Webdunia - Bharat's app for daily news and videos

Install App

ರಾಜಕೀಯ ಪಕ್ಷ ಸ್ಥಾಪಿಸುವುದಿಲ್ಲ: ಯೂ-ಟರ್ನ್ ಹೊಡೆದ ನವಜೋತ್ ಸಿಂಗ್ ಸಿದ್ಧು

Webdunia
ಬುಧವಾರ, 21 ಸೆಪ್ಟಂಬರ್ 2016 (17:27 IST)
ಅಧಿಕಾರ ವಿರೋಧಿ ಮತಗಳನ್ನು ವಿಭಜಿಸದಂತಾಗುವುದರಿಂದ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಹೊಸ ರಾಜಕೀಯ ಪಕ್ಷ ಸ್ಥಾಪಿಸುವುದಿಲ್ಲ ಎಂದು ಮಾಜಿ ಬಿಜೆಪಿ ಸಂಸದ ನವಜೋತ್ ಸಿಂಗ್ ಸಿದ್ದು ಘೋಷಿಸಿದ್ದಾರೆ. 
ಅವಾಜ್ -ಎ- ಪಂಜಾಬ್ ಪಕ್ಷ ಸ್ಥಾಪಿಸಿದ ಕೆಲವೇ ದಿನಗಳ ನಂತರ ಸಿದ್ದು ಯೂ-ಟರ್ನ್ ಹೊಡೆದಿರುವುದು ಕೆಲ ಪಕ್ಷಗಳಿಗೆ ವರದಾನವಾಗಿದ್ದರೆ, ಕೆಲ ಪಕ್ಷಗಳಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.
 
ಮುಂದಿನ ಚುನಾವಣೆಯೊಳಗೆ ಹೊಸ ರಾಜಕೀಯ ಪಕ್ಷದೊಂದಿಗೆ ಸಿದ್ದತೆ ನಡೆಸುವುದು ಕಷ್ಟಕರವಾದ ಸಂಗತಿಯಾಗಿದೆ. ಪಂಜಾಬ್ ರಾಜ್ಯದ ಉತ್ತಮ ಭವಿಷ್ಯಕ್ಕಾಗಿ ಮೈತ್ರಿಗೆ ಸಿದ್ದ ಎಂದು ತಿಳಿಸಿದ್ದಾರೆ.
 
ಆವಾಜ್ -ಎ-ಪಂಜಾಬ್ ವೇದಿಕೆ ರಾಜಕಿಯೇತರ ವೇದಿಕೆಯಾಗಿದ್ದು, ಪಂಜಾಬ್ ರಾಜ್ಯದ ಅಭಿವೃದ್ಧಿಗಾಗಿ ಕಾರ್ಯನಿರ್ವಹಿಸುತ್ತಿದೆ. ಪ್ರತಿಯೊಬ್ಬ ಪಂಜಾಬಿ ಕೂಡಾ ವೇದಿಕೆಯ ಸದಸ್ಯರಾಗಿರುತ್ತಾರೆ ಎಂದರು.
 
ಕಳೆದ 15 ವರ್ಷಗಳಿಂದ ಪಂಜಾಬ್ ರಾಜ್ಯ ಬಾದಲ್ ಮತ್ತು ಅಮರಿಂದರ್ ಅವರ ಕಪಿಮುಷ್ಟಿಯಲ್ಲಿ ಸಿಲುಕಿ ನಲುಗಿಹೋಗಿದೆ. ಇದೀಗ ಕಳೆದು ಹೋದ 15 ವರ್ಷಗಳನ್ನು ಮರೆತು ಬಾದಲ್-ಬಿಜೆಪಿ ಸರಕಾರವನ್ನು ಸೋಲಿಸುವುದೇ ನಮ್ಮ ಗುರಿಯಾಗಿದೆ ಎಂದು ಬಿಜೆಪಿ ಮಾಜಿ ಸಂಸದ ನವಜೋತ್ ಸಿಂಗ್ ಸಿದ್ದು ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments