Webdunia - Bharat's app for daily news and videos

Install App

ಮೋದಿ ಅಂಗಳದಲ್ಲಿ ರಾಹುಲ್ ಎಸೆದ ಬ್ರಹ್ಮಾಸ್ತ್ರ‌; ಶೀಲಾ ದೀಕ್ಷಿತ್‌ರಿಂದಾಯ್ತು ಠುಸ್ ಪಟಾಕಿ

Webdunia
ಮಂಗಳವಾರ, 27 ಡಿಸೆಂಬರ್ 2016 (11:47 IST)
ನಾನು ಸಂಸತ್‌ನಲ್ಲಿ ಮಾತನಾಡಿದರೆ ಭೂಕಂಪವಾಗುತ್ತದೆ, ಪ್ರಧಾನಿ ಮೋದಿ ಬ್ರಹ್ಮಾಂಡ ಭ್ರಷ್ಟಾಚಾರ ಮಾಡಿದ್ದಾರೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಸಿಡಿಸಿದ್ದ ಬಾಂಬ್ ತಿರುಮಂತ್ರವಾಗಿ ಕಾಂಗ್ರೆಸ್ ಪಾಳೆಯದಲ್ಲೇ ಸಿಡಿದಿತ್ತು. 
ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಮೋದಿ ಸಹಾರಾ ಕಂಪನಿಯಿಂದ 40 ಕಿಕ್‌ಬ್ಯಾಕ್ ಪಡೆದಿದ್ದರು ಎಂದು ರಾಹುಲ್ ಆರೋಪಿಸಿದ್ದರು. ಅದಕ್ಕೆ ಸಾಕ್ಷ್ಯವಾಗಿ  ಸಹಾರಾ ಡೈರಿಯಲ್ಲಿ ಬರೆದಿರುವ ಹೆಸರಿನ ಪಟ್ಟಿಯನ್ನು ಟ್ವಿಟರ್‌ನಲ್ಲಿ ಪ್ರಕಟಿಸಿದ್ದರು. ಅದರಲ್ಲಿ  ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಹೆಸರು ಕೂಡ ಇತ್ತು. ಹೀಗಾಗಿ ರಾಹುಲ್ ಎಸೆದ ಬಾಂಬ್ ಕಾಂಗ್ರೆಸ್ ಅಂಗಳದಲ್ಲೇ ಸಿಡಿದು ಕಾಂಗ್ರೆಸ್‌ನಲ್ಲೇ ಭೂಕಂಪವನ್ನು ಸೃಷ್ಟಿಸಿತು. ಇನ್ನೊಂದೆಡೆ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿಯಾಗಿ ಘೋಷಣೆಯಾಗಿರುವ ಶೀಲಾ ಅವರನ್ನು ಹಣಿಯಲು ಪಕ್ಷದವರೇ ನಡೆಸಿದ ಕುತಂತ್ರ ಎಂಬ ಮಾತುಗಳು ಸಹ ಕೇಳಿ ಬಂದಿತ್ತು. 
 
ಪಟ್ಟಿಯಲ್ಲಿ ತಮ್ಮ ಹೆಸರು ಇರುವುದನ್ನು ಕಂಡ ಶೀಲಾ ದೀಕ್ಷಿತ್ ರಾಹುಲ್‌ ಎಸೆದ ಬ್ರಹ್ಮಾಸ್ತ್ರವನ್ನು ಠುಸ್ ಪಟಾಕಿಯನ್ನಾಗಿಸಿದ್ದಾರೆ. 
 
ಇದೆಲ್ಲವೂ ಕಪೋಲ ಕಲ್ಪಿತ. ಆರೋಪಗಳಲ್ಲಿ ಯಾವುದೇ ಹುರುಳಿಲ್ಲ. ಸಹಾರಾ ಡೈರಿ ಬಗ್ಗೆ ಸುಪ್ರೀಂಕೋರ್ಟ್ ಈಗಾಗಲೇ ತನ್ನ ಅಭಿಪ್ರಾಯವನ್ನು ತಿಳಿಸಿದ್ದು, ಇದರಲ್ಲಿ ಯಾವುದೇ ಹುರುಳಿಲ್ಲ ಎಂದಿದ್ದಾರೆ ಶೀಲಾ. ಈ ಮೂಲಕ ರಾಹುಲ್ ಪ್ರಯೋಗಿಸಿದ ಬಾಣ ಅವರ ಪಾಳೆಯದಿಂದಲೇ ಮೊಂಡಾಗಿದಂತಾಗಿದೆ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಕೀಯ ನಿವೃತ್ತಿ ಬಳಿಕ ಅಮಿತ್ ಶಾ ಏನು ಮಾಡ್ತಾರೆ: ಪ್ಲ್ಯಾನ್ ರಿವೀಲ್

ರಕ್ಷಣಾ ಸಚಿವ ರಾಜನಾಥ್ ಸಿಂಗ್‌ರನ್ನು ಭೇಟಿಯಾದ ಸಿದ್ದರಾಮಯ್ಯ, ಮೈಸೂರು ದಸರಾದ ಬಗ್ಗೆ ಮುಖ್ಯ ಚರ್ಚೆ

70 ಗಂಟೆ ಕೆಲಸ ಮಾಡಲು ರೆಡಿಯಾ: ನಾರಾಯಣ ಮೂರ್ತಿ ಹೇಳಿಕೆಯಿಂದ ಟ್ರೋಲ್‌ಗೊಳಗಾದ ರಿಷಿ ಸುನಕ್‌

ನಾನು ಪಕ್ಷಾಂತರ ಮಾಡಲ್ಲ, ನನ್ನದು ತಟಸ್ಥ ನಿಲುವು: ಜಿಟಿ ದೇವೇಗೌಡ

ದೇಶಕ್ಕೆ ಮೋದಿ, ರಾಜ್ಯಕ್ಕೆ ಕುಮಾರಸ್ವಾಮಿ ಸಿಎಂ ಆಗ್ಬೇಕು: ನಿಖಿಲ್ ಕುಮಾರಸ್ವಾಮಿ

ಮುಂದಿನ ಸುದ್ದಿ
Show comments