Webdunia - Bharat's app for daily news and videos

Install App

ಸೀತಾರಾಮ್‌ ಯೆಚೂರಿ ಮೃತದೇಹ ಕೆಂಪು ಬಾವುಟದಲ್ಲಿ ಸುತ್ತಿ ಏಮ್ಸ್‌ಗೆ ಹಸ್ತಾಂತರ

Sampriya
ಭಾನುವಾರ, 15 ಸೆಪ್ಟಂಬರ್ 2024 (10:18 IST)
Photo Courtesy X
ನವದೆಹಲಿ: ಈಚೆಗೆ ನಿಧನರಾದ ಕಮ್ಯುನಿಸ್ಟ್‌ ನಾಯಕ ಸೀತಾರಾಮ್‌ ಯೆಚೂರಿ ಅವರ ಮೃತದೇಹವನ್ನು ಸಿಪಿಐ (ಎಂ) ಪಕ್ಷದ ಕೆಂಪು ಬಾವುಟದಲ್ಲಿ ಸುತ್ತಿ ಶನಿವಾರ ಇಲ್ಲಿನ ಏಮ್ಸ್‌ಗೆ ಹಸ್ತಾಂತರಿಸಲಾಯಿತು.

72 ವರ್ಷದ ಸಿಪಿಎಂನ ಹಿರಿಯ ನಾಯಕ ಸೀತಾರಾಮ್‌ ಯೆಚೂರಿ ಶ್ವಾಸಕೋಶದ ಸೋಂಕಿನಿಂದ ಗುರುವಾರ ನಿಧನರಾದರು. ದೆಹಲಿಯ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಪ್ರಧಾನ ಕಚೇರಿಯಲ್ಲಿ ಯೆಚೂರಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಮೃತದೇಹ ಹಸ್ತಾಂತರದ ವೇಳೆ ಲಾಲ್‌ ಸಲಾಮ್‌ ಎನ್ನುವ ಘೋಷಣೆ ಮೊಳಗಿತು.

ಕಾಂಗ್ರೆಸ್‌ ಮುಖಂಡರಾದ ಸೋನಿಯಾ ಗಾಂಧಿ, ಜೈರಾಮ್‌ ರಮೇಶ್‌, ರಾಜೀವ್‌ ಶುಕ್ಲಾ ಹಾಗೂ ಎನ್‌ಸಿಪಿ ನಾಯಕ ಶರದ್‌ ಪವಾರ್‌, ಸಚಿನ್‌ ಪೈಲಟ್‌ ಸೇರಿದಂತೆ ಹಲವರು ಅಗಲಿದ ನಾಯಕನಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

ಚೀನಾದ ರಾಯಭಾರಿ ಕ್ಸು ಫೀಹಾಂಗ್, ವಿಯೆಟ್ನಾಂ ರಾಯಭಾರಿ ನ್ಗುಯೆನ್ ಥಾನ್ ಹೈ, ಪ್ಯಾಲೆಸ್ಟೀನ್‌ ರಾಯಭಾರಿ ಅದ್ನಾನ್ ಅಬು ಅಲ್ಹೈಜಾ, ನೇಪಾಳದ ಮಾಜಿ ಪ್ರಧಾನಿ ಮಾಧವ್ ಕುಮಾರ್ ನೇಪಾಳ, ಮಾಜಿ ಮುಖ್ಯ ಮಾಹಿತಿ ಆಯುಕ್ತ (ಸಿಐಸಿ) ವಜಾಹತ್ ಹಬೀಬುಲ್ಲಾ ಮತ್ತು ಇತಿಹಾಸಕಾರ ರೊಮಿಲಾ ಥಾಪರ್ ಕೂಡ ಯೆಚೂರಿ ಅವರ ಅಂತಿಮ ದರ್ಶನ ಪಡೆದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕಾಂಗ್ರೆಸ್ ಅವಧಿಯಲ್ಲಿ ಮಿತಿಮೀರಿದೆ ಕಮಿಷನ್: ನಮ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿದ್ರಿ ಆರ್ ಅಶೋಕ್ ಆಕ್ರೋಶ

ಗಣೇಶನ ಮೂರ್ತಿಯನ್ನು ಮನೆಯ ಯಾವ ದಿಕ್ಕಿನಲ್ಲಿ ಕೂರಿಸಬೇಕು ಇಲ್ಲಿದೆ ವಿವರ

ಥೈರಾಯ್ಡ್ ಇದ್ದರೆ ಜೀವನ ಪರ್ಯಂತ ಮಾತ್ರೆ ತೆಗೆದುಕೊಳ್ಳಬೇಕೇ: ಡಾ ಪದ್ಮಿನಿ ಪ್ರಸಾದ್ ಏನು ಹೇಳಿದ್ದರು

ಗಣೇಶ ಹಬ್ಬಕ್ಕೆ ಮತ್ತೆ ಬಂತು ಕಠಿಣ ರೂಲ್ಸ್: ಗಣೇಶನನ್ನು ಕೂರಿಸುವವರು ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments