Webdunia - Bharat's app for daily news and videos

Install App

ದೇಶಭಕ್ತಿ ಘೋಷಣೆ ಸಾಕು, ರಾಮಮಂದಿರ ನಿರ್ಮಾಣಕ್ಕೆ ಮುಂದಾಗಬೇಕು: ಬಿಜೆಪಿಗೆ ಶಿವಸೇನೆ

Webdunia
ಗುರುವಾರ, 13 ಅಕ್ಟೋಬರ್ 2016 (19:35 IST)
ದೇಶ ಭಕ್ತಿ ಘೋಷಣೆಗಳನ್ನು ಕೂಗಿದರೆ ಮಾತ್ರ ಸಾಲದು. ರಾಮಮಂದಿರ ನಿರ್ಮಾಣಕ್ಕೆ ಮುಂದಾಗಿ ಎಂದು ಶಿವಸೇನೆ ಬಿಜೆಪಿಗೆ ತಾಕೀತು ಮಾಡಿದೆ.
 
ಮುಂಬರುವ ಉತ್ತರಪ್ರದೇಶ ಚುನಾವಣೆಯಲ್ಲಿ ಬಿಜೆಪಿ ರಾಮಮಂದಿರ ವಿಷಯ ಪ್ರಸ್ತಾಪಿಸಲಿದೆ ಎನ್ನುವ ಬಿಜೆಪಿ ನಾಯಕ ಸುಬ್ರಹ್ಮಣ್ಯಂ ಸ್ವಾಮಿ ಹೇಳಿಕೆ ನೀಡಿದ ಮಾರನೇ ದಿನವೇ ಶಿವಸೇನೆ ವಾಗ್ದಾಳಿ ನಡೆಸಿದೆ.
 
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ 300 ಸಂಸದರು ಬೆಂಬಲ ನೀಡಿದ್ದರೂ ಪ್ರಧಾನಿ ಮೋದಿ ರಾಮ ಮಂದಿರ ನಿರ್ಮಾಣಕ್ಕೆ ಮುಂದಾಗುತ್ತಿಲ್ಲ. ಇದರ ಹಿಂದಿರುವ ಕಾರಣವೇನು ಎಂದು ಶಿವಸೇನೆ ತನ್ನ ಮುಖವಾಣಿಯಾದ ಸಾಮ್ನಾ ಪತ್ರಿಕೆಯ ಸಂಪಾದಕೀಯದಲ್ಲಿ ಉಲ್ಲೇಖಿಸಿದೆ.
 
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ 300 ಸಂಸದರು ಬೆಂಬಲ ನೀಡಿದ್ದರೂ ರಾಮ ಮಂದಿರ ನಿರ್ಮಿಸಲು ಸಾಧ್ಯವಾಗದಿದ್ದರೇ ಮತ್ತೆ ಯಾವಾಗ ರಾಮಮಂದಿರ ನಿರ್ಮಾಣ ಮಾಡುತ್ತೀರಿ ಎಂದು ಸಂಪಾದಕೀಯದಲ್ಲಿ ಪ್ರಶ್ನಿಸಿದೆ.
 
ಪಿಒಕೆಯಲ್ಲಿ ನಡೆದ ಸೀಮಿತ ದಾಳಿ ಮತ್ತು ಲಕ್ನೋದಲ್ಲಿ ನಡೆದ ಭಾರಿ ಸಭೆಯ ನಂತರ ಪ್ರಧಾನಿ ಮೋದಿಗೆ ಮತ್ತಷ್ಟು ಬೆಂಬಲ ದೊರೆತಿದೆ. ಆದ್ದರಿಂದ, ಮೋದಿ ಕೂಡಲೇ ರಾಮಮಂದಿರ ನಿರ್ಮಾಣಕ್ಕೆ ಪ್ರಥಮ ಆದ್ಯತೆ ನೀಡುವುದು ಸೂಕ್ತ ಎಂದು ಸಲಹೆ ನೀಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನಗಳಲ್ಲಿ ಯಾಕೆ ಹೀಗಾಗುತ್ತಿದೆ, ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶವಾಯಿತು ಇಂಡಿಗೋ ವಿಮಾನ

ಯೋಗ ಜಗತ್ತನ್ನು ಒಂದುಗೂಡಿಸುತ್ತದೆ: ಪ್ರಧಾನಿ ನರೇಂದ್ರ ಮೋದಿ

ಸೊಸೆಯನ್ನು ತಾನೇ ಕೊಂದು, ನಾಪತ್ತೆ ನಾಟಕವಾಡಿದ್ದ ಮಾವ ಕೊನೆಗೂ ಅರೆಸ್ಟ್‌

ಇರಾನ್‌ನಿಂದ 290 ಭಾರತೀಯ ವಿದ್ಯಾರ್ಥಿಗಳು ಭಾರತಕ್ಕೆ ವಾಪಾಸ್‌, ಮೂರು ಹಂತದಲ್ಲಿ ಕಾರ್ಯಚರಣೆ

ಇಸ್ರೇಲ್‌ನಲ್ಲಿರುವ ಭಾರತೀಯರು ತಾಯ್ನಾಡಿಗೆ ವಾಪಾಸ್ಸಾಗಬೇಕೇ, ಸರ್ಕಾರ ಏನ್ ಹೇಳ್ತಿದೆ

ಮುಂದಿನ ಸುದ್ದಿ
Show comments