Select Your Language

Notifications

webdunia
webdunia
webdunia
webdunia

ಶ್ರೇಯಸ್ ಅಯ್ಯರ್‌ ತಂದೆಯಿಂದಲೇ ಬಂತು ಅಭಿಮಾನಿಗಳಿಗೆ ಸಂದೇಶ, ಇಲ್ಲಿದೆ ಮಾಹಿತಿ

Shreyas Iyyer Father

Sampriya

ನವದೆಹಲಿ , ಮಂಗಳವಾರ, 28 ಅಕ್ಟೋಬರ್ 2025 (19:43 IST)
Photo Credit X
ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಕ್ಯಾಚ್ ಹಿಡಿಯುವ ವೇಳೆ ಗಾಯಗೊಂಡಿದ್ದ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್​​ ಶ್ರೇಯಸ್ ಅಯ್ಯರ್ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದು ಬಂದಿದೆ.

ಅದೇನೆಂದರೆ ನೆಚ್ಚಿನ ಕ್ರಿಕೆಟಿಗ ಶ್ರೇಯಸ್ ಅವರು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದು, ಪ್ರಸ್ತುತ ಅಯ್ಯರ್​ ಅವರು ಸಿಡ್ನಿಯ ಸೇಂಟ್ ವಿನ್ಸೆಂಟ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅವರ ಆರೋಗ್ಯ ಸುಧಾರಿಸುತ್ತಿರುವ ಕಾರಣ ಈ ವಾರದೊಳಗೆ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಶ್ರೇಯಸ್ ಅಯ್ಯರ್​ ತಂದೆ ಸಂತೋಷ್ ಅಯ್ಯರ್ ದೃಢಪಡಿಸಿದ್ದಾರೆ.

ಬಿಸಿಸಿಐ ವೈದ್ಯಕೀಯ ತಂಡವು ಅವರ ಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಅವರಿಗೆ ಸಿಡ್ನಿಯ ಅತ್ಯುತ್ತಮ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಒಂದು ವಾರದೊಳಗೆ ಅವರನ್ನು ಡಿಸ್ಚಾರ್ಜ್ ಮಾಡುವ ಸಾಧ್ಯತೆಯಿದೆ. ಸಾಧ್ಯವಾದರೆ, ಅದಕ್ಕೂ ಮೊದಲೇ ಮನೆಗೆ ಮರಳಬಹುದು. ಅಯ್ಯರ್​ ಅವರು ಟಿ20 ತಂಡದ ಭಾಗವಾಗಿರದ ಕಾರಣ ಅವರು ನೇರವಾಗಿ ಮನೆಗೆ ಬರಲಿದ್ದಾರೆ. ಆದ್ದರಿಂದ ನಾವು ಸಿಡ್ನಿಗೆ ಹೋಗುವ ನಿರ್ಧಾರವನ್ನು ಬದಲಾಯಿಸಿದ್ದೇವೆ. ನಾವು ಅಲ್ಲಿಗೆ ಹೋಗುತ್ತಿಲ್ಲ ಎಂದು ಸಂತೋಷ್ ಅಯ್ಯರ್ ಡೆಕ್ಕನ್ ಕ್ರಾನಿಕಲ್‌ಗೆ ತಿಳಿಸಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ