Select Your Language

Notifications

webdunia
webdunia
webdunia
webdunia

ಮೈತ್ರಿಯಿಂದ ಕಾಂಗ್ರೆಸ್ ಗೆ ನಷ್ಟವೇ ಹೆಚ್ಚು-ರಾಹುಲ್ ಗಾಂಧಿ ಜೊತೆ ಸಿದ್ದರಾಮಯ್ಯ ಚರ್ಚೆ

ಮೈತ್ರಿಯಿಂದ ಕಾಂಗ್ರೆಸ್ ಗೆ ನಷ್ಟವೇ ಹೆಚ್ಚು-ರಾಹುಲ್ ಗಾಂಧಿ ಜೊತೆ ಸಿದ್ದರಾಮಯ್ಯ ಚರ್ಚೆ
ನವದೆಹಲಿ , ಬುಧವಾರ, 19 ಜೂನ್ 2019 (12:11 IST)
ನವದೆಹಲಿ : ದೆಹಲಿಯಲ್ಲಿ ರಾಹುಲ್ ಗಾಂಧಿಯನ್ನು ಭೇಟಿಯಾದ ಸಿದ್ದರಾಯ್ಯ  ಮೈತ್ರಿಯಿಂದ ಕಾಂಗ್ರೆಸ್ ಲಾಭಕ್ಕಿಂತ ನಷ್ಟವೇ ಹೆಚ್ಚು ಎಂಬುದಾಗಿ ವಾದ ಮಂಡಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.




ಇಂದು ರಾಹುಲ್ ಗಾಂಧಿ ಹುಟ್ಟುಹಬ್ಬದ ಹಿನ್ನಲೆ ರಾಹುಲ್ ಗಾಂಧಿಯ ನಿವಾಸಕ್ಕೆ ಭೇಟಿ ನೀಡಿದ್ದ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. ರಾಹುಲ್ ಗಾಧಿಯ ಜೊತೆ 45 ನಿಮಿಷಗಳ ಕಾಲ ಚರ್ಚೆ ನಡೆಸಿದ್ದ ಸಿದ್ದರಾಮಯ್ಯ ಲೋಕಸಭಾ ಚುನಾವಣೆ ಸೋಲಿನ ಬಗ್ಗೆಯೂ ಪರಾಮರ್ಶೆ ನಡೆಸಿದ್ದು, ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆಗೂ ಮೈತ್ರಿ ಕಾರಣ ಎಂದು ಹೇಳಿದ್ದಾರೆ ಎನ್ನಲಾಗಿದೆ.


ಇದೇ ವೇಳೆ ಅವರು ಅಪರೇಷನ್ ಕಮಲ, ಜಿಂದಾಲ್ ವಿವಾದದ ಬಗ್ಗೆ ಪ್ರಸ್ತಾಪ ಮಾಡಿದ್ದು, ಅಪರೇಷನ್ ಕಮಲ ನಿಂತಿಲ್ಲ,ತೆರೆಮರೆಯಲ್ಲಿ ನಡೀತಿದೆ. ಬಿಜೆಪಿ ನಾಯಕರಿಂದ ಇನ್ನೂ ಪ್ರಯತ್ನ ಮುಂದುವರಿದಿದೆ.  ಜಿಂದಾಲ್ ಪ್ರಕರಣದಿಂದಲೂ ಹಿನ್ನಡೆಯಾಗುವ ಸಾಧ್ಯತೆ ಎಂದು ತಿಳಿಸಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸತ್ಯ ಹೇಳೋದು ಅಪರಾಧನಾ?- ಅಮಾನತು ವಿರುದ್ಧ ರೋಷನ್ ಬೇಗ್ ಕಿಡಿ