ಸೋನಿಯಾಗೆ ನೀಲನಕ್ಷೆ ಸಲ್ಲಿಸಿದ ಸಿದ್ದರಾಮಯ್ಯ

Webdunia
ಗುರುವಾರ, 7 ಅಕ್ಟೋಬರ್ 2021 (11:46 IST)
ಬೆಂಗಳೂರು : ರಾಜ್ಯದಲ್ಲಿ ಮುಂದಿನ ವಿಧಾನಸಭೆ ಚುನಾವಣೆಗೆ ಯಾವ ರೀತಿಯ ಕಾರ್ಯತಂತ್ರ ರೂಪಿಸಬಹುದು ಎಂಬ ಬಗ್ಗೆ ಸೋನಿಯಾ ಗಾಂಧಿಯವರಿಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನೀಲನಕ್ಷೆ ಸಲ್ಲಿಸಿ ಬಂದಿದ್ದಾರೆ.

ಕಳೆದ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ದೂರವಾಗಿರುವ ಮತ ಬ್ಯಾಂಕ್ ಮತ್ತೆ ಸೆಳೆಯುವ ನಿಟ್ಟಿನಲ್ಲಿ ಅನುಸರಿಸಬೇಕಾದ ಮಾರ್ಗಗಳ ಕುರಿತು ತಮ್ಮ ಅಭಿಪ್ರಾಯ ಹಾಗೂ ಯೋಜನೆ ಬಗ್ಗೆಯೂ ಸೋನಿಯಾ ಗಾಂಧಿಯವರ ಗಮನಕ್ಕೆ ತಂದಿದ್ದಾರೆ.
ಅಷ್ಟೇ ಅಲ್ಲದೆ, ಪಕ್ಷ ಸಂಘಟನೆ ಹಾಗೂ ಚುನಾವಣೆಗೆ ಸಜ್ಜಾಗುವ ನಿಟ್ಟಿನಲ್ಲಿ ಮುಂದಿನ ಏಪ್ರಿಲ್ನಿಂದ ರಾಜ್ಯ ಪ್ರವಾಸ ಹಾಗೂ ಸಮುದಾಯದವಾರು ಸಮಾವೇಶ ಕೈಗೊಳ್ಳುವ ಇಂಗಿತವನ್ನೂ ವ್ಯಕ್ತಪಡಿಸಿದರು ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.
ಕಾಂಗ್ರೆಸ್ನ ಸಾಂಪ್ರದಾಯಿಕ ದಲಿತ, ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ಮತ ವಿಭಜನೆಯಿಂದ ಎರಡು ಚುನಾವಣೆಗಳಲ್ಲಿ ಹಿನ್ನೆಡೆಯಾಗಿದ್ದು, ಮುಂದಿನ ಚುನಾವಣೆಯಲ್ಲಿ ಅದಕ್ಕೆ ಅವಕಾಶ ಇಲ್ಲದಂತೆ ಅಭ್ಯರ್ಥಿಗಳ ಆಯ್ಕೆಯಲ್ಲೂ ಎಚ್ಚರಿಕೆ ವಹಿಸಬೇಕಾಗಿದೆ ಎಂದು ಹೇಳಿದರು ಎನ್ನಲಾಗಿದೆ.
ಸ್ವಂತ ಸಾಮರ್ಥ್ಯ ಹಾಗೂ ಕ್ಷೇತ್ರಗಳಲ್ಲಿ ಪ್ರಭಾವ ಹೊಂದಿರುವ ಬಿಜೆಪಿ ಹಾಗೂ ಜೆಡಿಎಸ್ನ ಕೆಲವು ಶಾಸಕರು ಸಂಪರ್ಕದಲ್ಲಿದ್ದು ಕಾಂಗ್ರೆಸ್ ಸೇರ್ಪಡೆ ಮಾಡಿಕೊಂಡರೆ ಪಕ್ಷ ಅಧಿಕಾರಕ್ಕೆ ಬರಲು ಸಹಾಯವಾಗಬಹುದು ಎಂಬ ಮಾಹಿತಿ ಹಾಗೂ ಹೆಸರುಗಳನ್ನೂ ನೀಡಿದ್ದಾರೆ ಎಂದು ಹೇಳಲಾಗಿದೆ.
ಸೋನಿಯಾ ಸಲಹೆ: ನಿಂದ ಪಕ್ಷ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿ ಎಂದು ಸಲಹೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇವೇಗೌಡರನ್ನು ಭೇಟಿಯಾದ ಯಡಿಯೂರಪ್ಪ ಮತ್ತು ವಿಜಯೇಂದ್ರ

ರಾಹುಲ್ ಗಾಂಧಿಗೆ ನೊಬೆಲ್ ಕೊಡಬೇಕಿತ್ತು: ಕಾಂಗ್ರೆಸ್ ನಾಯಕ ಅಸಮಾಧಾನ

ಮೈಸೂರು ಬಲೂನ್ ಮಾರುತ್ತಿದ್ದ ಬಾಲಕಿಗೆ ಪಾಪಿ ಹೇಗೆಲ್ಲಾ ಹಿಂಸೆ ಮಾಡಿದ್ದ: ಮರಣೋತ್ತರ ಪರೀಕ್ಷೆಯಲ್ಲಿ ಬಯಲು

ರಾಹುಲ್ ಗಾಂಧಿ ಜೊತೆಗೆ ಸಿದ್ದರಾಮಯ್ಯ ಮೊಮ್ಮಗ ಪೋಸ್: ಕನ್ನಡ ಬರೆದುಕೊಟ್ಟಿದ್ದು ಯಾರು ಎಂದ ನೆಟ್ಟಿಗರು

ಶವದ ಮೇಲೆ ರೇಪ್ ಮಾಡಿದ ವಿಕೃತ ಕಾಮಿ: ಶಾಕಿಂಗ್ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments