ಅಡುಗೆ ಎಣ್ಣೆ ಬೆಲೆಯೇರಿಕೆ ಶಾಕ್?

Webdunia
ಭಾನುವಾರ, 24 ಏಪ್ರಿಲ್ 2022 (10:08 IST)
ನವದೆಹಲಿ : ಜಗತ್ತಿನ ಅತಿದೊಡ್ಡ ತಾಳೆ ಎಣ್ಣೆ ಉತ್ಪಾದಕ ರಾಷ್ಟ್ರವಾದ ಇಂಡೋನೇಷ್ಯಾ, ಸ್ಥಳೀಯ ಎಣ್ಣೆ ಕೊರತೆ ಪೂರೈಸಲು ಏ.28 ರಿಂದ ವಿದೇಶಗಳಿಗೆ ಖಾದ್ಯತೈಲ ರಫ್ತು ಮಾಡುವುದನ್ನು ನಿಲ್ಲಿಸುವುದಾಗಿ ಘೋಷಿಸಿದೆ.
 
ಹೀಗಾಗಿ ಈಗಾಗಲೇ ಉಕ್ರೇನ್-ರಷ್ಯಾ ಯುದ್ಧದ ಕಾರಣದಿಂದಾಗಿ ಗಗನಕ್ಕೇರಿರುವ ಇನ್ನಷ್ಟುಏರಿಕೆಯಾಗುವ ಭೀತಿ ಎದುರಾಗಿದೆ.

ಉಕ್ರೇನ್ ಯುದ್ಧದಿಂದಾಗಿ ಜಾಗತಿಕ ಹಣದುಬ್ಬರದಲ್ಲಿ ದಾಖಲೆಯ ಏರಿಕೆ ಕಂಡುಬಂದ ಹಿನ್ನೆಲೆಯಲ್ಲಿ ತಮ್ಮ ದೇಶದ ನಾಗರಿಕರಿಗೆ ಆಹಾರೋತ್ಪನ್ನಗಳು ಕೈಗೆಟುಕುವ ದರದಲ್ಲಿ ಲಭ್ಯವಾಗಬೇಕು ಎಂಬ ಉದ್ದೇಶದಿಂದ ಇಂಡೋನೇಷ್ಯಾದ ಅಧ್ಯಕ್ಷ ಜೊಕೊ ವಿಡೋಡೊ ತಾಳೆಎಣ್ಣೆಯ ರಫ್ತಿನ ಮೇಲೆ ನಿರ್ಬಂಧ ಹೇರಿದ್ದಾರೆ.

ಇದರಿಂದಾಗಿ ಭಾರತ, ಪಾಕಿಸ್ತಾನ ಹಾಗೂ ಬಾಂಗ್ಲಾದೇಶದಂತಹ ಅಡುಗೆ ಎಣ್ಣೆಯನ್ನು ಆಮದು ಮಾಡಿಕೊಳ್ಳುವ ರಾಷ್ಟ್ರಗಳಿಗೆ ಭಾರೀ ಹೊಡೆತ ಬೀಳಲಿದೆ. ಇಂಡೋನೇಷ್ಯಾ ನಿರ್ಬಂಧ ಹೇರಿದ್ದ ಕಾರಣ ದೇಶದಲ್ಲಿ ಪ್ರತಿ ತಿಂಗಳು 40 ಲಕ್ಷ ಟನ್ ತಾಳೆ ಎಣ್ಣೆಯ ಕೊರತೆಯುಂಟಾಗಲಿದೆ.

ಕೋವಿಡ್ ಹಿನ್ನೆಲೆಯಲ್ಲಿ ಕಾರ್ಮಿಕರ ಕೊರತೆಯನ್ನು ಅನುಭವಿಸುತ್ತಿರುವ ಜಗತ್ತಿನ 2 ನೇ ಅತಿದೊಡ್ಡ ಅಡುಗೆ ಎಣ್ಣೆ ಉತ್ಪಾದಕ ರಾಷ್ಟ್ರ ಮಲೇಷ್ಯಾಗೆ ಈ ಕೊರತೆಯನ್ನು ನೀಗಿಸುವುದು ಅಸಾಧ್ಯವಾಗಿದೆ.

ಈ ಮೊದಲು ಉಕ್ರೇನ್ನಿಂದ ಆಮದು ಮಾಡಿಕೊಳ್ಳುತ್ತಿದ್ದ ಸೂರ್ಯಕಾಂತಿ ಎಣ್ಣೆಯೂ ಲಭ್ಯವಾಗದ ಹಿನ್ನೆಲೆಯಲ್ಲಿ ಏರಿಕೆಯಾದ ಖಾದ್ಯತೈಲದ ಬೆಲೆಯು ಇನ್ನಷ್ಟುಏರಿಕೆಯಾಗುವುದು ನಿಶ್ಚಿತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ಲೈಮ್ಯಾಕ್ಸ್‌ ಹಂತ ತಲುಪಿದ ಧರ್ಮಸ್ಥಳ ಬುರುಡೆ ಕೇಸ್‌: ಎಸ್‌ಐಟಿ ಚಾರ್ಜ್‌ಶೀಟ್‌ನತ್ತ ಎಲ್ಲರ ಚಿತ್ತ

Karur Stampede: ಸ್ವತಂತ್ರ ತನಿಖೆ ಕೋರಿ ಸುಪ್ರೀಂ ಕೋರ್ಟ್‌ ಕದ ತಟ್ಟಿದ ನಟ ವಿಜಯ್‌ ಪಕ್ಷ

ಪಟಾಕಿ ಕಾರ್ಖಾನೆಯಲ್ಲಿ ಮತ್ತೊಂದು ದುರಂತ: ಸ್ಫೋಟ ಸಂಭವಿಸಿ ಆರು ಮಂದಿ ಕಾರ್ಮಿಕರು ಸಜೀವ ದಹನ

ಪಾಕ್‌ನಲ್ಲಿ ರಕ್ತದೋಕುಳಿ: ಎನ್‌ಕೌಂಟರ್‌ ವೇಳೆ 11 ಯೋಧರು ಸೇರಿ 30 ಮಂದಿ ಸಾವು

ಕಮಲದ ವಿನ್ಯಾಸದಲ್ಲಿ ತಯಾರಾದ ಮುಂಬೈನ ಹೊಸ ವಿಮಾನ ನಿಲ್ದಾಣ ಉದ್ಘಾಟಿಸಿದ ಮೋದಿ

ಮುಂದಿನ ಸುದ್ದಿ
Show comments