Select Your Language

Notifications

webdunia
webdunia
webdunia
webdunia

ಶಿವಸೇನೆ ಮೈತ್ರಿ ಬಿಡಲು ಸಿದ್ಧ : ಸಂಜಯ್ ರಾವತ್

ಶಿವಸೇನೆ ಮೈತ್ರಿ ಬಿಡಲು ಸಿದ್ಧ : ಸಂಜಯ್ ರಾವತ್
ಮುಂಬೈ , ಶುಕ್ರವಾರ, 24 ಜೂನ್ 2022 (13:40 IST)
ಮುಂಬೈ : ಬಂಡಾಯ ಶಾಸಕರು 24 ಗಂಟೆಯೊಗಳಗೆ ಹಿಂದಿರುಗುವುದಾದರೆ ಶಿವಸೇನೆ ಮೈತ್ರಿಯಿಂದ ಹೊರಬರಲು ಸಿದ್ಧ ಎಂದು ಶಿವಸೇನೆ ಸಂಸದ ಸಂಜಯ್ ರಾವತ್ ತಿಳಿಸಿದರು.
 
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂಡಾಯ ಶಾಸಕರು ಬಯಸಿದರೆ ಶಿವಸೇನೆಯು ಕಾಂಗ್ರೆಸ್ ಮತ್ತು ಎನ್ಸಿಪಿ ಪಕ್ಷದೊಂದಿಗೆ ಹಂಚಿಕೊಂಡಿರುವ ಮೈತ್ರಿಯಾದ ಎಂವಿಎಯಿಂದ ಹೊರಬರುತ್ತದೆ. ಆದರೆ ಅವರು 24 ಗಂಟೆಗಳಲ್ಲಿ ಮುಂಬೈಗೆ ಹಿಂದಿರುಗಬೇಕು ಎಂದರು.

ನಿಜವಾದ ಶಿವ ಸೈನಿಕರೆಂದು ಹೇಳುತ್ತಿರುವ ನೀವು, ಪಕ್ಷ ತೊರೆಯುವುದಿಲ್ಲ ಎಂದಿರುವಿರಿ. 24 ಗಂಟೆಗಳಲ್ಲಿ ನೀವು ಮುಂಬೈಗೆ ಮರಳಿ, ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರೊಂದಿಗೆ ಚರ್ಚೆ ನಡೆಸುವುದಾದರೆ, ನಿಮ್ಮ ಬೇಡಿಕೆಯನ್ನು ಪರಿಗಣಿಸಲು ಸಿದ್ಧರಿದ್ದೇವೆ.

ನಿಮ್ಮ ಬೇಡಿಕೆಗಳಿಗೆ ಸಕಾರಾತ್ಮಕ ಸ್ಪಂದನೆ ಸಿಗಲಿದೆ. ಟ್ವಿಟ್ಟರ್ ಮತ್ತು ವಾಟ್ಸಪ್ನಲ್ಲಿ ಪತ್ರಗಳನ್ನು ಬರೆಯಬೇಡಿ ಎಂದರು. 


Share this Story:

Follow Webdunia kannada

ಮುಂದಿನ ಸುದ್ದಿ

ಸಂಭ್ರಮಾಚರಣೆಯಲ್ಲಿ ವರನಿಂದ ಸ್ನೇಹಿತನ ಹತ್ಯೆ!