ಶಾಕಿಂಗ್: ಧಾರಾವಾಹಿ ತಂದ ಅವಾಂತರ!

Webdunia
ಬುಧವಾರ, 29 ಡಿಸೆಂಬರ್ 2021 (15:04 IST)
ಚೆನ್ನೈ : ಮಹಿಳೆಯರು ಧಾರಾವಾಹಿ ನೋಡುತ್ತಾ ಕೂತರೆ ಜಗತ್ತೇ ತಲೆಕೆಳಗಾದರೂ ಗೊತ್ತಾಗುವುದಿಲ್ಲ ಎಂಬುದು ಹಲವು ಪುರುಷರ ಆರೋಪ.

ತಮಿಳುನಾಡಿನಲ್ಲಿ ನಡೆದಿರುವ ಘಟನೆಯೊಂದನ್ನು ಕೇಳಿದರೆ ನಿಮಗೂ ಇದು ಸತ್ಯ ಎನಿಸುವುದು ಗ್ಯಾರಂಟಿ.

ಧಾರಾವಾಹಿ ನೋಡುತ್ತಾ ಕುಳಿತಿದ್ದ ಮಹಿಳೆಯರಿಬ್ಬರು ಜಗತ್ತಿನ ಅರಿವೇ ಇಲ್ಲದಂತೆ ಕುಳಿತಿದ್ದರು. ಅದನ್ನೇ ಬಂಡವಾಳ ಮಾಡಿಕೊಂಡ ನಾಲ್ವರು ಕಳ್ಳರು ಮನೆಯೊಳಗೆ ನುಗ್ಗಿ 19 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ.

ಆಗ ಮನೆಯೊಳಗೆ ನುಗ್ಗಿದ ಮುಸುಕುಧಾರಿ ದರೋಡೆಕೋರರಿಬ್ಬರು ತೆರೆದ ಬಾಗಿಲಿನಿಂದ ಸೈಲೆಂಟಾಗಿ ಒಳಗೆ ಹೋಗಿ ನೋಡಿದ್ದಾರೆ. ಆಗ ಹಾಲ್ನಲ್ಲಿ ಟಿವಿ ನೋಡುತ್ತಾ ಇಬ್ಬರು ಮಹಿಳೆಯರು ಮೈಮರೆತಿರುವುದನ್ನು ನೋಡಿದರು.

ಹಾಗೇ, ರೂಮಿನೊಳಗೆ ಹೋಗಿ ಅಲ್ಲಿದ್ದ ಹಣವನ್ನೆಲ್ಲ ದೋಚಿಕೊಂಡರು. ಆದರೆ, ವಾರ್ಡ್ರೋಬ್ನ ಕೀ ಎಲ್ಲಿದೆ ಎಂದು ಗೊತ್ತಾಗಲಿಲ್ಲ. ಹೀಗಾಗಿ, ಹಾಲ್ಗೆ ಬಂದು ಟಿವಿ ನೋಡುತ್ತಿದ್ದ ಇಬ್ಬರು ಮಹಿಳೆಯರನ್ನು ಕಟ್ಟಿ ಹಾಕಿ, ಕೀ ಕೇಳಿದರು.
ಆಗಲೇ ತಮ್ಮ ಮನೆಯೊಳಗೆ ದರೋಡೆಕೋರರು ಬಂದಿದ್ದಾರೆ ಎಂಬ ವಿಷಯ ಆ ಇಬ್ಬರು ಮಹಿಳೆಯರಿಗೆ ಗೊತ್ತಾಗಿದ್ದು!. ಅವರಿಬ್ಬರನ್ನೂ ಕಟ್ಟಿ ಹಾಕಿ ವಾರ್ಡ್ರೋಬ್ನಲ್ಲಿದ್ದ ಒಡವೆ, ಹಣವನ್ನೆಲ್ಲ ದೋಚಿಕೊಂಡು ಹೋಗಿದ್ದಾರೆ.

ಚಾಕು ತೋರಿಸಿ, ಹೆದರಿಸಿ ಮನೆಯೊಳಗಿನ 19 ಲಕ್ಷ ರೂ. ಮೌಲ್ಯದ ಒಡವೆ, ಹಣವನ್ನು ದೋಚಿಕೊಂಡು ಹೋಗಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ನಾಲ್ವರು ಬೈಕ್ ಗಳಲ್ಲಿ ಬಂದು, ಅವರಲ್ಲಿ ಇಬ್ಬರು ಗೇಟ್ ಬಳಿ ಕಾವಲು ಕಾಯುತ್ತಿದ್ದರು ಮತ್ತು ಇಬ್ಬರು ಮನೆಯೊಳಗೆ ನುಗ್ಗಿ ದರೋಡೆ ಮಾಡಿರುವುದು ಕಂಡು ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾನೂನುಬಾಹಿರವಾಗಿ ಕಾಂಗ್ರೆಸ್ ಭವನಕ್ಕೆ ನಿವೇಶನ ವಿರುದ್ಧ ಬಿಜೆಪಿ ಹೋರಾಟ

26ರಂದು ಯಡಿಯೂರಪ್ಪನವರ ಅಭಿಮಾನೋತ್ಸವದ ಭೂಮಿಪೂಜೆ

ಜಲ್ಮುರಿ ನಾನು ಸೇವಿಸಿದ್ರೆ, ಅದರ ಖಾರ ತಟ್ಟಿದ್ದು ಮಾತ್ರ ಟಿಎಂಸಿಗೆ: ಮೋದಿ ವ್ಯಂಗ್ಯ

ಮೇ 18ರಿಂದ ಎಸ್ಸೆಸ್ಸೆಲ್ಸಿ ಎರಡನೇ ಪರೀಕ್ಷೆ: ಮರುಮೌಲ್ಯಮಾಪನ ಬಗ್ಗೆ ಇಲ್ಲಿದೆ ಮಾಹಿತಿ

ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಕಲಬುರಗಿ ಲಾಸ್ಟ್: ಟ್ವೀಟ್ ಮಾಡಲ್ವಾ ಎಂದು ಪ್ರಿಯಾಂಕ್ ಖರ್ಗೆ ಕಾಲೆಳೆದ ಬಿಜೆಪಿ

ಮುಂದಿನ ಸುದ್ದಿ
Show comments