Select Your Language

Notifications

webdunia
webdunia
webdunia
webdunia

ಸ್ಮೃತಿ ಇರಾನಿಗೆ ಹೆಚ್ಚುವರಿಯಾಗಿ ವಾರ್ತಾ ಮತ್ತು ಪ್ರಸಾರ ಖಾತೆ ಹೊಣೆ

ಸ್ಮೃತಿ ಇರಾನಿಗೆ ಹೆಚ್ಚುವರಿಯಾಗಿ ವಾರ್ತಾ ಮತ್ತು ಪ್ರಸಾರ ಖಾತೆ ಹೊಣೆ
ನವದೆಹಲಿ , ಮಂಗಳವಾರ, 18 ಜುಲೈ 2017 (15:49 IST)
ಕೇಂದ್ರದ ನಗರಾಭಿವೃದ್ಧಿ ಸಚಿವರಾಗಿದ್ದ ವೆಂಕಯ್ಯನಾಯ್ಡು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಜವಳಿ ಖಾತೆ ಸಚಿವೆ ಸ್ಮೃತಿ ಇರಾನಿಗೆ ಹೆಚ್ಚುವರಿಯಾಗಿ ವಾರ್ತಾ ಮತ್ತು ಪ್ರಸಾರ ಖಾತೆಯ ಹೊಣೆ ನೀಡಲಾಗಿದೆ. 
 
ಗ್ರಾಮೀಣ ಅಭಿವೃದ್ಧಿ ಖಾತೆ ಸಚಿವ ನರೇಂದ್ರ ಸಿಂಗ್ ತೋಮರ್‌ಗೆ ನಗರಾಭಿವೃದ್ಧಿ ಖಾತೆಯನ್ನು ಹೆಚ್ಚುವರಿಯಾಗಿ ವಹಿಸಲಾಗಿದೆ.
 
ಬಿಜೆಪಿ ಸಂಸದೀಯ ಸಮಿತಿಯಿಂದ ಎನ್‌ಡಿಎ ಮೈತ್ರಿಕೂಟದ ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದರಿಂದ ವೆಂಕಯ್ಯ ನಾಯ್ಡು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
 
ಪ್ರಧಾನಿ ಮೋದಿಯ ಸೂಚನೆ ಮೇರೆಗೆ ಜವಳಿಖಾತೆ ಸಚಿವೆ ಸ್ಮೃತಿ ಇರಾನಿ ಮತ್ತು ನರೇಂದ್ರ ತೋಮರ್ ಅವರಿಗೆ ಹೆಚ್ಚುವರಿಯಾಗಿ ಒಂದೊಂದು ಖಾತೆಗಳು ದೊರೆತಿವೆ ಎಂದು ಪ್ರಧಾನಮಂತ್ರಿ ಕಚೇರಿಯ ಅಧಿಕಾರಿಗಳು ಖಚಿತಪಡಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಫ್ರೀಡಂ ಫೈಟರ್ ಬಾಲಗಂಗಾಧರ ತಿಲಕ್ ಮರಿಮೊಮ್ಮಗನ ವಿರುದ್ಧ ರೇಪ್ ಕೇಸ್ ದಾಖಲು