Webdunia - Bharat's app for daily news and videos

Install App

ಅನೈತಿಕ ಸಂಬಂಧ: ಮೂರು ವರ್ಷದ ಮಗುವಿನ ಹತ್ಯೆಗೈದ ತಾಯಿ

Webdunia
ಸೋಮವಾರ, 6 ಜೂನ್ 2016 (12:35 IST)
ಕೆಟ್ಟ ಮಕ್ಕಳು ಜನಿಸಬಹುದು. ಆದರೆ ಕೆಟ್ಟ ತಾಯಿ ಎಂದಿಗೂ ಇರಲಾರಳು ಎಂದು ಹೇಳುತ್ತಾರೆ. ಆದರೆ ಇತ್ತೀಚಿನ ಕೆಲ ಘಟನೆಗಳನ್ನು ಈ ಮಾತಿನ ಅರ್ಥಗೆಡಿಸುತ್ತಿವೆ. ಯುವಕನೊಂದಿಗೆ ತನ್ನ ಅನೈತಿಕ ಸಂಬಂಧವನ್ನು ಮುಂದುವರೆಸಲು ತಾಯಿಯೋರ್ವಳು ತನ್ನ ಮೂರು ವರ್ಷದ ಮಗುವನ್ನೇ ಹತ್ಯೆಗೈದ ಹೇಯ ಘಟನೆ ತಮಿಳುನಾಡಿನ ಕೊಯಿಮತ್ತೂರಿನಲ್ಲಿ ನಡೆದಿದೆ. 
 
ಜಿಲ್ಲೆಯ ಸೆಲ್ವಪುರಮ್ ನಿವಾಸಿಯಾಗಿರುವ ಮಹಿಳೆ ದಿವ್ಯಾ ಕಳೆದ ವರ್ಷ ಗಂಡನಿಂದ ಬೇರ್ಪಟ್ಟು ತನ್ನ ತವರಿನಲ್ಲಿ ವಾಸವಾಗಿದ್ದಳು. ಆಕೆಗೆ ಮೂರು ವರ್ಷದ ಹೆಣ್ಣು ಮಗು ಸಹ ಇತ್ತು. 
 
ಸೇಲ್ಸ್ ಕೆಲಸಕ್ಕೆ ಹೋಗುತ್ತಿದ್ದ ಆಕೆಗೆ ಯುವಕನೊಬ್ಬನ ಪರಿಚಯವಾಗಿದ್ದು ಬಳಿಕ ಅವರಿಬ್ಬರಲ್ಲಿ ಪ್ರೇಮ ಸಂಬಂಧ ಬೆಳೆದಿದೆ. ಈ ವಿಷಯ ಆಕೆಯ ತಂದೆ-ತಾಯಿಗೆ ಗೊತ್ತಾಗಿ ಮಗುವಿನ ಭವಿಷ್ಯದ ದೃಷ್ಟಿಯಿಂದ ಸಂಬಂಧವನ್ನು ಮುಂದುವರೆಸದಂತೆ ಎಚ್ಚರಿಕೆ ನೀಡಿದ್ದರು. 
 
ತಂದೆ-ತಾಯಿಗಳ ಈ ಎಚ್ಚರಿಕೆ ದಿವ್ಯಾಳಿಗೆ ಮಗಳೇ ತನ್ನ ಬದುಕಿಗೆ ತಡೆಗೋಡೆ ಎಂಬ ಯೋಚನೆಯನ್ನು ಬೆಳೆಸಿಕೊಳ್ಳಲು ಕಾರಣವಾಯಿತು. ಹೀಗಾಗಿ ಆಕೆಯನ್ನು ಮುಗಿಸುವ ಸಂಚು ರೂಪಿಸಿದ ಅವಳು ರಾತ್ರಿ ಮಲಗಿದ್ದಾಗ ಉಸಿರುಗಟ್ಟಿಸಿ ಕೊಲೆಗೈದಿದ್ದಾಳೆ.
 
ಮರುದಿನ ಆಕೆಯ ಸಹೋದರ ಮಗು ಎಷ್ಟು ಹೊತ್ತಾದರೂ ಏಳುತ್ತಿಲ್ಲ, ಜತೆಗೂ ಅಲ್ಲಾಡದೆ ಮಲಗಿರುವುದನ್ನು ನೋಡಿದ್ದಾನೆ. ತಕ್ಷಣ ಆಕೆಯನ್ನು ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಗಿ ವೈದ್ಯರು ಈಗಾಗಲೇ ಅದು ಸಾವನ್ನಪ್ಪಿದೆ ಎಂದು ಘೋಷಿಸಿದ್ದಾರೆ. 
 
ತನ್ನ ಅಕ್ಕನ ಮೇಲೆಯೇ ಸಂಶಯಗೊಂಡ ದಿವ್ಯಾಳ ಸಹೋದರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾನೆ. ಪೊಲೀಸ್ ವಿಚಾರಣೆ ಸಂದರ್ಭದಲ್ಲಿ ದಿವ್ಯಾ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾಳೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿ.ಆರ್ ಪಾಟೀಲ್ ಸತ್ಯವನ್ನೇ ಹೇಳಿದ್ದಾರೆ : ವಿಜಯೇಂದ್ರ

ಇರಾನ್ ಮೇಲೆ ಅಮೆರಿಕೆ ಏರ್‌ಸ್ಟ್ರೈಕ್‌‌: ಡೊನಾಲ್ಡ್ ಟ್ರಂಪ್ ಗಂಡೆದೆಯನ್ನು ಕೊಂಡಾಡಿದ ಇಸ್ರೇಲ್ ಪ್ರಧಾನಿ

ಪಹಲ್ಗಾಮ್‌ ದಾಳಿ: ಪಾಕ್‌ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರು ಅರೆಸ್ಟ್‌

ಸ್ಟೇಟ್ ಸ್ಪಾನ್ಸರ್ ಕರಪ್ಷನ್‌ಗೆ ರಾಜ್ಯದ ಕಾಂಗ್ರೆಸ್‌ ಸರ್ಕಾರವೇ ಉತ್ತೇಜನ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆರೋಪ

ಸ್ನೇಹಿತರೊಂದಿಗೆ ತೋಟದ ಮನೆಗೆ ಪಾರ್ಟಿಗೆ ತೆರಳಿದ್ದ ಯುವಕರಿಬ್ಬರು ಕೃಷಿಹೊಂಡದಲ್ಲಿ ಜಲಸಮಾಧಿ

ಮುಂದಿನ ಸುದ್ದಿ
Show comments