Webdunia - Bharat's app for daily news and videos

Install App

ಜ್ಞಾನವಾಪಿ ಮಸೀದಿಯಲ್ಲಿ ಹಿಂದೂಗಳಿಗೆ ಅವಕಾಶ ನೀಡಿರುವುದಕ್ಕೆ ಎಸ್.ಎಲ್. ಭೈರಪ್ಪ ಬರೆದ ಚೆಂದದ ಸಾಲು

Krishnaveni K
ಗುರುವಾರ, 1 ಫೆಬ್ರವರಿ 2024 (09:40 IST)
ಬೆಂಗಳೂರು: ವಿವಾದಿತ ಜ್ಞಾನವಾಪಿ ಮಸೀದಿ ಆವರಣದ ನೆಲಮಹಡಿಯಲ್ಲಿ ಹಿಂದೂಗಳಿಗೆ ಪೂಜೆಗೆ ಅವಕಾಶ ನೀಡುವಂತೆ ವಾರಣಾಸಿ ಜಿಲ್ಲಾ ನ್ಯಾಯಾಲಯ ಮಹತ್ವದ ಆದೇಶ ನೀಡುತ್ತಿದ್ದಂತೇ ಸಾಹಿತಿ ಎಸ್‍.ಎಲ್. ಭೈರಪ್ಪ ಚೆಂದದ ಸಾಲೊಂದನ್ನು ಬರೆದು ತೀರ್ಪು ಸ್ವಾಗತಿಸಿದ್ದಾರೆ.

ನೆಲಮಹಡಿಯ ನಾಲ್ಕು ಕೊಠಡಿಗಳ ಪೈಕಿ ವ್ಯಾಸ್ ಜಿ ತಹಕಾನದಲ್ಲಿ ಪೂಜೆಗೆ ಅನುಮತಿ ನೀಡಬೇಕೆಂದು ತೀರ್ಪಿನಲ್ಲಿ ಹೇಳಲಾಗಿದೆ. ಶೈಲೇಂದ್ರ ಕುಮಾರ್ ಪಾಠಕ್ ವ್ಯಾಸ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ ನ್ಯಾಯಮೂರ್ತಿ ಡಾ. ಅಜಯ್ ಕೃಷ್ಣ ವಿಶ್ವೇಶ ನೇತೃತ್ವದ ಪೀಠ ಇಂತಹದ್ದೊಂದು ಮಹತ್ವದ ಅದೇಶ ನೀಡಿದೆ. ಈ ಮೂಲಕ ಸುದೀರ್ಘ ಕಾಲದಿಂದ ನಡೆಯುತ್ತಿದ್ದ ಕಾಶಿ ವಿಶ್ವನಾಥ ದೇವಾಲಯಕ್ಕೆ ಅಂಟಿಕೊಂಡಿದ್ದ ಮಸೀದಿಯ ಒಡೆತದನ ಕುರಿತಂತೆ ಮಹತ್ವದ ಆದೇಶ ಹೊರಬಿದ್ದಂತಾಗಿದೆ. ಆದರೆ ಈ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುವುದಾಗಿ ಅಂಜುಮಾನ್ ಇನ್ತೆಜಾಮಿಯ ಮಸೀದಿ ಹೇಳಿದೆ.

ಜ್ಞಾನವಾಪಿ ಮಸೀದಿ ಹಿನ್ನಲೆ
ಸತ್ಯಯುಗದಿಂದಲೂ ಸ್ವಯಂಭೂ ಆದಿ ವಿಶ್ವೇಶ್ವರ ದೇಗುಲವಿತ್ತು ಎಂಬ ನಂಬಿಕೆಯಿದೆ. 1669 ರಲ್ಲಿ ಮೊಘಲ್ ದೊರೆ ಔರಂಗಜೇಬ  ದೇಗುಲವನ್ನು ಕೆಡವಿ ಮಸೀದಿ ನಿರ್ಮಿಸಿದ್ದ. ಆದರೆ ಇಲ್ಲಿ ಹಿಂದೂ ದೇವಾಲಯವಿತ್ತು ಎನ್ನುವುದಕ್ಕೆ ಈಗಲೂ ಕೆಲವು ಕುರುಹುಗಳಿವೆ. 1991 ರಲ್ಲಿ ಮೊದಲ ಬಾರಿಗೆ ಪ್ರಕರಣ ಸಂಬಂಧ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆಯಾಗಿತ್ತು. ಇಷ್ಟು ಸುದೀರ್ಘ ಅವಧಿವರೆಗೆ ವಿಚಾರಣೆ ನಡೆದು ಇದೀಗ ತೀರ್ಪು ಬಂದಿದೆ.

ಎಸ್.ಎಲ್. ಭೈರಪ್ಪ ಚೆಂದದ ಒಕ್ಕಣೆ
ಜ್ಞಾನವಾಪಿ ಮಸೀದಿ ಆವರಣದಲ್ಲಿ ಕಾಶಿ ವಿಶ್ವೇಶ್ವರನಿಗೆ ಪೂಜೆಗೆ ಅವಕಾಶ ನೀಡಿರುವ ಕೋರ್ಟ್ ತೀರ್ಪಿನ ಬಗ್ಗೆ ಸಾಹಿತಿ ಎಸ್.ಎಲ್. ಭೈರಪ್ಪ ಸೋಷಿಯಲ್ ಮೀಡಿಯಾ ಎಕ್ಸ್ ನಲ್ಲಿ ಚೆಂದದ ಸಾಲೊಂದನ್ನು ಬರೆದಿದ್ದಾರೆ. ಅದು ಹೀಗಿದೆ. ‘ಜ್ಞಾನವಾಪಿ ಮಸೀದಿಯು ಆಕ್ರಾಮಕ ಅಹಂಕಾರದ ಪ್ರತೀಕವೆಂಬಂತೆ ಅಡರಿ ನಿಂತಿತ್ತು. ತನ್ನ ದಡದಲ್ಲಿ ಅಡರಿಕೊಂಡಿರುವ ಅದರ ಪರಿವಿಯೇ ಇಲ್ಲವೆಂಬಂತೆ ನದಿಯು ನಿಂತಿತ್ತು. ಗಂಗೆ ಸದ್ದು ಮಾಡುವ ನದಿಯಲ್ಲ, ನಿಶ್ಯಬ್ಧವಾಗಿ ಒಳಗೇ ಚಲಿಸುವ ಸಂಸ್ಕೃತಿ’ ಎಂದು ಬರೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments