Webdunia - Bharat's app for daily news and videos

Install App

ಮೋದಿ ಸರ್ಕಾರವು ಬಂಡವಾಳಶಾಯಿ ಕೈಗೊಂಬೆ: ಸಿದ್ದರಾಮಯ್ಯ ಆರೋಪ

Webdunia
ಗುರುವಾರ, 2 ಸೆಪ್ಟಂಬರ್ 2021 (12:36 IST)
ಬೆಂಗಳೂರು : ನರೇಂದ್ರ ಮೋದಿಯವರು ಪ್ರಧಾನಿಯಾದ ಬಳಿಕ ಉದ್ಯಮಿಗಳ 7 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಲಾಗಿದೆ. ಆ ಪೈಕಿ ಅದಾನಿ ಅವರದ್ದೇ 4.50 ಲಕ್ಷ ಕೋಟಿ ರೂ. ಎನ್ ಪಿಎ ಇದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಜಗತ್ತಿನ ಅಭಿವೃದ್ದಿ ಹೊಂದುವ ವೇಗದ ದೇಶಗಳಲ್ಲಿ ಭಾರತ 5ನೇ ಸ್ಥಾನದಲ್ಲಿತ್ತು. ಈಗ 193 ದೇಶಗಳ ಸಾಲಿನಲ್ಲಿ 164 ನೇ ಸ್ಥಾನ ಗಳಿಸಿದೆ. ಭಾರತಕ್ಕಿಂತ ಬಾಂಗ್ಲಾ ಜಿಡಿಪಿ ಏರುತ್ತಿದೆ. ಬಿಜೆಪಿ ಸರ್ಕಾರ ಕಾರ್ಪೊರೇಟ್ ಕುಳಗಳನ್ನು ಬದುಕಿಸಲು ಟೊಂಕ ಕಟ್ಟಿ ನಿಂತಿದೆ. ಅದಕ್ಕಾಗಿ ದೇಶದ ಆಸ್ತಿ ಮಾರಾಟ ಮಾಡಲಾಗುತ್ತಿದೆ ಎಂದರು.
7 ವರ್ಷದಲ್ಲಿ ಪೆಟ್ರೊಲ್, ಡೀಸೆಲ್, ಅಡುಗೆ ಅನಿಲದಿಂದ ಹೆಚ್ಚುವರಿ ತೆರಿಗೆ 22 ಲಕ್ಷ ಕೋಟಿ ಸಂಗ್ರಹವಾಗಿದೆ. ಕರ್ನಾಟಕದಿಂದ 1.20 ಲಕ್ಷ ಕೋಟಿ ರೂ. ಸಂಗ್ರಹವಾಗಿದೆ. ಕಾಂಗ್ರೆಸ್ ಸರ್ಕಾರ ಮಾಡಿದ್ದ ಸಾಲ ತೀರಿಸಬೇಕು ಅಂದಿದ್ದರು. ಆದರೆ ಸಾಲ ಇದ್ದದ್ದು 7 ಲಕ್ಷ ಕೋಟಿ, ಹೆಚ್ಚುವರಿ ತೆರಿಗೆ ಸಂಗ್ರಹ ಆಗುದ್ದು 22 ಲಕ್ಷ ಕೋಟಿ. ಈಗಲಾದರೂ ತೆರಿಗೆ ಕಡಿಮೆ ಮಾಡಿ ಎಂದು ಸಿದ್ದರಾಮಯ್ಯ ಆಗ್ರಹ ಮಾಡಿದರು.
ಅಗತ್ಯ ವಸ್ತುಗಳ ಬೆಲೆ ಯದ್ವಾತದ್ವಾ ಹೆಚ್ಚಾಗಿದೆ. ಇಷ್ಟಾದರೂ ಅಚ್ಛೇ ದಿನ್ ಎನ್ನುತ್ತಿದ್ದಾರೆ. ಮೋದಿ ಸುಳ್ಳು ಹೇಳಿಕೊಂಡು ತಿರುಗಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.
ಹಣ ಕೊಡದೆ ಕೆಲಸವಿಲ್ಲ: ರಾಜ್ಯದಲ್ಲಿ ಭ್ರಷ್ಟಾಚಾರ ಅತಿಯಾಗಿದೆ. ಬೆಂಗಳೂರಿನಲ್ಲಿ ಉಪ್ಪರಪೇಟೆ ಠಾಣೆಗೆ ಇನ್ಸ್ ಪೆಕ್ಟರ್ ಪೋಸ್ಟಿಂಗ್ ಗೆ 1 ಕೋಟಿ ರೂ. ವರೆಗೆ ಪಡೆಯುತ್ತಿದ್ದಾರೆ. ಹಣ ಕೊಡದೆ ಏನು ಕೆಲಸ ಆಗುತ್ತಿಲ್ಲ ಎಂದು ಸಿದ್ದರಾಮಯ್ಯ ಆರೋಪಿಸಿದರು.
ಮೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಜನತೆ ಸಂಕಲ್ಪ ಮಾಡಬೇಕು ಎಂದು ಸಿದ್ದರಾಮಯ್ಯ ಮನವಿ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments