಮಣ ಸೇವಾ ಸಮಿತಿಯಲ್ಲಿ ತಂದೆಯ ತಿಥಿ ನೆರವೇರಿಸಿದ್ದಾರೆ
 
ತಮ್ಮ ಮಗಳು ಶೀನಾ ಬೋರಾ ಹತ್ಯೆ ಆರೋಪದ ಮೇಲೆ ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ಬಂಧನಕ್ಕೊಳಪಟ್ಟಿದ್ದ ಇಂದ್ರಾಣಿ, ಕಳೆದೊಂದು ವರ್ಷದಿಂದ ಬೈಕುಲ್ಲಾ ಜೈಲಿನಲ್ಲಿದ್ದಾರೆ. ಆಕೆಯ ಮೂರನೆಯ ಪತಿ ಪೀಟರ್ ಮುಖರ್ಜಿ ಕೂಡ ಇದೇ ಜೈಲಿನಲ್ಲಿದ್ದಾರೆ. 
 
ತನ್ನ ಎರಡನೆಯ ಪತಿ ಸಂಜೀವ್ ಖನ್ನಾ ಸಹಾಯದಿಂದ ಇಂದ್ರಾಣಿ ಮಗಳು ಶೀನಾ ಬೋರಾಳನ್ನು ಉಸಿರುಗಟ್ಟಿಸಿ ಸಾಯಿಸಿದ್ದಳು ಎಂಬ ಆರೋಪವಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Anant Ambani:ಮದುವೆ ಬೆನ್ನಲ್ಲೇ ಮಗನಿಗೆ ದೊಡ್ಡ ಜವಾಬ್ದಾರಿ ವಹಿಸಿದ ಮುಕೇಶ್‌, ನೀತಾ ಅಂಬಾನಿ

Pahalgam Terror Attack: ರಾಷ್ಟ್ರೀಯ ಭದ್ರತೆ ಹಿತದೃಷ್ಟಿಯಲ್ಲಿ ದೊಡ್ಡ ನಿರ್ಧಾರ ಕೈಗೊಂಡ ಕೇಂದ್ರ

Attari-Wagah border ಬಂದ್: ಪಾಕಿಸ್ತಾನ ಯುವತಿ, ರಾಜಸ್ಥಾನ ಯುವಕನ ಮದುವೆಗೆ ಅಡ್ಡಿ

Pahalgam terror Attack: ಪ್ರತ್ಯಕ್ಷದರ್ಶಿಗಳ ಸಾಕ್ಷಿ ಸಂಗ್ರಹಿಸುತ್ತಿರುವ NIA

ಭಯೋತ್ಪಾದಕರಿಗೂ, ಸಿದ್ದರಾಮಯ್ಯಗೂ ಯಾವುದೇ ವ್ಯತ್ಯಾಸವಿಲ್ಲ: ಅರವಿಂದ ಬೆಲ್ಲದ ಗರಂ

ಮುಂದಿನ ಸುದ್ದಿ
Show comments