Select Your Language

Notifications

webdunia
webdunia
webdunia
webdunia

ನ್ಯಾಯಾಧೀಶರಿಗೆ ಗನ್ ತೋರಿಸಿ ಹಲ್ಲೆ ನಡೆಸಿದ ಪೊಲೀಸರು!

ನ್ಯಾಯಾಧೀಶರಿಗೆ ಗನ್ ತೋರಿಸಿ ಹಲ್ಲೆ ನಡೆಸಿದ ಪೊಲೀಸರು!
ಪಟ್ನಾ , ಶನಿವಾರ, 20 ನವೆಂಬರ್ 2021 (08:22 IST)
ಪಟ್ನಾ : ನ್ಯಾಯಾಲಯದ ಕೊಠಡಿಯೊಳಗೆ ನ್ಯಾಯಾಧೀಶರ ಮೇಲೆ ಇಬ್ಬರು ಪೊಲೀಸರು ಹಲ್ಲೆ ನಡೆಸಿದ ಘಟನೆ ಬಿಹಾರದ ಮಧುಬನಿ ಜಿಲ್ಲೆಯಲ್ಲಿ ಗುರುವಾರ ನಡೆದಿದೆ.
ಜಿಲ್ಲೆಯ ಜಂಜಾರ್ಪುರ ನ್ಯಾಯಾಲಯದಲ್ಲಿ ಈ ದಾಳಿ ನಡೆದಿದ್ದು, ಪ್ರಕರಣವನ್ನು ಪಟ್ನಾ ಹೈಕೋರ್ಟ್ ಸ್ವಯಂಪ್ರೇರಿತ ವಿಚಾರಣೆಗೆ ತೆಗೆದುಕೊಂಡಿದೆ. ಬಿಹಾರ ಪೊಲೀಸ್ ಮಹಾನಿರ್ದೇಶಕರಿಗೆ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ.
ಇಬ್ಬರು ಪೊಲೀಸರನ್ನು ಒಳಗೊಂಡ ಪ್ರಕರಣವೊಂದನ್ನು ನ್ಯಾಯಾಧೀಶರು ವಿಚಾರಣೆ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಕೊಠಡಿಗೆ ನುಗ್ಗಿದ ಆರೋಪಿಗಳು ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಅವಿನಾಶ್ ಕುಮಾರ್ ಅವರತ್ತ ಪಿಸ್ತೂಲಿನಿಂದ ಗುರಿ ಇರಿಸಿ ಹಲ್ಲೆ ಮಾಡಿದ್ದಾರೆ. ನ್ಯಾಯಾಧೀಶರು ಸುರಕ್ಷಿತವಾಗಿದ್ದಾರೆ. ಆದರೆ ಈ ದಿಢೀರ್ ಘಟನೆಯಿಂದ ಆಘಾತಗೊಂಡಿದ್ದಾರೆ.
ಇಬ್ಬರೂ ಪೊಲೀಸ್ ಅಧಿಕಾರಿಗಳನ್ನು ಬಂಧಿಸಲಾಗಿದೆ. ಪೊಲೀಸರು ಇಬ್ಬರು ಮಹಿಳೆಯರಿಗೆ ಕಿರುಕುಳ ನೀಡಿದ ಆರೋಪ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಧೀಶ ಅವಿನಾಶ್ ಕುಮಾರ್ ವಿಚಾರಣೆ ನಡೆಸುತ್ತಿದ್ದರು. ಲೋಕ ಅದಾಲತ್ನಲ್ಲಿ ಈ ವಿಚಾರಣೆ ನಡೆಯುತ್ತಿತ್ತು. ಅದರಲ್ಲಿ ಆರೋಪಿಗಳಾದ ಗೋಪಾಲ್ ಕೃಷ್ಣ ಮತ್ತು ಅಭಿಮನ್ಯು ಕುಮಾರ್ ಹಾಜರಿದ್ದರು.
ವಿಚಾರಣೆ ವೇಳೆ ಕೋಪಗೊಂಡ ಪೊಲೀಸ್ ಅಧಿಕಾರಿಗಳು ಅವರತ್ತ ನುಗ್ಗಿ ಹಲ್ಲೆ ನಡೆಸಿ ಅವಾಚ್ಯ ಪದಗಳಿಂದ ನಿಂದಿಸಿದ್ದರು. ಈ ವೇಳೆ ಸ್ಥಳೀಯ ವಕೀಲರೊಂದಿಗೂ ಕೈಕೈ ಮಿಲಾಯಿಸಿದ್ದಾರೆ. ನ್ಯಾಯಾಲಯಕ್ಕೆ ಧಾವಿಸಿದ ಡಿಸಿಪಿ ಶ್ರೇಣಿಯ ಅಧಿಕಾರಿಯೊಬ್ಬರು ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ. ಒಬ್ಬ ಅಧಿಕಾರಿ ಪಿಸ್ತೂಲನ್ನು ತನ್ನತ್ತ ಗುರಿ ಇರಿಸಿ ಕೊಲ್ಲುವ ಬೆದರಿಕೆ ಹಾಕಿದ್ದರು ಎಂದು ನ್ಯಾಯಾಧೀಶರು ದೂರಿನಲ್ಲಿ ತಿಳಿಸಿದ್ದಾರೆ. ಈ ಘಟನೆ ಬಗ್ಗೆ ಅವರು ಪಟ್ನಾ ಹೈಕೋರ್ಟ್ಗೆ ಪತ್ರ ಬರೆದಿದ್ದಾರೆ. ಸಂಜೆ ವೇಳೆ ಹೈಕೋರ್ಟ್ನಲ್ಲಿ ವಿಶೇಷ ವಿಚಾರಣೆ ನಡೆದಿದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಗ್ರಾಹಕರ ಕೈಗೆಟಕದ ತರಕಾರಿ ಬೆಳೆ! ಬೆಲೆ ಎಷ್ಟಿದೆ ಗೊತ್ತ?