Webdunia - Bharat's app for daily news and videos

Install App

ಹಿಮಪಾತಕ್ಕೆ 14 ಯೋಧರು ಹುತಾತ್ಮ

Webdunia
ಶುಕ್ರವಾರ, 27 ಜನವರಿ 2017 (11:34 IST)
ಜಮ್ಮು ಮತ್ತು ಕಾಶ್ಮೀರದಲ್ಲಿನ ಸೇನಾ ಶಿಬಿರದ ಮೇಲೆ ಸಂಭವಿಸಿದ ಹಿಮಪಾತದಲ್ಲಿ ಸಾವನ್ನಪ್ಪಿದ ಸೈನಿಕರ ಸಂಖ್ಯೆ 14ಕ್ಕೇರಿದೆ. ಅದರಲ್ಲಿ ಹಾಸನದ ಸೈನಿಕನೂ ಇದ್ದಾನೆ.

ಗಡಿ ನಿಯಂತ್ರಣ ರೇಖೆಯ ಬಂಡಿಪೋರಾ ಜಿಲ್ಲೆಯ ಗುರೇಜ್ ಹಾಗೂ ಸೋನ್‌ಮಾರ್ಗ್ ಸೆಕ್ಟರ್‌ಗಳಲ್ಲಿರುವ ಸೇನಾ ಶಿಬಿರಗಳ ಮೇಲೆ ಜನವರಿ 25 ರಂದು ಹಿಮಪಾತ ಸಂಭವಿಸಿತ್ತು. 
 
ಪ್ರತಿಕೂಲ ಹವಾವಾನ ಲೆಕ್ಕಿಸದೇ ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿತ್ತು. ಕಿರಿಯ ಅಧಿಕಾರಿ ಸೇರಿದಂತೆ 7 ಯೋಧರನ್ನು ರಕ್ಷಣೆ ಮಾಡುವಲ್ಲಿ ಸೇನೆ ಯಶಸ್ವಿಯಾಗಿತ್ತು. 
 
ಇಂದು ರಕ್ಷಣಾ ಕಾರ್ಯಾಚರಣೆ ಕೊನೆಗೊಂಡಿದ್ದು ಒಟ್ಟು 14 ಶವಗಳನ್ನು ಹೊರತೆಗೆಯಲಾಗಿದೆ.
 
ಮೃತಪಟ್ಟವರಲ್ಲಿ ಹಾಸನದ ಶಾಂತಿ ಗ್ರಾಮ ಹೋಬಳಿ ದೇವಿಹಳ್ಳಿ ನಿವಾಸಿ ಸೈನಿಕ ಸಂದೀಪ್ (28) ಕೂಡ ಇದ್ದು ಮುಂದಿನ ವಾರ ಈತ ಮನೆಗೆ ಮರಳುವವನಿದ್ದ ಎಂದು ತಿಳಿದು ಬಂದಿದೆ. 8 ವರ್ಷಗಳ ಹಿಂದೆ ಸೈನ್ಯ ಸೇರಿದ್ದ ಈತನಿಗೆ ಫೆಬ್ರವರಿ 22ಕ್ಕೆ ಮದುವೆ ನಿಶ್ಚಯವಾಗಿತ್ತು. 
 
ದುರ್ಘಟನೆಗೆ ಬಲಿಯಾಗುವ ಮುನ್ನ ಮನೆಗೆ ಫೋನ್ ಕರೆ ಮಾಡಿದ್ದ ಸಂದೀಪ್ ಹಿಮಪಾತವಾಗುತ್ತಿರುವ ಬಗ್ಗೆ ಹೇಳಿದ್ದ. ಫೆಬ್ರವರಿ 8 ಅಥವಾ 9 ಕ್ಕೆ ಮನೆಗೆ ಬರುತ್ತೇನೆ. ಶಬರಿಮಲೆಗೆ ಹೋಗಬೇಕು ಎಂದಿದ್ದ ಎಂದು ಆತನ ಸಂಬಂಧಿಕರು ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ 52ನೇ ಸಿಜೆಐ ಆಗಿ ನೇಮಕಗೊಂಡ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಹಿನ್ನಲೆ ಇಲ್ಲಿದೆ

Prajwal Revanna: ವಕೀಲರನ್ನೂ ನೇಮಿಸಿಕೊಂಡಿಲ್ಲ: ಪ್ರಜ್ವಲ್ ರೇವಣ್ಣ ಪರಿಸ್ಥಿತಿ ಏನಾಗಿದೆ ನೋಡಿ

PM Modi: ಉಗ್ರರ ದಮನಕ್ಕೆ ಸೇನೆಗೆ ಸಂಪೂರ್ಣ ಪವರ್ ಕೊಟ್ಟ ಪ್ರಧಾನಿ ಮೋದಿ

K Annamalai: ಮೋದಿ, ಅಮಿತ್ ಶಾ ಹೆಸರಲ್ಲಿ ಅಮೆರಿಕದಲ್ಲಿ ಅಣ್ಣಾಮಲೈ ವಿಶೇಷ ಪೂಜೆ

ಉಗ್ರರ ಹಿಮ್ಮೆಟ್ಟಿಸಲು ಐಕ್ಯತೆ ಅವಶ್ಯಕ: ಮಾಜಿ ಪ್ರಧಾನಿ ದೇವೇಗೌಡ

ಮುಂದಿನ ಸುದ್ದಿ
Show comments