ದುರದೃಷ್ಟಕರ ಘಟನೆಯೊಂದರಲ್ಲಿ ಫ್ಲೈಓವರ್ ಕುಸಿತಗೊಂಡಿದ್ದರಿಂದ ಕನಿಷ್ಠ 17 ಜನರು ಸಾವನ್ನಪ್ಪಿದ್ದು ಹಲವಾರು ಮಂದಿ ಗಾಯಗೊಂಡಿದ್ದಾರೆ. ಹಲವು ವಾಹನಗಳು ಫ್ಲೈಓವರ್ ಮಣ್ಣಿನಲ್ಲಿಯೇ ಹೂತುಹೋಗಿವೆ ಎಂದು ಮೂಲಗಳು ತಿಳಿಸಿವೆ.
ಅಮೆರಿಕದ ವಾಷಿಂಗ್ಟನ್ನಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಆಘಾತ ವ್ಯಕ್ತಪಡಿಸಿ, ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ನೆರವು ನೀಡುವಂತೆ ಕೇಂದ್ರ ಸಚಿವರಿಗೆ ಸಲಹೆ ನೀಡಿದ್ದಾರೆ.
ಗೃಹ ಸಚಿವ ರಾಜನಾಥ್ ಸಿಂಗ್, ಎನ್ಡಿಆರ್ಎಫ್ ತಂಡವನ್ನು ಕೋಲ್ಕತಾಗೆ ರವಾನಿಸಿದ್ದು, ಅಗತ್ಯವಾದ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದಾರೆ.
ಸೇತುವೆ ಅಡಿಯಲ್ಲಿ ಸಿಲುಕಿರುವ ಎಲ್ಲರನ್ನು ರಕ್ಷಿಸಲು ಸಾಧ್ಯವಾಗುವಂತೆ ಎನ್ಡಿಆರ್ಎಫ್ ತುಕಡಿಯನ್ನು ರವಾನಿಸುವಂತೆ ಮಹಾನಿರ್ದೇಶಕ ಓ.ಪಿ.ಸಿಂಗ್ಗೆ ಗೃಹ ಸಚಿವ ರಾಜನಾಥ್ ಸಿಂಗ್ ಆದೇಶಿಸಿದ್ದಾರೆ.