Webdunia - Bharat's app for daily news and videos

Install App

ಶಾಕಿಂಗ್:ತಂದೆಯ ಶವದೊಟ್ಟಿಗೇ ವಾಸ ಮಾಡುತ್ತಿದ್ದ ಪುತ್ರ !

Webdunia
ಬುಧವಾರ, 24 ನವೆಂಬರ್ 2021 (09:48 IST)
ತಂದೆ ಮೃತಪಟ್ಟು ಮೂರು ತಿಂಗಳಾದರೂ ಅವರ ದೇಹವನ್ನು ಮಣ್ಣು ಮಾಡದೆ, ಆ ಶವದೊಂದಿಗೆ ಮೂರು ತಿಂಗಳು ಕಳೆದ 40ವರ್ಷದ ಮಗನನ್ನು ಇದೀಗ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.
ಈ ಶಾಕಿಂಗ್ ಘಟನೆ ನಡೆದದ್ದು ಕೋಲ್ಕತ್ತದಲ್ಲಿ. ಮೃತ ವ್ಯಕ್ತಿಯ ಹೆಸರು ಸಂಗ್ರಾಮ್ ಡೇ. ಅವರಿಗೆ 70 ವರ್ಷವಾಗಿತ್ತು. ವಯೋಸಹಜ ಸಮಸ್ಯೆಯಿಂದ ಮೃತಪಟ್ಟಿದ್ದರು.  ಆದರೆ ಅವರ ಮಗ ಕೌಶಿಕ್ ಡೇ  ಆ ಶವವನ್ನು ಏನೂ ಮಾಡಲಾಗದೆ ಅದರೊಂದಿಗೆ ಮೂರು ತಿಂಗಳಿಂದ ವಾಸವಾಗಿದ್ದ.
ಪುತ್ರ ಕೌಶಿಕ್ ಮಾನಸಿಕವಾಗಿ ಸ್ಥಿಮಿತದಲ್ಲಿ ಇಲ್ಲದ ವ್ಯಕ್ತಿ ಎಂದು ಹೇಳಿರುವ ಪೊಲೀಸರು ಇದೀಗ ಶವವನ್ನು ಪೋಸ್ಟ್ಮಾರ್ಟಮ್ಗೆ ಕಳಿಸಿದ್ದಾರೆ. ಸಹಜ ಸಾವು ಎಂದು ಮೇಲ್ನೋಟಕ್ಕೆ ಅನ್ನಿಸುತ್ತದೆ. ಆದರೆ ಈ ಬಗ್ಗೆ ಸ್ಪಷ್ಟ ಮಾಹಿತಿ ಸಿಗುವುದು ಪೋಸ್ಟ್ ಮಾರ್ಟಮ್ ರಿಪೋರ್ಟ್ ಬಂದ ಬಳಿಕವಷ್ಟೇ ಎಂದು ಹೇಳಿದ್ದಾರೆ. ಸಂಗ್ರಾಮ್ ಡೇ ಅವರು ಮುಂಬೈನ ಬಾಬಾ ಅಟೋಮಿಕ್ ರಿಸರ್ಚ್ ಸೆಂಟರ್ನಲ್ಲಿ ಕೆಲಸ ಮಾಡಿದವರು. ಕೋಲ್ಕತ್ತದ ಕೆ.ಪಿ.ರಾಯ್ ಲೇನ್ನಲ್ಲಿ ಅವರ ಮನೆಯಿತ್ತು. ಇದೀಗ ಅವರ ಶವ ಬಹುತೇಕ ಅಸ್ಥಿಪಂಜರದಂತಾಗಿದ್ದು, ಪೊಲೀಸರು ವಶಪಡಿಸಿಕೊಂಡಿದ್ದಾರೆ.   ಮೂರು ತಿಂಗಳ ಹಿಂದೆ ತಂದೆ ಮೃತಪಟ್ಟಿದ್ದಾಗಿ ಕೌಶಿಕ್ ತಿಳಿಸಿದ್ದರೂ, ನಿಖರ ಸಮಯ ತಿಳಿಯಲು ಪೋಸ್ಟ್ಮಾರ್ಟಮ್ ರಿಪೋರ್ಟ್ ಬರಬೇಕಿದೆ.
ಇನ್ನೊಂದು ಶಾಕಿಂಗ್ ಸುದ್ದಿಯೆಂದರೆ, ಪತ್ನಿ ಅರುಣಾ ಡೇ (65) ಕೂಡ ಅದೇ ಮನೆಯಲ್ಲಿದ್ದಾರೆ. ಆದರೆ ಅವರಿಗೆ ಎದ್ದು ಓಡಾಡಲೂ ಆಗದಷ್ಟು ಅನಾರೋಗ್ಯ. ಸಂಗ್ರಾಮ್ ಡೇ ಕೆಲವು ದಿನಗಳಿಂದ ಕಾಣುತ್ತಿಲ್ಲ. ಆ ಮನೆ ಸ್ವಲ್ಪ ವಿಭಿನ್ನವಾಗಿ ತೋರುತ್ತಿದೆ ಎಂದು ಅಕ್ಕಪಕ್ಕದ ಮನೆಯವರು ಸುಳಿವು ನೀಡಿದ ಬೆನ್ನಲ್ಲೇ ಅಲ್ಲಿಗೆ ಹೋಗಿ ಪರಿಶೀಲನೆ ನಡೆಸಿದ್ದೇವೆ. ಆಗ ಅವರು ಸತ್ತಿದ್ದು ಬೆಳಕಿಗೆ ಬಂದಿದೆ. ಹೆಚ್ಚಿನ ತನಿಖೆ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯನವರೇ ಇನ್ನೆಷ್ಟು ದಿನ ಈ ಭಂಡ ಬಾಳು: ಆರ್‌ ಅಶೋಕ್ ವ್ಯಂಗ್ಯ

ಮರಾಠಿ vs ಹಿಂದೆ ಭಾಷೆ ವಿವಾದ, ಭಾಷೆಯ ಹೆಸರಿನಲ್ಲಿ ಜನರನ್ನು ವಿಭಜಿಸಬಾರದು: ಕಂಗನಾ ರನೌತ್‌

ಕಾಂಗ್ರೆಸ್‌ನಲ್ಲಿ ಡಿಕೆ ಶಿವಕುಮಾರ್‌ಗೆ ಉನ್ನತ ಸ್ಥಾನ ಸಿಗಬೇಕು: ರಂಭಾಪುರಿ ಸ್ವಾಮೀಜಿ

ಸದ್ಯದಲ್ಲೇ ಸಿದ್ದರಾಮಯ್ಯ ದೆಹಲಿಗೆ ವರ್ಗಾವಣೆ ಪಕ್ಕಾ: ಬಿವೈ ವಿಜಯೇಂದ್ರ

ಸಂದೇಶ್‌ಖಾಲಿ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸಿಬಿಐ: ಟಿಎಂಸಿ ಮುಖಂಡ ಶಹಜಹಾನ್‌ ಶೇಖ್‌ಗೆ ಶಾಕ್‌

ಮುಂದಿನ ಸುದ್ದಿ
Show comments