Webdunia - Bharat's app for daily news and videos

Install App

ನ್ಯಾಯಾಧೀಶರಿಗೆ ಗನ್ ತೋರಿಸಿ ಹಲ್ಲೆ ನಡೆಸಿದ ಪೊಲೀಸರು!

Webdunia
ಶನಿವಾರ, 20 ನವೆಂಬರ್ 2021 (08:22 IST)
ಪಟ್ನಾ : ನ್ಯಾಯಾಲಯದ ಕೊಠಡಿಯೊಳಗೆ ನ್ಯಾಯಾಧೀಶರ ಮೇಲೆ ಇಬ್ಬರು ಪೊಲೀಸರು ಹಲ್ಲೆ ನಡೆಸಿದ ಘಟನೆ ಬಿಹಾರದ ಮಧುಬನಿ ಜಿಲ್ಲೆಯಲ್ಲಿ ಗುರುವಾರ ನಡೆದಿದೆ.
ಜಿಲ್ಲೆಯ ಜಂಜಾರ್ಪುರ ನ್ಯಾಯಾಲಯದಲ್ಲಿ ಈ ದಾಳಿ ನಡೆದಿದ್ದು, ಪ್ರಕರಣವನ್ನು ಪಟ್ನಾ ಹೈಕೋರ್ಟ್ ಸ್ವಯಂಪ್ರೇರಿತ ವಿಚಾರಣೆಗೆ ತೆಗೆದುಕೊಂಡಿದೆ. ಬಿಹಾರ ಪೊಲೀಸ್ ಮಹಾನಿರ್ದೇಶಕರಿಗೆ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ.
ಇಬ್ಬರು ಪೊಲೀಸರನ್ನು ಒಳಗೊಂಡ ಪ್ರಕರಣವೊಂದನ್ನು ನ್ಯಾಯಾಧೀಶರು ವಿಚಾರಣೆ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಕೊಠಡಿಗೆ ನುಗ್ಗಿದ ಆರೋಪಿಗಳು ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಅವಿನಾಶ್ ಕುಮಾರ್ ಅವರತ್ತ ಪಿಸ್ತೂಲಿನಿಂದ ಗುರಿ ಇರಿಸಿ ಹಲ್ಲೆ ಮಾಡಿದ್ದಾರೆ. ನ್ಯಾಯಾಧೀಶರು ಸುರಕ್ಷಿತವಾಗಿದ್ದಾರೆ. ಆದರೆ ಈ ದಿಢೀರ್ ಘಟನೆಯಿಂದ ಆಘಾತಗೊಂಡಿದ್ದಾರೆ.
ಇಬ್ಬರೂ ಪೊಲೀಸ್ ಅಧಿಕಾರಿಗಳನ್ನು ಬಂಧಿಸಲಾಗಿದೆ. ಪೊಲೀಸರು ಇಬ್ಬರು ಮಹಿಳೆಯರಿಗೆ ಕಿರುಕುಳ ನೀಡಿದ ಆರೋಪ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಧೀಶ ಅವಿನಾಶ್ ಕುಮಾರ್ ವಿಚಾರಣೆ ನಡೆಸುತ್ತಿದ್ದರು. ಲೋಕ ಅದಾಲತ್ನಲ್ಲಿ ಈ ವಿಚಾರಣೆ ನಡೆಯುತ್ತಿತ್ತು. ಅದರಲ್ಲಿ ಆರೋಪಿಗಳಾದ ಗೋಪಾಲ್ ಕೃಷ್ಣ ಮತ್ತು ಅಭಿಮನ್ಯು ಕುಮಾರ್ ಹಾಜರಿದ್ದರು.
ವಿಚಾರಣೆ ವೇಳೆ ಕೋಪಗೊಂಡ ಪೊಲೀಸ್ ಅಧಿಕಾರಿಗಳು ಅವರತ್ತ ನುಗ್ಗಿ ಹಲ್ಲೆ ನಡೆಸಿ ಅವಾಚ್ಯ ಪದಗಳಿಂದ ನಿಂದಿಸಿದ್ದರು. ಈ ವೇಳೆ ಸ್ಥಳೀಯ ವಕೀಲರೊಂದಿಗೂ ಕೈಕೈ ಮಿಲಾಯಿಸಿದ್ದಾರೆ. ನ್ಯಾಯಾಲಯಕ್ಕೆ ಧಾವಿಸಿದ ಡಿಸಿಪಿ ಶ್ರೇಣಿಯ ಅಧಿಕಾರಿಯೊಬ್ಬರು ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ. ಒಬ್ಬ ಅಧಿಕಾರಿ ಪಿಸ್ತೂಲನ್ನು ತನ್ನತ್ತ ಗುರಿ ಇರಿಸಿ ಕೊಲ್ಲುವ ಬೆದರಿಕೆ ಹಾಕಿದ್ದರು ಎಂದು ನ್ಯಾಯಾಧೀಶರು ದೂರಿನಲ್ಲಿ ತಿಳಿಸಿದ್ದಾರೆ. ಈ ಘಟನೆ ಬಗ್ಗೆ ಅವರು ಪಟ್ನಾ ಹೈಕೋರ್ಟ್ಗೆ ಪತ್ರ ಬರೆದಿದ್ದಾರೆ. ಸಂಜೆ ವೇಳೆ ಹೈಕೋರ್ಟ್ನಲ್ಲಿ ವಿಶೇಷ ವಿಚಾರಣೆ ನಡೆದಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments