Webdunia - Bharat's app for daily news and videos

Install App

ಕೋಪದಲ್ಲಿ ಬ್ಯಾಟ್‍ನಿಂದ ಹೊಡೆದು ಪತ್ನಿಯನ್ನು ಕೊಂದ! ಮುಂದೇನಾಯ್ತು?

Webdunia
ಸೋಮವಾರ, 3 ಜನವರಿ 2022 (09:31 IST)
ಚೆನ್ನೈ  : ಕೋಪದ ಭರದಲ್ಲಿ ಬ್ಯಾಟ್ನಿಂದ ಹೊಡೆದು ಪತ್ನಿಯನ್ನು ಕೊಂದು, ಪುತ್ರರರ ಕತ್ತು ಹಿಸುಕಿ ಕೊಲೆಗೈದು ನಂತರ ತಾನು ನೇಣಿಗೆ ಶರಣಾದ ಘಟನೆ ಪೆರುಂಗುಡಿಯಲ್ಲಿ ನಡೆದಿದೆ.
ಮಣಿಕಂದನ್(35), ತರಗ ಪ್ರಿಯಾ(30), ಮಕ್ಕಳಾದ ತರಣ್ (11) ಮತ್ತು ಒಂದೂವರೆ ವರ್ಷದ ತಗನ್ ಮೃತರಾಗಿದ್ದಾರೆ. ಪೊಲೀಸರ ಪ್ರಕಾರ, ಮಣಿಕಂದನ್ ಖಾಸಗಿ ಬ್ಯಾಂಕ್ನಲ್ಲಿ ಕೆಲಸ ಮಾಡುತ್ತಿದ್ದ. ಮಕ್ಕಳು, ಪತ್ನಿಯನ್ನುಕೊಂದು ತಾನೂ ಆತ್ಮಹತ್ಯೆಮಾಡಿಕೊಂಡಿದ್ದಾನೆ. 

ಪೆರುಂಗುಡಿಯಲ್ಲಿ ಅಪಾರ್ಟ್ ಮೆಂಟ್ನಲ್ಲಿ  ಮಣಿಕಂದನ್ ಕುಟುಂದೊಂದಿಗೆ ವಾಸವಾಗಿದ್ದರು. ಮನೆಯ ಬಾಗಿಲು ಮುಚ್ಚಿದ್ದರಿಂದ ಅನುಮಾನಗೊಂಡ ನೆರೆಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದು,  ಪೊಲೀಸರು ಮನೆಯ ಬಾಗಿಲು ಹೊಡೆದು ನೋಡಿದಾಗ ಮಣಿಕಂದನ್ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಕಂಡಿತ್ತು. 

ದಂಪತಿ ನಡುವೆ ಸಾಲದ ವಿಚಾರವಾಗಿ ಆಗಾಗ ಜಗಳ ನಡೆಯುತ್ತಿತ್ತು. ಕೋಪದ ಭರದಲ್ಲಿ ಮಣಿಕಂದನ್ ಬ್ಯಾಟ್ನಿಂದ ಹೊಡೆದು ತನ್ನ ಹೆಂಡತಿ ಕೊಂದಿದ್ದಾನೆ. ನಂತರ ಮಕ್ಕಳನ್ನು ಕೊಂದು ತಾನೂ ನೇಣು ಹಾಕಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಅಪರಾಧ ನಡೆದ ಸ್ಥಳವನ್ನು ನೋಡಿದಾಗ, ಮಣಿಕಂದನ್ ಮೊದಲು ತನ್ನ ಹೆಂಡತಿಯನ್ನು ಕೊಲೆ ಮಾಡಿ ನಂತರ ತನ್ನ ಇಬ್ಬರು ಗಂಡುಮಕ್ಕಳನ್ನು ಕತ್ತು ಹಿಸುಕಿ ಕೊನೆಗೆ ನೇಣು ಹಾಕಿಕೊಂಡಿರಬೇಕು, ತನಿಖೆ ಮಾಡುತ್ತಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments