Webdunia - Bharat's app for daily news and videos

Install App

ಚುನಾವಣೆ ಫಲಿತಾಂಶದಿಂದ ಬೀಗಬೇಡಿ, ಕಾಂಗ್ರೆಸ್ ಮುಕ್ತ ಭಾರತ ತುಂಬಾ ದೂರವಿದೆ: ಉದ್ಭವ್ ಠಾಕ್ರೆ

Webdunia
ಶನಿವಾರ, 21 ಮೇ 2016 (18:31 IST)
ಕಾಂಗ್ರೆಸ್ ಮುಕ್ತ ಭಾರತದ ಗುರಿ ತುಂಬಾ ದೂರವಿರುವುದರಿಂದ ಹೆಚ್ಚಿನ ಸಂಭ್ರಮ ಬೇಡ ಎಂದು ಶಿವಸೇನೆ ಮುಖ್ಯಸ್ಥ ಉದ್ಭವ್ ಠಾಕ್ರೆ, ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆ ಫಲಿತಾಂಶಗಳ ಬಗ್ಗೆ ಸಂಭ್ರಮದಿಂದ ಬೀಗುತ್ತಿರುವ ಬಿಜೆಪಿಗೆ ಸಲಹೆ ನೀಡಿದ್ದಾರೆ.
 
ಬಿಜೆಪಿ ಕೇವಲ ಆಸ್ಸಾಂ ರಾಜ್ಯದಲ್ಲಿ ಜಯಗಳಿಸಿದೆ, ಕೇರಳದಲ್ಲಿ ಎಡಪಕ್ಷ ಜಯಗಳಿಸಿದೆ, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಜಯಭೇರಿ ಬಾರಿಸಿದೆ, ತ,ಮಿಳುನಾಡಿನಲ್ಲಿ ಎಐಎಡಿಎಂಕೆ ಜಯಗಳಿಸಿದೆ, ಪುದುಚೇರಿಯಲ್ಲಿ ಕಾಂಗ್ರೆಸ್-ಡಿಎಂಕೆ ಮೈತ್ರಿಕೂಟ ಜಯಗಳಿಸಿದೆ ಎನ್ನುವುದನ್ನು ಮರೆಯಬಾರದು ಎಂದು ಕಿವಿಮಾತು ಹೇಳಿದ್ದಾರೆ.
 
ಕಳೆದ ಎರಡು ವರ್ಷಗಳ ಹಿಂದೆ ದೇಶದ ಜನತೆ ಮನಪೂರ್ವಕವಾಗಿ ಬಿಜೆಪಿಗೆ ಬೆಂಬಲ ನೀಡಿ ಅಧಿಕಾರಕ್ಕೆ ತಂದಿರುವುದು ಸತ್ಯ. ಆದರೆ, ಐದು ರಾಜ್ಯಗಳ ವಿಧಾನಸಭೆ ಚುನಾವಣೆಗಳಲ್ಲಿ ಬಿಜೆಪಿ ಉತ್ತಮ ಪ್ರದರ್ಶನ ನೀಡಿದೆ ಎನ್ನುವ ಅಹಂಕಾರ ಬೇಡ ಎಂದಿದ್ದಾರೆ.
 
ಒಂದು ವೇಳೆ, ಪ್ರಧಾನಮಂತ್ರಿ ನರೇಂದ್ರ ಮೋದಿ ಸರಕಾರದ ದೂರದೃಷ್ಟಿ ಮತ್ತು ನೀತಿಗಳು ದೇಶದ ಜನತೆಗೆ ಪೂರಕವಾಗಿದ್ದಲ್ಲಿ ಇತರ ನಾಲ್ಕು ರಾಜ್ಯಗಳ ಜನತೆ ಬೆಂಬಲಿಸುತ್ತಿದ್ದರು. ಕೇವಲ ಆಸ್ಸಾಂ ಜನತೆ ಮಾತ್ರ ಬಿಜೆಪಿಗೆ ಮತ ನೀಡಿದ್ದಾರೆ ಎನ್ನುವ ಬಗ್ಗೆ ಗಮನಹರಿಸಿ ಎಂದು ಶಿವಸೇನೆ ಮುಖ್ಯಸ್ಥ ಉದ್ಭವ್ ಠಾಕ್ರೆ ಲೇವಡಿ ಮಾಡಿದ್ದಾರೆ.  

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹ್ಮದಾಬಾದ್ ವಿಮಾನ ಪತನ: ಸಂತ್ರಸ್ತರಿಗೆ ಹಣ ನೀಡಲು ಏರ್ ಇಂಡಿಯಾ ಕಳ್ಳಾಟವಾಡುತ್ತಿದೆಯೇ

ಕೊವಿಡ್ ಲಸಿಕೆಯಿಂದ ಹೃದಯಾಘಾತವಾಗ್ತಿರೋದು ನಿಜಾನಾ: ತಜ್ಞರ ಸಮಿತಿ ವರದಿ ಲೀಕ್

ಹೃದಯದ ಸಮಸ್ಯೆಗೂ ಗ್ಯಾಸ್ಟ್ರಿಕ್ ನೋವಿಗೂ ಇರುವ ವ್ಯತ್ಯಾಸವೇನು ತಿಳಿಯಿರಿ

Karnataka Weather: ಕರಾವಳಿ ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಇನ್ನೆಷ್ಟು ದಿನ ಮಳೆಯಿರಲಿದೆ

ಹೆಚ್ಚುತ್ತಿರುವ ಪ್ರಕರಣಗಳ ಮಧ್ಯೆ ಜಯದೇವ್‌ಗೆ ರೋಗಿಗಳ ಸಂಖ್ಯೆ ಹೆಚ್ಚಳ: ಹೆಚ್ಚುವರಿ ತಜ್ಞ ವೈದ್ಯರ ನಿಯೋಜನೆ

ಮುಂದಿನ ಸುದ್ದಿ
Show comments