Select Your Language

Notifications

webdunia
webdunia
webdunia
webdunia

ಯಾರಿಗೂ ಭಯಪಡದೆ ಸಂವಿಧಾನದ ಪಾಲಕರಾಗಬೇಕು : ಸಿನ್ಹಾ

ಯಾರಿಗೂ ಭಯಪಡದೆ ಸಂವಿಧಾನದ ಪಾಲಕರಾಗಬೇಕು : ಸಿನ್ಹಾ
ನವದೆಹಲಿ , ಶುಕ್ರವಾರ, 22 ಜುಲೈ 2022 (08:49 IST)
ನವದೆಹಲಿ : ಪ್ರತಿಪಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹಾ ಅವರು ರಾಷ್ಟ್ರಪತಿ ಚುನಾವಣೆ ಸೋಲಿನ ಬೆನ್ನಲ್ಲೇ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದರು.

2022ರ ರಾಷ್ಟ್ರಪತಿ ಚುನಾವಣೆಯಲ್ಲಿ ಜಯಗಳಿಸಿದ ದ್ರೌಪದಿ ಮುರ್ಮು ಅವರನ್ನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ. ಭಾರತದ 15ನೇ ರಾಷ್ಟ್ರಪತಿಯಾಗಿ ಅವರು ಭಯಪಡದೆ ಸಂವಿಧಾನದ ಪಾಲಕರಾಗಿ ಕಾರ್ಯನಿರ್ವಹಿಸುತ್ತಾರೆ ಎಂದು ನಾನು ಭಾವಿಸುತ್ತೇನೆ.

ನಿಜವಾಗಿ, ಪ್ರತಿಯೊಬ್ಬ ಭಾರತೀಯನೂ ಇದನ್ನೇ ಆಶಿಸುತ್ತಾರೆ. ನಾನು ದ್ರೌಪದಿ ಮುರ್ಮು ಅವರಿಗೆ ಶುಭ ಹಾರೈಕೆಗಳನ್ನು ಸಲ್ಲಿಸುತ್ತೇನೆ.  

ಈ ಚುನಾವಣೆಯಲ್ಲಿ ನನ್ನನ್ನು ಒಮ್ಮತದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದ್ದಕ್ಕಾಗಿ ವಿರೋಧ ಪಕ್ಷದ ರಾಜಕೀಯ ಪಕ್ಷಗಳ ನಾಯಕರಿಗೆ ನಾನು ಪ್ರಾಮಾಣಿಕವಾಗಿ ಧನ್ಯವಾದ ಹೇಳುತ್ತೇನೆ.


Share this Story:

Follow Webdunia kannada

ಮುಂದಿನ ಸುದ್ದಿ

ರಾಷ್ಟ್ರಪತಿಯಾಗಿ ಆಯ್ಕೆಯಾದ ದ್ರೌಪದಿ ಮುರ್ಮು ಪಡೆದ ಮತ ಎಷ್ಟು?