Webdunia - Bharat's app for daily news and videos

Install App

1999ರ ಮೃದು ಬಿಜೆಪಿ ಸರಕಾರದಿಂದ ಭಯೋತ್ಪಾದನೆಗೆ ಅಡಿಗಲ್ಲು: ಕಾಂಗ್ರೆಸ್ ಆರೋಪ

Webdunia
ಶುಕ್ರವಾರ, 3 ಜುಲೈ 2015 (19:51 IST)
ಇಂಡಿಯನ್ ಏರ್‌ಲೈನ್ಸ್ ಹೈಜಾಕ್ ಮಾಡಿದ ಸಂದರ್ಭದಲ್ಲಿ ಮೂವರು ಉಗ್ರರನ್ನು ಬಿಡುಗಡೆ ಮಾಡಿದ್ದ 1999ರಲ್ಲಿದ್ದ ಬಿಜೆಪಿಯ ಮೃದು ಸರಕಾರ, ಭಯೋತ್ಪಾದನೆಯ ಶಂಕುಸ್ಥಾಪನೆಗೆ ಅಡಿಗಲ್ಲು ಹಾಕಿತು ಎಂದು ಕಾಂಗ್ರೆಸ್ ಆರೋಪಿಸಿದೆ.  
 
ಬಿಜೆಪಿ ನೇತೃತ್ವದ ಮೃದು ಸರಕಾರ ಅಧಿಕಾರದಲ್ಲಿದ್ದಾಗ ಮೂವರು ಉಗ್ರರನ್ನು ಬಿಡುಗಡೆ ಮಾಡಿದ ನಂತರ ದೇಶದಲ್ಲಿ ಮಾತ್ರವಲ್ಲ ವಿದೇಶದಲ್ಲೂ ಭಯೋತ್ಪಾದನೆಗೆ ಶಂಕುಸ್ಥಾಪನೆ ನೆರವೇರಿಸಿದಂತಾಯಿತು ಎಂದು ಕಾಂಗ್ರೆಸ್ ವಕ್ತಾರ ಟಾಮ್ ವಡಕ್ಕನ್ ಹೇಳಿದ್ದಾರೆ. 
 
ಬಿಜೆಪಿ ಪಕ್ಷ ನಕಲಿ ಸುಳ್ಳು ರಾಷ್ಟ್ರೀಯತೆಯ ಮತ್ತು ಸುಳ್ಳು ದೇಶಭಕ್ತಿಯ ಮುಖವಾಡ ಹೊಂದಿದೆ. ಮೂವರು ಉಗ್ರರನ್ನು ಬಿಡುಗಡೆ ಮಾಡಿದ ಬಿಜೆಪಿ ಸರಕಾರ, ದೇಶದಲ್ಲಿ ಮಾತ್ರವಲ್ಲ ವಿದೇಶದಲ್ಲೂ ಭಯೋತ್ಪಾದನೆ ಹರಡಲು ನೆರವಾದಂತಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
 
ಲಷ್ಕರ್ ಉಗ್ರರನ್ನು ಬಿಡುಗಡೆಗೊಳಿಸಿದ ನಂತರ ಸಂಸತ್ತಿನ ಮೇಲೆ ದಾಳಿ ಮತ್ತು ಮುಂಬೈ ದಾಳಿಗಳಂತಹ ಪರಿಸ್ಥಿತಿಯನ್ನು ಎದುರಿಸಬೇಕಾಯಿತು ಎಂದರು. 
 
ದೇಶದ್ರೋಹಿಗಳಿಗೆ, ಭಯೋತ್ಪಾದಕರಿಗೆ ಮತ್ತು ಅಪರಾಧಿಗಳಿಗೆ ನೆರವು ನೀಡಿದ ಬಿಜೆಪಿ ಸರಕಾರ ಬೇಷರತ್ತಾಗಿ ದೇಶದ ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್ ಮುಖಂಡ ಟಾಮ್ ವಡಕ್ಕನ್ ಒತ್ತಾಯಿಸಿದ್ದಾರೆ. 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments