Webdunia - Bharat's app for daily news and videos

Install App

ರಾಮಮಂದಿರ ನಿರ್ಮಾಣ ಆರಂಭಿಸಿ: ಕೇಂದ್ರಕ್ಕೆ ಶಿವಸೇನೆ ಆಗ್ರಹ

Webdunia
ಗುರುವಾರ, 13 ಅಕ್ಟೋಬರ್ 2016 (16:51 IST)
ಕೇವಲ ಘೋಷಣೆ ಕೂಗುವುದನ್ನು ನಿಲ್ಲಸಿ, ರಾಮ ಮಂದಿರ ನಿರ್ಮಾಣಕ್ಕೆ ಅಡಿಗಲ್ಲನ್ನಿಡಿ ಎಂದು ಶಿವಸೇನೆ ಗುರುವಾರ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದೆ. ಬಿಜೆಪಿ ಹಿರಿಯ ನಾಯಕ, ರಾಜ್ಯಸಭಾ ಸಂಸದ ಉತ್ತರ ಪ್ರದೇಶ ಚುನಾವಣೆಯಲ್ಲಿ ರಾಮ ಮಂದಿರ ನಿರ್ಮಾಣ ವಿಷಯವನ್ನು ಅಸ್ತ್ರವಾಗಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಿದ ಹಿನ್ನೆಲೆಯಲ್ಲಿ ಸೇನೆ ಈ ಪಟ್ಟು ಹಿಡಿದಿದೆ. 
ತನ್ನ ಮುಖವಾಣಿ ಸಾಮ್ನಾದಲ್ಲಿ ಸೇನೆ, ರಾಮಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಬಿಜೆಪಿಗೆ ಸವಾಲೆಸೆದಿದ್ದು, ಇದಕ್ಕೆ ಸಂಬಂಧಿಸಿದಂತೆ 300 ಸಂಸದರು ಪ್ರಧಾನಿಗೆ ಬೆಂಬಲ ನೀಡಿದ್ದನ್ನು ಸ್ಮರಿಸಿಕೊಂಡಿದೆ. 
 
300 ಸಂಸದರ ಬೆಂಬಲದೊಂದಿಗೆ ನೀವು ರಾಮ ಮಂದಿರವನ್ನು ನಿರ್ಮಿಸಲು ಮುಂದಾಗುವುದಿಲ್ಲವೆಂದರೆ ಮತ್ತೆ ಯಾವಾಗ ಇದನ್ನು ಕೈಗೆತ್ತಿಕೊಳ್ಳುತ್ತಿರಿ ಎಂದು ಸೇನೆ ತನ್ನ ಮಿತ್ರಪಕ್ಷವನ್ನು ಪ್ರಶ್ನಿಸಿದೆ. 
 
ಸೆಪ್ಟೆಂಬರ್ 29 ರಂದು ನಡೆಸಲಾದ ಸೀಮಿತ ದಾಳಿಯ ಬಳಿಕ ಪ್ರಧಾನಿ ಮೋದಿ ಮತ್ತಷ್ಟು ಹೆಚ್ಚು ವಿಶ್ವಾಸವನ್ನು ಪಡೆದುಕೊಂಡಿದ್ದಾರೆ.  ಆದಷ್ಟು ಬೇಗ ರಾಮ ಮಂದಿರ ನಿರ್ಮಾಣವನ್ನು ಆರಂಭಿಸಿ ಎಂದು ಒತ್ತಾಯಿಸಿರುವ ಠಾಕ್ರೆ ನೇತೃತ್ವದ ಪಕ್ಷ, ಉತ್ತರ ಪ್ರದೇಶ ಚುನಾವಣೆ ಬಿಜೆಪಿ ಪಾಲಿಗೆ ಜೀವನ್ಮರಣದ ಪ್ರಶ್ನೆ ಎನಿಸಿದೆ. ಕೇವಲ ಘೋಷಣೆ ಕೂಗಬೇಡಿ, ಅಡಿಗಲ್ಲನ್ನಿಟ್ಟು ಕೆಲಸ ಆರಂಭಿಸಿ ಎಂದು ಹೇಳಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕಿಸ್ತಾನವನ್ನು ನೈಸ್ ಮಾಡುತ್ತಿರುವ ಡೊನಾಲ್ಡ್ ಟ್ರಂಪ್ ಗಿದೆ ಖತರ್ನಾಕ್ ಪ್ಲ್ಯಾನ್

Karnataka Weather: ಎರಡು ದಿನಗಳಿಗೆ ಹವಾಮಾನದಲ್ಲಿ ಆಗಲಿದೆ ಮಹತ್ವದ ಬದಲಾವಣೆ

ಇಸ್ರೇಲ್ ದಾಳಿಗೆ ಗಟ್ಟಿಯಾಗಿ ನಿಲ್ಲುವಂತೆ ಇರಾನ್ ನಾಯಕ ಖಮೇನಿ ಜನತೆಗೆ ಸಂದೇಶ

ಇರಾನ್ ಬೆನ್ನಲ್ಲೇ ಇಸ್ರೇಲ್‌ನಿಂದ ಭಾರತೀಯರನ್ನು ಕರೆತರಲು ಮುಂದಾದ ಕೇಂದ್ರ ಸರ್ಕಾರ

ರಾಹುಲ್ ಗಾಂಧಿ ಜನ್ಮದಿನಕ್ಕೆ ಡಿಕೆಶಿಯಿಂದ ಕಣ್ಣುಗಳೇ ಗಿಫ್ಟ್

ಮುಂದಿನ ಸುದ್ದಿ
Show comments