ಸಿದ್ದೀಕಿ ಹತ್ಯೆ ಪ್ರಕರಣ: ಶೂಟರ್‌ಗಳಿಗೆ ಹಣ ಪೂರೈಕೆ, ಮತ್ತೊಬ್ಬ ಅರೆಸ್ಟ್‌

Sampriyಮa
ಮಂಗಳವಾರ, 15 ಅಕ್ಟೋಬರ್ 2024 (19:51 IST)
ಮುಂಬೈ: ಮಹಾರಾಷ್ಟ್ರದ ಎನ್‌ಸಿಪಿ ನಾಯಕ, ಮಾಜಿ ಸಚಿವ ಬಾಬಾ ಸಿದ್ದೀಕಿ ಹತ್ಯೆ ಪ್ರಕರಣ ಸಂಬಂಧ ಮತ್ತೊಬ್ಬನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬಂಧಿತ ವ್ಯಕ್ತಿಯನ್ನು ಹರೀಶ್‌ಕುಮಾರ್‌ ಬಾಲಕರಾಮ್‌ (23) ಎಂದು ಗುರುತಿಸಲಾಗಿದ್ದು, 21ರ ವರೆಗೆ ವಶದಲ್ಲಿ ಇರಿಸಿಕೊಳ್ಳಲಾಗುವುದು ಎಂದು ಮುಂಬೈ ಪೊಲೀಸರು ತಿಳಿಸಿದರು.

ಉತ್ತರ ಪ್ರದೇಶದ ಬಹರಾಯಿಚ್‌ ಮೂಲದ ಬಾಲಕರಾಮ್‌ ಅನ್ನು ಬಹರಾಯಿಚ್‌ನಲ್ಲಿ ಸೋಮವಾರ ಬಂಧಿಸಿ, ಮಂಗಳವಾರ ಬೆಳಿಗ್ಗೆ ಮುಂಬೈಗೆ ಕರೆತಂದಿದ್ದಾರೆ.

ಈತ ಪುಣೆಯಲ್ಲಿ ಗುಜರಿ ವ್ಯಾಪಾರಿಯಾಗಿದ್ದು, ಸಿದ್ದೀಕಿ ಹತ್ಯೆಗಾಗಿ ಶೂಟರ್‌ಗಳಿಗೆ ಹಣ ಮತ್ತು ಇತರ ಸಾಮಗ್ರಿಗಳನ್ನು ಪೂರೈಸಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಒಟ್ಟು ನಾಲ್ವರನ್ನು ಬಂಧಿಸಿದಂತಾಗಿದೆ. ಇದಕ್ಕೂ ಮುನ್ನ ಪೊಲೀಸರು, ಹರಿಯಾಣದ ನಿವಾಸಿ ಗುರ್ಮೈಲ್‌ ಬಲ್ಜಿತ್‌ ಸಿಂಗ್‌ (23), ಉತ್ತರ ಪ್ರದೇಶದ ಧರ್ಮರಾಜ್‌ ರಾಜೇಶ್‌ ಕಶ್ಯಪ್‌ (19) ಮತ್ತು ಪುಣೆಯ ಸಹ ಸಂಚುಕೋರ ಪ್ರವೀಣ್‌ ಲೋಣಕರ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಮತ್ತೊಬ್ಬ ಶಂಕಿತ ಶೂಟರ್‌ ಶಿವಕುಮಾರ್‌ ಗೌತಮ್‌ ಮತ್ತು ಆರೋಪಿ ಮೊಹಮ್ಮದ್‌ ಜಿಶನ್‌ ಅಖ್ತರ್‌ಗಾಗಿ ಶೋಧ ಮುಂದುವರಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳನ್ನು ಟಾರ್ಗೆಟ್ ಮಾಡಲಾಗಿದೆ: ಡಿಸಿಎಂ ಪವನ್ ಕಲ್ಯಾಣ್

ರಾಜ್ಯದಲ್ಲಿರುವ ಡ್ರಗ್ಸ್‌ ದಂಧೆ ವಿರುದ್ಧ ಕಠಿಣ ಕ್ರಮ, ಪೆಡ್ಲರ್‌ಗಳಿಗೆ ನಡುಕ

ಮತ್ತಷ್ಟು ಹಣ ಕೊಡದಿದ್ದರೆ ಬೆತ್ತಲೆ ಫೋಟೋ ವೈರಲ್ ಬೆದರಿಕೆ, ಯುವಕ ಆತ್ಮಹತ್ಯೆ

ಮೋದಿ ಬಳಿಕ ಬಿಜೆಪಿಯಿಂದ ಪ್ರಧಾನಿ ಅಭ್ಯರ್ಥಿ ಯಾರು: ಕೊನೆಗೂ ತಿಳಿಸಿದ ಮೋಹನ್ ಭಾಗವತ್

ಸಿದ್ದರಾಮಯ್ಯ ಇರುವಷ್ಟು ದಿನ ಉತ್ತಮ ಹೆಜ್ಜೆ ಇಡಲಿ: ವಿಜಯೇಂದ್ರ

ಮುಂದಿನ ಸುದ್ದಿ
Show comments