Webdunia - Bharat's app for daily news and videos

Install App

ದೇಶವನ್ನೇ ಬೆಚ್ಚಿಬೀಳಿಸಿದ ಪುಲ್ವಾಮಾ ದಾಳಿಗೆ ಆರು ವರ್ಷ: ಹುತಾತ್ಮರನ್ನು ಸ್ಮರಿಸಿ ಮೋದಿ ಹೇಳಿದ್ದೇನು

Sampriya
ಶುಕ್ರವಾರ, 14 ಫೆಬ್ರವರಿ 2025 (15:05 IST)
Photo Courtesy X
ನವದೆಹಲಿ: ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಆರು ವರ್ಷಗಳ ಹಿಂದೆ ಭಾರತೀಯ ಸೇನೆಯ ಭದ್ರತಾಪಡೆಗಳ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ 40 ಸಿಆರ್‌ಪಿಎಫ್ ಯೋಧರು ಹುತಾತ್ಮರಾಗಿದ್ದರು. ಈ ಘಟನೆಯು ಭಾರತ ದೇಶವನ್ನೇ ಬೆಚ್ಚಿಬೀಳಿಸಿತ್ತು. ಈ ಕರಾಳ ನೆನಪಿಗೆ ಈಗ ಆರು ವರ್ಷ.

2019ರ ಫೆಬ್ರವರಿ 1ರಂದು 40 ಸಿಆರ್‌ಪಿಎಫ್ ಅಧಿಕಾರಿಗಳು ಹುತಾತ್ಮರಾಗಿದ್ದರು.  ಜೈಶ್-ಎ-ಮೊಹಮ್ಮದ್ ಸಂಘಟನೆಯ ಉಗ್ರಗಾಮಿಗಳು ನಡೆಸಿದ್ದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಸೇನೆಯ ವಾಹನದಲ್ಲಿ ಹೋಗುತ್ತಿದ್ದ ಯೋಧರು ಕ್ಷಣಾರ್ಧದಲ್ಲಿ ಜೀವ ಕಳೆದುಕೊಂಡರು.

ಪುಲ್ವಾಮದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಸಿಆರ್‌ಪಿಎಫ್ ಯೋಧರಿಗೆ ಪ್ರಧಾನಿ ನರೇಂದ್ರ ಮೋದಿ ಶ್ರದ್ಧಾಂಜಲಿ ಸಲ್ಲಿಸಿ, ರಾಷ್ಟ್ರಕ್ಕಾಗಿ ಅವರ ಅಚಲ ಸಮರ್ಪಣೆಯನ್ನು ಮುಕ್ತಕಂಠದಲ್ಲಿ ಶ್ಲಾಘಿಸಿದರು.

ಅಮೆರಿಕಾ ಪ್ರವಾಸದಲ್ಲಿರುವ  ಮೋದಿ ಅವರು ಎಕ್ಸ್‌ನಲ್ಲಿ ಹೇಳಿಕೆಯನ್ನು ಪೋಸ್ಟ್‌ ಮಾಡಿ, 2019 ರಲ್ಲಿ ಪುಲ್ವಾಮಾದಲ್ಲಿ ನಾವು ಕಳೆದುಕೊಂಡ ಧೈರ್ಯಶಾಲಿ ವೀರರಿಗೆ ನಮನಗಳು. ಮುಂಬರುವ ಪೀಳಿಗೆಗಳು ಅವರ ತ್ಯಾಗ ಮತ್ತು ರಾಷ್ಟ್ರಕ್ಕಾಗಿ ಅವರ ಅಚಲವಾದ ಸಮರ್ಪಣೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಶ್ಲಾಘಿಸಿದ್ದಾರೆ.

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಸೇರಿದಂತೆ ಗಣ್ಯರು ಹುತಾತ್ಮರಿಗೆ ನಮನ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಆಪರೇಷನ್ ಸಿಂಧೂರ್ ಚರ್ಚೆ ವೇಳೆ ಸಂಸತ್ತಿನಲ್ಲಿ ರಾಜನಾಥ್ ಸಿಂಗ್, ರಾಹುಲ್ ಗಾಂಧಿ ವಾಗ್ಯುದ್ಧ

ಕರ್ನಾಟಕದ ಇತಿಹಾಸದಲ್ಲೇ ಇಂತಹದ್ದೊಂದು ರೈತ ವಿರೋಧಿ ಸರ್ಕಾರ ನೋಡಿಲ್ಲ: ಆರ್ ಅಶೋಕ್

ಪಹಲ್ಗಾಮ್ ದಾಳಿಕೋರರು ಪಾಕಿಸ್ತಾನದಿಂದಲೇ ಬಂದಿರುವುದಕ್ಕೆ ಏನು ಪ್ರೂಫ್: ಕೈ ನಾಯಕ ಚಿದಂಬರಂ

Operation Mahadev: ಪಹಲ್ಗಾಮ್ ಕುಕೃತ್ಯ ನಡೆಸಿದ ಮೂವರು ಶಂಕಿತ ಉಗ್ರರು ಮಟಾಷ್

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ಮುಂದಿನ ಸುದ್ದಿ
Show comments