Webdunia - Bharat's app for daily news and videos

Install App

ಮಹಿಳೆಯರ ಬಯಲು ಶೌಚದ ಫೋಟೋ ತೆಗೆಯಲು ತಡೆದ ಸಾಮಾಜಿಕ ಕಾರ್ಯಕರ್ತನನ್ನೇ ಸಾಯಿಸಿದ ಯುವಕರು

Webdunia
ಶನಿವಾರ, 17 ಜೂನ್ 2017 (14:26 IST)
ಜೈಪುರ :ಜೂ-17: ಮನೆಯಲ್ಲಿ ಶೌಚಾಲಯ ಇಲ್ಲದ ಕಾರಣಕ್ಕೆ ಬಯಲಲ್ಲಿ ಶೌಚಮಾಡುತ್ತಿದ್ದ ಮುಸ್ಲಿಂ ಮಹಿಳೆಯರ  ಫೋಟೋ ಕ್ಲಿಕ್ಕಿಸಲು ತೊಡಗಿದ ಮುನಿಸಿಪಾಲಿಟಿ ಕಾರ್ಮಿಕರನ್ನು ತಡೆದ ಸಾಮಾಜಿಕ ಕಾರ್ಯಕರ್ತನೊಬ್ಬನನ್ನು ಅದೇ ಕಾರ್ಮಿಕರು ಹೊಡೆದು ಚಚ್ಚಿ ಸಾಯಿಸಿದ ಘಟನೆ ರಾಜಸ್ಥಾನದಲ್ಲಿ ನಡೆದಿದೆ.  
 
ಇಲ್ಲಿನ ಪ್ರತಾಪಗಢ ಜಿಲ್ಲೆಯ ಮನೆಯಲ್ಲಿ  ಶೌಚಾಲಯ ಇಲ್ಲದ ಕಾರಣಕ್ಕೆ ಇಲ್ಲಿ ಮುಸ್ಲಿಂ ಮಹಿಳೆಯರು ಅನಿವಾರ್ಯವಾಗಿ ಬಯಲಲ್ಲೇ ಶೌಚಕಾರ್ಯ ಮುಗಿಸಿಲು ಬಂದಿದ್ದರು. ಇವರು ಶೌಚಕಾರ್ಯದಲ್ಲಿ ತೊಡಗಿದ್ದಾಗ ಅವರ ಫೋಟೋ ಮತ್ತು ವಿಡಿಯೋ ತೆಗೆಯಲು ಮುಂದಾದ ಮುನಿಸಿಪಾಲಿಟಿ ಕಾರ್ಮಿಕರನ್ನು ಸಾಮಾಜಿಕ ಕಾರ್ಯಕರ್ತ ಜಾಫ‌ರ್‌ ಹುಸೇನ್‌ ಎಂಬುವವರು ತಡೆದಿದ್ದಾರೆ. ಇದರಿಂದ ರೊಚ್ಚಿಗೆದ್ದ ಕಾರ್ಮಿಕರು ಜಾಫರ್ ನನ್ನು ಹೊಡೆದು ಸಾಯಿಸಿದ್ದಾರೆ.
 
ಅಸಲಿಗೆ ನಗರ ಪರಿಷತ್‌ ಕಮಿಷನರ್‌ ಅಶೋಕ್‌ ಜೈನ್‌, ಬಗ್‌ವಾಸಾ ಕಾಚಿ ಗ್ರಾಮದಲ್ಲಿ ಬಯಲು ಬಹಿರ್ದೆಶೆಯಲ್ಲಿ ನಿರತರಾಗಿದ್ದ ಮುಸ್ಲಿಂ ಮಹಿಳೆಯರ ಫೋಟೋ ವಿಡಿಯೋ ತೆಗೆಯುವಂತೆ ಮುನಿಸಿಪಲ್‌ ಕೌನ್ಸಿಲ್‌ ಕಾರ್ಮಿಕರಿಗೆ ಆದೇಶಿಸಿದ್ದರಂತೆ ಹೀಗೆಂದು ಸಿಪಿಎಂ ಆರೋಪಿಸಿದೆ. ಸಾಮಾಜಿಕ ಕಾರ್ಯಕರ್ತನನ್ನು ಹೊಡೆದು ಸಾಯಿಸಿದ ಕಾರ್ಮಿಕ ಯುವಕರಿಗೆ ಕಠಿಣ ಶಿಕ್ಷೆ ನೀಡುವಂತೆಯೂ ಆಗ್ರಹಿಸಿದೆ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಸಾವಿಗೆ ಪತ್ನಿ, ಅತ್ತೆಯೇ ಕಾರಣ: ನ್ಯಾಯಕೊಡಿಸಲು ಸಾಧ್ಯವಾಗದಿದ್ದರೆ ಚಿತಾಭಸ್ಮ ಚರಂಡಿಗೆ ಎಸೆಯಿರಿ, ವಿಡಿಯೋ ಮಾಡಿಟ್ಟು ಟೆಕ್ಕಿ ಸಾವು

ಕಸದಲ್ಲಿ ಶಿಶುವಿನ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಅಪ್ರಾಪ್ತೆಗೆ ಗರ್ಭಪಾತ ಮಾಡಿಸಿದ್ದ ಆಟೊ ಚಾಲಕ ಅಂದರ್‌

ಜಮ್ಮು ಕಾಶ್ಮೀರದಲ್ಲಿ ಮೇಘ ಸ್ಫೋಟಕ್ಕೆ ಜನರು ತತ್ತರ: ಹಲವು ಮನೆಗಳು ಧ್ವಂಸ, ಐವರು ಸಾವು

‌ಮುಂದಿನ ಒಂದು ವಾರ ರಾಜ್ಯದಲ್ಲಿ ಗುಡುಗು ಸಹಿತ ಮಳೆ: 24 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್‌ ಘೋಷಣೆ

ಐ ಬ್ರೊ ಮಾಡಿಸಿಕೊಳ್ಳಲು ಪಾರ್ಲರ್‌ಗೆ ಹೋಗಿದ್ದ ಪತ್ನಿಯ ಜಡೆಯನ್ನೇ ಕತ್ತರಿಸಿದ ಪಾಪಿ ಪತಿ

ಮುಂದಿನ ಸುದ್ದಿ
Show comments