Publish Date: Wed, 14 Feb 2018 (11:46 IST)
Updated Date: Wed, 14 Feb 2018 (11:56 IST)
ಭೂಪಾಲ್: ಶಿವರಾತ್ರಿ ವೇಳೆ ಪ್ರಸಾದ ರೂಪದಲ್ಲಿ ನೀಡಿದ ಕಿಚಡಿಯನ್ನು ತಿಂದು ಸಾವಿರಾರು ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ತೆರಳಬೇಕಾದ ಘಟನೆ ಮಧ್ಯಪ್ರದೇಶದ ಬರ್ವಾನಿಯ ಆಶ್ರಮವೊಂದರಲ್ಲಿ ನಡೆದಿದೆ.
ಪ್ರಸಾದ ರೂಪದಲ್ಲಿ ಕಿಚಡಿಯನ್ನು ನೀಡಲಾಗಿದ್ದು, ಅದನ್ನು ತಿಂದ ಬಳಿಕ ಗ್ರಾಮಸ್ಥರಿಗೆ ಹೊಟ್ಟೆ ನೋವು ಮತ್ತು ವಾಂತಿ ಕಾಣಿಸಿಕೊಂಡಿದೆ. ಜಿಲ್ಲಾ ಆಸ್ಪತ್ರೆಯಲ್ಲಿ ಹಲವರಿಗೆ ಚಿಕಿತ್ಸೆ ನೀಡಲಾಗಿದೆ. ಕೆಲ ಅಸ್ವಸ್ಥರು ಖಾಸಗಿ ಆಸ್ಪತ್ರೆಗಳಿಗೂ ದಾಖಲಾಗಿದ್ದಾರೆ. ಇದುವರೆಗೆ ಯಾವುದೇ ಪ್ರಾಣ ಹಾನಿಯಾಗಿಲ್ಲ ಎಲ್ಲರೂ ಚೇತರಿಸಿಕೊಳ್ಳುತ್ತಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ