Select Your Language

Notifications

webdunia
webdunia
webdunia
webdunia

ಇಂದು ರಾಹುಲ್ ಗಾಂಧಿಯನ್ನು ಭೇಟಿ ಮಾಡಲಿರುವ ಸಿದ್ದರಾಮಯ್ಯ

ಇಂದು ರಾಹುಲ್ ಗಾಂಧಿಯನ್ನು ಭೇಟಿ ಮಾಡಲಿರುವ ಸಿದ್ದರಾಮಯ್ಯ
ನವದೆಹಲಿ , ಮಂಗಳವಾರ, 18 ಜೂನ್ 2019 (10:26 IST)
ನವದೆಹಲಿ : ಇತ್ತೀಚೆಗಷ್ಟೇ ದೇವೇಗೌಡರು ಸಿದ್ದರಾಮಯ್ಯ ಅವರ ವಿರುದ್ಧ ರಾಹುಲ್ ಗಾಂಧಿಗೆ ದೂರು ನೀಡಿದ್ದರು. ಇದೀಗ ಅದರ ಬೆನ್ನಲ್ಲೇ ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಅವರನ್ನ ಭೇಟಿ ಆಗುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ.




ಕಳೆದ ವಾರ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರು, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನ ಭೇಟಿಯಾಗಿ ರಾಜ್ಯದ ಮೈತ್ರಿ ಸರ್ಕಾರದಲ್ಲಿ ಆಗುತ್ತಿರುವ  ಗುದ್ದಾಟಕ್ಕೆ ಸಿದ್ದರಾಮಯ್ಯ ಅವರೇ ಕಾರಣಕರ್ತರಾಗಿದ್ದು, ಅವರನ್ನು ನಿಯಂತ್ರಿಸಬೇಕು ಎಂದು ದೂರು ನೀಡಿದ್ದರು.


ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸೋಮವಾರ ಸಂಜೆ ದೆಹಲಿಗೆ ಆಗಮಿಸಿದ್ದು, ಇಂದು. ರಾಹುಲ್ ಜೊತೆಗೆ ಪಕ್ಷದ ವರಿಷ್ಠರಾದ ಅಹ್ಮದ್ ಪಟೇಲ್, ಗುಲಾಂನಭೀ ಅಜಾದ್, ಎ.ಕೆ ಆಂಟನಿ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ಅವರನ್ನು ಕೂಡ ಭೇಟಿ ಮಾಡಲಿದ್ದು, ಜೆಡಿಎಸ್ ವಿರುದ್ಧ ದೂರು ನೀಡಲಿದ್ದಾರೆ ಎಂದು ಪಕ್ಷದ ಮೂಲಗಳಿಂದ ತಿಳಿದುಬಂದಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಆತ್ಮಹತ್ಯೆ ಮಾಡಿಕೊಂಡ ರೈತ ಸುರೇಶ್ ನಿವಾಸಕ್ಕೆ ಇಂದು ಸಿಎಂ ಭೇಟಿ