Select Your Language

Notifications

webdunia
webdunia
webdunia
webdunia

ಲೋಕಸಭೆಯಲ್ಲಿ ಶಿವಸೇನೆ ಸಂಸದರಿಂದ ಗೂಂಡಾಗಿರಿ

ಅಶೋಕ್ ಗಜಪತಿರಾಜು
NewDelhi , ಗುರುವಾರ, 6 ಏಪ್ರಿಲ್ 2017 (12:55 IST)
ನವದೆಹಲಿ: ಶಿವಸೇನೆ ಸಂಸದರ ಪುಂಡಾಟ ಲೋಕಸಭೆಯವರೆಗೂ ತಲುಪಿದೆ. ಏರ್ ಇಂಡಿಯಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ರವೀಂದ್ರ ಗಾಯಕ್ವಾಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವರ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ.

 

ಅಧಿವೇಶನದಲ್ಲಿ ಗಾಯಕ್ವಾಡ್ ರನ್ನು ವಿಮಾನಯಾನ ಸಂಸ್ಥೆಗಳು ಪ್ರಯಾಣ ನಿಷೇಧ ಹೇರಿದ್ದರ ವಿರುದ್ಧ ಚರ್ಚೆ ನಡೆಯುತ್ತಿದ್ದಾಗ ಈ ಘಟನೆ ನಡೆದಿದೆ. ಈ ಸಂದರ್ಭದಲ್ಲಿ ನಾಗರಿಕ ವಿಮಾನ ಯಾನ ಸಚಿವ ಅಶೋಕ್ ಗಜಪತಿರಾಜು ಏರ್ ಇಂಡಿಯಾ ಸಿಬ್ಬಂದಿಯನ್ನು ಸಮರ್ಥಿಸಿಕೊಂಡರು.

 
ಇದು ಶಿವಸೇನೆ ಸಂಸದರ ಆಕ್ರೋಶಕ್ಕೆ ಕಾರಣವಾಯಿತು. ಇದರಿಂದ ಕೆರಳಿದ ಸಂಸದರು ಸಚಿವರ ಮೇಲೆ ಹಲ್ಲೆಗೆ ಮುಂದಾದರು. ಈ ಸಂದರ್ಭದಲ್ಲಿ ಗೃಹಸಚಿವ ರಾಜನಾಥ್ ಸಿಂಗ್ ಮತ್ತು ಸ್ಮೃತಿ ಇರಾನಿ ಮಧ್ಯಪ್ರವೇಶಿಸಿ ಹಲ್ಲೆ ತಡೆದರು.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

Share this Story:

Follow Webdunia kannada

ಮುಂದಿನ ಸುದ್ದಿ

ಅಂತ್ಯಕ್ರಿಯೆಗೆ ಎಚ್ ಡಿ ಕುಮಾರಸ್ವಾಮಿ ಬರುವಂತೆ ಡೆತ್ ನೋಟ್ ಬರೆದ ರೈತ!