Webdunia - Bharat's app for daily news and videos

Install App

ಶಾಕಿಂಗ್: ಉಗ್ರ ಬುರ್ಹಾನ್‌ ವನಿ ಹತ್ಯೆಗೆ ಪೊಲೀಸರು ಯವಕರ ಕ್ಷಮೆ ಕೋರಲಿ ಎಂದ ಸಿಎಂ ಮೆಹಬೂಬಾ ಮುಫ್ತಿ

Webdunia
ಬುಧವಾರ, 3 ಆಗಸ್ಟ್ 2016 (19:01 IST)
ಹಿಜ್ಬುಲ್ ಮುಜಾಹಿದಿನ್ ಉಗ್ರ ಬುರ್ಹಾನ್ ವನಿಯನ್ನು ಹತ್ಯೆ ಮಾಡಿದ್ದಕ್ಕಾಗಿ ಪೊಲೀಸರು ರಾಜ್ಯದ ಯುವಕರ ಕ್ಷಮೆ ಕೋರಲಿ ಎಂದು ಜಮ್ಮು ಕಾಶ್ಮಿರದ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ನೀಡಿರುವ ಹೇಳಿಕೆ ರಾಜಕೀಯ ವಲಯದಲ್ಲಿ ಭಾರಿ ಕೋಲಾಹಲಕ್ಕೆ ಕಾರಣವಾಗಿದೆ.
 
ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಕಾಶ್ಮಿರಿ ಯುವಕರ ಕ್ಷಮೆ ಕೋರಿದಲ್ಲಿ ರಾಜ್ಯದಲ್ಲಿ ಶಾಂತಿ ನೆಲಸಬಹುದು ಎಂದು ಹೇಳಿದ್ದಾರೆ ಎನ್ನಲಾಗಿದೆ. 
 
ಪೊಲೀಸರು ರಸ್ತೆಗಳಲ್ಲಿ ಮತ್ತು ಬೀದಿಗಳಲ್ಲಿ ಓಡಾಡದಂತೆ ಸಲಹೆ ನೀಡಿದ್ದಾರೆ ಎಂದು ಅನಾಮಧೇಯರಾಗಿರಲು ಬಯಸಿದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. 
 
ಇದಕ್ಕಿಂತ ಮೊದಲು, ದಕ್ಷಿಣ ಅನಂತ್‌ನಾಗ್ ಜಿಲ್ಲೆಯ ಕೋಕೆರ್‌ನಾಗ್ ಪ್ರದೇಶದಲ್ಲಿ ಜುಲೈ 8 ರಂದು ಅಡಗಿದ್ದ ಮೂವರು ಉಗ್ರರಲ್ಲಿ ಬುರ್ಹಾನ್ ವನಿ ಹಿಜ್ಬುಲ್ ಮುಜಾಹಿದಿನ್ ಸಂಘಟನೆಗೆ ಸೇರಿದವನು ಎಂದು ಸೇನಾಪಡೆಗಳಿಗೆ ತಿಳಿದಿರಲಿಲ್ಲ ಎಂದು ಸಿಎಂ ಮೆಹಬೂಬಾ ಹೇಳಿಕೆ ನೀಡಿರುವುದು ಪ್ರತಿಯೊಬ್ಬರಿಗೆ ಆಘಾತವನ್ನು ತಂದಿತ್ತು.  
 
ಒಂದು ವೇಳೆ, ಸೇನಾಪಡೆಗಳಿಗೆ ಹಿಜ್ಬುಲ್ ಉಗ್ರ ಬುಹ್ರಾನ್ ವನಿ ಅಡಗಿದ್ದಾನೆ ಎಂದು ಗೊತ್ತಾಗಿದ್ದಲ್ಲಿ ಮತ್ತೊಂದು ಅವಕಾಶ ಕೊಡಬೇಕಾಗಿತ್ತು ಎಂದು ಸಿಎಂ ಮೆಹಬೂಬಾ ಮುಫ್ತಿ ನೀಡಿದ ಹೇಳಿಕೆಗೆ ಭಾರಿ ವಿರೋಧ ವ್ಯಕ್ತವಾಗಿತ್ತು.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮಂಗಳೂರಿನಲ್ಲಿ ಸುರಿದ ಮಳೆಗೆ ಅವಾಂತರ: ರಸ್ತೆ ಮೇಲೆ ಪ್ರವಾಹದಂತೆ ಹರಿದ ಮಳೆ ನೀರು, Video Viral

Karnataka Rains: ಈ ಆರು ಜಿಲ್ಲೆಗಳಿಗೆ ನಾಳೆಯೂ ಹವಾಮಾನ ಎಚ್ಚರಿಕೆ ಗಮನಿಸಿ

ಮುಂದಿನ ಸುದ್ದಿ
Show comments