Webdunia - Bharat's app for daily news and videos

Install App

ಸಾದ್-ಬಿಜೆಪಿ ಮೈತ್ರಿಕೂಟದ ವಿರುದ್ಧ ನವಜೋತ್ ಸಿಂಗ್ ಸಿದ್ದು ವಾಗ್ದಾಳಿ

Webdunia
ಶುಕ್ರವಾರ, 29 ಜುಲೈ 2016 (14:35 IST)
ಪಂಜಾಬ್ ರಾಜಕಾರಣದಿಂದ ದೂರ ಉಳಿಯುವಂತಾಗಲು ಉಪಮುಖ್ಯಮಂತ್ರಿ ಸುಖ್ಬೀರ್ ಬಾದಲ್ ನೇರ ಕಾರಣ ಎಂದು ಆರೋಪಿಸಿದ ಮಾಜಿ ರಾಜ್ಯಸಭೆ ಸದಸ್ಯ ನವಜೋತ್ ಸಿಂಗ್ ಸಿದ್ದು ಆರೋಪಿಸಿದ್ದಾರೆ.
 
ಸಿದ್ದು ಅವರೊಂದಿಗೆ ಸೌಹಾರ್ದಯುತ ಸಂಬಂಧವಿತ್ತು. ಮೈತ್ರಿಯ ಬಗ್ಗೆ ಸಿದ್ದು ದಂಪತಿಗಳಿಗೆ ಯಾವ ಸಮಸ್ಯೆಯಿತ್ತು ಎನ್ನುವುದು ಗೊತ್ತಾಗಿಲ್ಲ. ನಮ್ಮ ನೆರವಿಂದ ಅವರು ಚುನಾವಣೆಯಲ್ಲಿ ಗೆಲ್ಲುತ್ತಾ ಬಂದಿದ್ದರು ಎನ್ನುವ ಸುಖ್ಬೀರ್ ಹೇಳಿಕೆಗೆ ಸಿದ್ದು ಪ್ರತಿಕ್ರಿಯೆ ನೀಡಿದ್ದಾರೆ.
 
ಸುಖ್ಬೀರ್ ಬಾದಲ್ ತಮ್ಮ ಪತ್ನಿಗೆ ಕೇಂದ್ರದಲ್ಲಿ ಸಚಿವ ಸ್ಥಾನ ಕೊಡಿಸುವ ನಿಟ್ಟಿನಲ್ಲಿ ನನ್ನನ್ನು ಮತ್ತು ಸಾದ್ ಪಕ್ಷದ ಸಂಸದ ರತ್ತನ್ ಸಿಂಗ್ ಅಜ್ನಾಲಾ ಅವರನ್ನು ಕಡೆಗೆಣಿಸಲಾಯಿತು. ಶಾಹೀದ್ ಭಗತ್ ಸಿಂಗ್ ಕಾರ್ಯಕ್ರಮದಲ್ಲಿ ನನಗೆ ಮಾತನಾಡಲು ಕೂಡಾ ಅವಕಾಶ ಕೊಡಲಿಲ್ಲ. ಅಮೃತ್‌ಸರ್ ಅಭಿವೃದ್ಧಿ ಕುರಿತಂತೆ ನಡೆದ ಸಭೆಗಳಿಗೂ ಕೂಡಾ ನನಗೆ ಆಹ್ವಾನ ನೀಡಲಿಲ್ಲ ಎಂದು ಆರೋಪಿಸಿದರು. 
 
ತಾವು ಸಂಸದರಾಗಿದ್ದಾಗ ಜಾರಿಗೆ ತರಲು ಉದ್ದೇಶಿಸಿದ್ದ ಸ್ಪೋರ್ಟ್ಸ್ ಕಾಂಪ್ಲೆಕ್ಸ್, ಭಂಡಾರಿ ಸೇತುವೆ ಅಗಲೀಕರಣ, ಸಾಲಿಡ್ ವೇಸ್ಟ್ ಮ್ಯಾನೇಜ್‌ಮೆಂಟ್ ಸಿಸ್ಟಮ್, ಸಿಸಿಟಿವಿ ಕ್ಯಾಮರಾ ಅಳವಡಿಕೆ, ಫ್ಲೈಓವರ್ ಮತ್ತು ಅಂಡರ್‌ಪಾಸ್ ಯೋಜನೆಗಳನ್ನು ಉದ್ದೇಶಪೂರ್ವಕವಾಗಿ ನೆನೆಗುದಿಗೆ ಹಾಕಲಾಯಿತು ಎಂದು ಕಿಡಿಕಾರಿದರು.
 
ಸತತ ಮೂವರು ಅವಧಿಗೆ ಅಮೃತ್‌ಸರ್‌ದಿಂದ ಸಂಸದರಾಗಿ ಜಯಗಳಿಸಿದ್ದರೂ, ಕಳೆದ ಲೋಕಸಭೆ ಚುನಾವಣೆಯಲ್ಲಿ ನನ್ನ ಬದಲಿಗೆ ಅರುಣ್ ಜೇಟ್ಲಿಗೆ ಟಿಕೆಟ್ ನೀಡಲಾಯಿತು ಎಂದು ನವಜೋತ್ ಸಿಂಗ್ ಸಿದ್ದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments