Webdunia - Bharat's app for daily news and videos

Install App

ಸ್ಮೃತಿ ಇರಾನಿ ಅಮಿತಾಭ್ ಬಚ್ಚನ್ ಆಗಲು ಹೊರಡ್ತಾರೆ, ಕೊನೆಗೆ ಆಗೋದು ವಿಲನ್!

Webdunia
ಶನಿವಾರ, 6 ಏಪ್ರಿಲ್ 2019 (09:31 IST)
ನವದೆಹಲಿ: ರಾಹುಲ್ ಗಾಂಧಿ ವಿರುದ್ಧ ಅಮೇಠಿಯಲ್ಲಿ ಬಿಜೆಪಿಯಿಂದ ಕಣಕ್ಕಿಳಿಯುತ್ತಿರುವ ಕೇಂದ್ರ ಸಚಿವೆ ಸ್ಮೃತಿ ಇರಾನಿ ಬಗ್ಗೆ ಕಾಂಗ್ರೆಸ್ ಲೇವಡಿ ಮಾಡಿದ್ದಾರೆ.


ಅಮೇಠಿಯಲ್ಲಿ ರಾಹುಲ್ ವಿರುದ್ಧ ವಾಗ್ದಾಳಿ ನಡೆಸಿದ ಸ್ಮೃತಿ ಇರಾನಿ ಅಮಿತಾಬ್ ಬಚ್ಚನ್ ಆಗಲು ಹೊರಡ್ತಾರೆ. ಆದರೆ ಕೊನೆಗೆ ಅವರು ವಿಲನ್ ಆಗುತ್ತಾರೆ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ಲೇವಡಿ ಮಾಡಿದ್ದಾರೆ.

‘ಸ್ಮೃತಿ ಇರಾನಿಯ ಮನದಲ್ಲಿರುವ ಸೋಲಿನ ಭಯ ನಮಗೆ ಅರ್ಥವಾಗುತ್ತದೆ. ಆಕೆಗೆ ಇದುವರೆಗೆ ಒಂದೇ ಒಂದು ಪಂಚಾಯತ್ ಚುನಾವಣೆ ಗೆಲ್ಲಲು ಸಾಧ್ಯವಾಗಿಲ್ಲ. ಈಗ ಮೂರನೇ ಸೋಲಿಗೆ ಸಿದ್ಧತೆ ನಡೆಸಿದ್ದಾರೆ. ಹಾಗಿದ್ದರೂ ಅವರಿಗೆ ರಾಜ್ಯ ಸಭೆ ಟಿಕೆಟ್ ನೀಡಿ ಮೋದಿ ಗೆಲ್ಲಿಸುತ್ತಾರೆ. ಹಾಗೆ ಭಯ ಬೇಕಾಗಿಲ್ಲ. ಆಕೆ ಹೆಚ್ಚಾಗಿ ಕೋಪದಲ್ಲಿರುತ್ತಾರೆ, ಅಮಿತಾಬ್ ಬಚ್ಚನ್ ರನ್ನು ಅನುಕರಿಸಲು ಹೋಗುತ್ತಾರೆ. ಆದರೆ ವಿಪರ್ಯಾಸವೆಂದರೆ ಕತೆಯಲ್ಲಿನ ಖಳನಾಯಕಿಯಾಗುತ್ತಾರೆ’ ಎಂದು ರಣದೀಪ್ ವ್ಯಂಗ್ಯ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments