Webdunia - Bharat's app for daily news and videos

Install App

ಸಿಎಂ ನಿತೀಶ್ ಕುಮಾರ್ ಮೇಲೆ ಶೂ ಎಸೆದ ಆರೋಪಿಯ ಬಂಧನ

Webdunia
ಗುರುವಾರ, 28 ಜನವರಿ 2016 (20:27 IST)
ಮುಖ್ಯಮಂತ್ರಿ ನಿತೀಶ್ ಕುಮಾರ್ ಮೇಲೆ ವ್ಯಕ್ತಿಯೊಬ್ಬ ಶೂ ಎಸೆದಿದ್ದು, ಆದರೆ, ಗುರಿ ತಪ್ಪಿತು ಎಂದು ಮೂಲಗಳು ತಿಳಿಸಿವೆ.ಮುಂಬರುವ ಏಪ್ರಿಲ್ 1 ರಿಂದ ಮದ್ಯ ಮಾರಾಟ ನಿಷೇಧ ಹೇರುವ ಕುರಿತಂತೆ ಪಾಟ್ನಾದ ಭಖ್ತಿಯಾರ್‌ಪುರ್‌ನಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಪಾಲ್ಗೊಂಡಿದ್ದಾಗ ಈ ಘಟನೆ ನಡೆದಿದೆ. 
 
ವ್ಯಕ್ತಿ ಎಸೆದ ಶೂ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿದ್ದ ವೇದಿಕೆಯ ಮುಂಭಾಗದಲ್ಲಿ ಬಿದ್ದಿತು. ಶೂ ಎಸೆದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ರಾಜ್ಯದಾದ್ಯಂತ ಮದ್ಯ ಮಾರಾಟಕ್ಕೆ ನಿಷೇಧ ಹೇರಲು ಬದ್ಧವಾಗಿರುವುದಾಗಿ ನಿತೀಶ್ ಕುಮಾರ್ ಹೇಳುತ್ತಿದ್ದಂತೆ ಆಕ್ರೋಶಗೊಂಡ ವ್ಯಕ್ತಿ ಶಊ ಎಸೆದಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 
ಇದಕ್ಕಿಂತ ಮೊದಲು, ನಿತೀಶ್ ಕುಮಾರ್ ರಾಜ್ಯದಲ್ಲಿ ಹಂತ ಹಂತವಾಗಿ ಮದ್ಯ ಮಾರಾಟವನ್ನು ನಿಷೇಧಿಸುವುದಾಗಿ ಹೇಳಿ ಮೊದಲು ದೇಶಿಯ ಮಧ್ಯವನ್ನು ನಿಷೇಧಿಸಲಾಗುವುದು ನಂತರ ವಿದೇಶಿ ಮದ್ಯ ಕೂಡಾ ನಿಷೇಧಿಸಲಾಗುವುದು ಎಂದು ತಿಳಿಸಿದ್ದರು.
 
ಕಳೆದ 2015ರ ವಿಧಾನಸಭೆ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಒಂದು ವೇಳೆ ಅಧಿಕಾರಕ್ಕೆ ಬಂದಲ್ಲಿ ಮದ್ಯ ಮಾರಾಟ ಮತ್ತು ಮದ್ಯ ಸೇವನೆಯನ್ನು ನಿಷೇಧಿಸಲಾಗುವುದು ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಭರವಸೆ ನೀಡಿದ್ದರು.

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments