Webdunia - Bharat's app for daily news and videos

Install App

ಭಾರತ ಮೂಲದ ವ್ಯಕ್ತಿಯನ್ನು ಗಲ್ಲಿಗೇರಿಸಿದ ಸಿಂಗಾಪುರ

Webdunia
ಗುರುವಾರ, 27 ಏಪ್ರಿಲ್ 2023 (08:24 IST)
ಸಿಂಗಾಪುರ : ಸುಮಾರು 1 ಕೆಜಿ ತೂಕದಷ್ಟು ಗಾಂಜಾವನ್ನು ಕಳ್ಳಸಾಗಣೆ ಮಾಡಲು ಸಂಚು ರೂಪಿಸಿದ್ದ ಆರೋಪದ ಮೇಲೆ ಭಾರತ ಮೂಲದ ವ್ಯಕ್ತಿಯನ್ನು ಸಿಂಗಾಪುರ ಗಲ್ಲಿಗೇರಿಸಿದೆ.

ಅಂತಾರಾಷ್ಟ್ರೀಯ ಮಟ್ಟದ ವಿರೋಧದ ನಡುವೆಯೂ ಭಾರತ ಮೂಲದ ವ್ಯಕ್ತಿ ತಂಗರಾಜು ಸುಪ್ಪಯ್ಯನನ್ನು (46) ಸಿಂಗಾಪುರದ ಚಾಂಗಿ ಜೈಲು ಸಂಕೀರ್ಣದಲ್ಲಿ ಬುಧವಾರ ಗಲ್ಲಿಗೇರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

2017 ರಲ್ಲಿ ತಂಗರಾಜು 1,017.9 ಗ್ರಾಂ. ಗಾಂಜಾವನ್ನು ಕಳ್ಳಸಾಗಣೆ ಮಾಡುವ ಸಂಚಿನಲ್ಲಿ ತೊಡಗಿದ್ದಕ್ಕಾಗಿ ಶಿಕ್ಷೆಗೆ ಗುರಿಯಾಗಿದ್ದ. ಸಿಂಗಾಪುರದ ಕಾನೂನಿನ ಪ್ರಕಾರ ಗಲ್ಲುಶಿಕ್ಷೆಗೆ ಗುರಿಪಡಿಸಲು ಇರುವ ಪ್ರಮಾಣದ 2 ಪಟ್ಟು ಮಾದಕ ವಸ್ತು ಆತನ ಬಳಿ ಸಿಕ್ಕಿತ್ತು. 2018ರಲ್ಲಿ ಆತನಿಗೆ ಮರಣದಂಡನೆ ವಿಧಿಸಲಾಗಿತ್ತು. ಇದನ್ನು ಮೇಲ್ಮನವಿ ನ್ಯಾಯಾಲಯ ಕೂಡಾ ಬಳಿಕ ಎತ್ತಿ ಹಿಡಿದಿತ್ತು.

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಕಚೇರಿ ಸೇರಿದಂತೆ ಅಂತಾರಾಷ್ಟ್ರೀಯ ಸಂಸ್ಥೆಗಳು ತಂಗರಾಜುವಿನ ಗಲ್ಲುಶಿಕ್ಷೆಯನ್ನು ಮರುಪರಿಶೀಲನೆ ನಡೆಸುವಂತೆ ಸಿಂಗಾಪುರ ಸರ್ಕಾರವನ್ನು ಒತ್ತಾಯಿಸಿವೆ. ಆದರೆ ಇವಾವುದಕ್ಕೂ ಕಿವಿಗೊಡದ ಅಲ್ಲಿನ ಸರ್ಕಾರ ತಂಗರಾಜುನನ್ನು ಗಲ್ಲಿಗೇರಿಸಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮನೆ ಹೊರಗೇ ಗಂಟೆಗಟ್ಟಲೆ ಕಾದು ನಿಂತಿದ್ದ ಅಮ್ಮ, ಮನೆ ಒಳಗಿದ್ದ ಮಗಳು ಪ್ರಿಯಕರನ ಜೊತೆ... Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ರೇಟ್ ಫಿಕ್ಸ್ ಆಗದೆ ಡೇಟ್ ಫಿಕ್ಸ್ ಆಗಲಿಲ್ಲ ಎಂಬ ಆರೋಪಕ್ಕೆ ಕಾಂಗ್ರೆಸ್ ನಾಯಕರೇ ಸಾಕ್ಷಿ: ವಿಜಯೇಂದ್ರ

ಪ್ರತಿಭಟನೆ ಏನೋ ಮಾಡ್ತೀರಾ, ರಾಷ್ಟ್ರಧ್ವಜ ಹೇಗೆ ಹಿಡಿಯಬೇಕು ಗೊತ್ತಿಲ್ವಾ: ಮೆಹಬೂಬಾ ಮುಫ್ತಿಗೆ ನೆಟ್ಟಿಗರ ತರಾಟೆ video

ಹತ್ತಲು ಹೋಗಿ ಬಿದ್ದ ಯುವಕನನ್ನು ಮಾರು ದೂರ ಎಳೆದುಕೊಂಡು ಹೋದ ರೈಲು: ಕೊನೆಗೆ ಏನಾಯ್ತು video

ಮುಂದಿನ ಸುದ್ದಿ